ಕುಡಿವ ನೀರು ಪೋಲಾಗುತ್ತಿದ್ದರೂ ನಗರಸಭೆ ಕ್ರಮವಿಲ್ಲ


Team Udayavani, May 19, 2018, 12:52 PM IST

z-40.jpg

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ನಿರ್ಲಕ್ಷ್ಯದಿಂದ ಅಮೂಲ್ಯವಾದ ಶುದ್ಧ ಕುಡಿಯುವ ನೀರು ಪೋಲಾಗುವುದು ಮತ್ತೆ ಶುರುವಾಗಿದೆ. ನಗರದ ವಿವಿಧಡೆಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಪೈಪ್‌ಲೈನ್‌ ಒಡೆದು ಕುಡಿಯುವ ನೀರು ರಸ್ತೆಗಳಲ್ಲಿಯೆ ಹರಿದು ಹೋಗುತ್ತಿರುವುದು ಎದ್ದು ಕಾಣುತ್ತಿದ್ದರೂ ನಗರಸಭೆ ಅಧಿಕಾರಿಗಳು ಮಾತ್ರ ಇತ್ತಕಡೆ ತಲೆ ಹಾಕಿಲ್ಲ.

ನಗರದ ಶಿಡ್ಲಘಟ್ಟ ರಸ್ತೆ, ವಾಪಸಂದ್ರ, ಚಾಮರಾಜನಗರ, ಗಂಗನಮಿದ್ದೆ, ಕಂದವಾರ ಮತ್ತಿತರರ ಕಡೆಗಳಲ್ಲಿ ಪೈಪ್‌ಲೈನ್‌ಗಳು ಹಾಳಾಗಿ ಅಪಾರ ಪ್ರಮಾಣದ ಜೀವ ಜಲ ಸಂರಕ್ಷಣೆ ಇಲ್ಲದೇ ಕೋಡಿ ಹರಿದಂತೆ ರಸ್ತೆಗಳಲ್ಲಿ ಹರಿಯುತ್ತಿದ್ದರೂ ನಗರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನೀರು ಪೋಲಾಗುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ವಹಿಸುತ್ತಿಲ್ಲ ಎಂಬ ಆರೋಪ ನಗರದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕಾಲಮಿತಿ ಇಲ್ಲ: ಕೆಲವು ಕಡೆ ನಗರಸಭೆಯಿಂದ ಪೈಪ್‌ಲೈನ್‌ ದುರಸ್ತಿ ಕಾರ್ಯಕ್ಕಾಗಿ ರಸ್ತೆಯ ಅಕ್ಕಪಕ್ಕದಲ್ಲಿ ಗುಂಡಿಗಳನ್ನು ಆಗೆದು ದುರಸ್ತಿಪಡಿಸದೇ ಹಾಗೆ ಬಿಟ್ಟಿರುವುದರಿಂದ ಅಮೂಲ್ಯವಾದ ಕುಡಿಯುವ ನೀರು ರಸ್ತೆಗಳಿಗೆ ಹರಿಯುವಂತಾಗಿದೆ. ಪೈಪ್‌ಲೈನ್‌ ದುರಸ್ತಿ ಕಾರ್ಯ ಕಾಲಮಿತಿಯೊಳಗೆ ಪೂರ್ಣ ಗೊಳ್ಳದ ಕಾರಣ ಜೀವ ಜಲ ಹೀಗಿ ಪೋಲಾಗುತ್ತಿದ್ದು,

ಇನ್ನೂ ದುರಸ್ತಿ ಕಾರ್ಯ ಆಗದೆ ಗುಂಡಿಗಳಲ್ಲಿ ಮಣ್ಣು , ಘನ ತಾಜ್ಯ ವಸ್ತುಗಳು ಸೇರಿಕೊಂಡು ಕುಡಿಯುವ ನೀರು ಕೊಳಚೆ ನೀರಾಗಿ ಸಾರ್ವಜನಿಕರ ಮನೆಗಳು ಪೂರೈಕೆಯಾಗುತ್ತಿವೆ. ಇದರಿಂದ ಶುದ್ಧ ಕುಡಿಯುವ ನೀರು ಬದಲಾಗಿ ಕೆಲವು ಮನೆಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ. ಜೊತೆಗೆ ನೀರು ಮಲಿನವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಕೂಡ ಎದುರಾಗಿದೆ.

ನಗರಸಭೆ ಪ್ರತಿ ವರ್ಷ ಪೈಪ್‌ಲೈನ್‌ ಕಾರ್ಯಕ್ಕೆಂದು ಲಕ್ಷಾಂತರ ರೂ. ವೆಚ್ಚ ಮಾಡುತ್ತಿದೆ. ಆದರೆ, ಗುಣಮಟ್ಟದ ಪೈಪ್‌ಲೈನ್‌ ಅಳವಡಿಸದ ಕಾರಣ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಪೈಪ್‌ಗ್ಳು ನಗರದ ಎಲ್ಲಿಂದರಲ್ಲಿ ಒಡೆದು ಹಾಳಾಗುತ್ತಿರುವುದರಿಂದ ನೀರು ವ್ಯರ್ಥವಾಗುತ್ತಿದೆ.

ವಾಟ್ಸಪ್‌ ಗ್ರೂಪ್‌ ಹಾಕಿದರೂ ಪ್ರಯೋಜವಿಲ್ಲ: ನಗರದ ವಿವಿಧಡೆಗಳಲ್ಲಿ ಪೈಪ್‌ಲೈನ್‌ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವ ಚಿತ್ರಗಳನ್ನು ತೆಗೆದು ನಗರಸಭೆ ವಾಟ್ಸಪ್‌ ಗ್ರೂಪ್‌ ಹಾಕಿದರೂ ಗಮನಿಸುವರು ಇಲ್ಲ ಎಂಬ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಜತೆಗೆ ನಗರಸಭೆಯ ನೀರು ಸರಬರಾಜು ಶಾಖೆಗೆ ವಿಷಯ ತಿಳಿಸಿದರೂ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ನಗರಸಭೆ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಅಮೂಲ್ಯವಾದ ಜೀವ ಜಲ ಸಂರಕ್ಷಣೆಗೆ ಮುಂದಾಗಬೇಕಿದೆ.

ಟಾಪ್ ನ್ಯೂಸ್

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.