ಅರಂತೋಡು – ತೊಡಿಕಾನ ರಸ್ತೆ ಮೋರಿ ಕುಸಿತ


Team Udayavani, May 19, 2018, 2:32 PM IST

19-may-12.jpg

ತೊಡಿಕಾನ : ಅರಂತೋಡು – ತೊಡಿಕಾನ ಸಂಪರ್ಕ ರಸ್ತೆಯ ಮೋರಿಗಳೆರಡು ಕಲ್ಲಂಬಳ ಸಮೀಪ ಕುಸಿತಗೊಂಡ ಪರಿಣಾಮ ಸ್ಥಳೀಯ ಜನರಿಗೆ ಅರಂತೋಡು – ತೊಡಿಕಾನ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಕಳೆದ ವರ್ಷವೇ ಇಲ್ಲಿಯ ಮೋರಿ ಕುಸಿತಗೊಂಡಿರುವ ಬಗ್ಗೆ ಜಿ.ಪಂ.ಗೆ ಸ್ಥಳೀಯರು ಮಾಹಿತಿ ನೀಡಿ ದುರಸ್ತಿ ಪಡಿಸುವಂತೆ ಬರೆದುಕೊಂಡಿದ್ದರು. ಆದರೆ ಈ ತನಕ ಈ ಎರಡು ಮೋರಿಗಳನ್ನು ತೆರವುಗೊಳಿಸಿ ನೂತನ ಮೋರಿ ನಿರ್ಮಾಣ ಮಾಡುವಂಥ ಕೆಲಸ ಇನ್ನೂ ನಡೆದಿಲ್ಲ.

ಜಿಲ್ಲಾ ಪಂಚಾಯತ್‌ ರಸ್ತೆ
ಈ ರಸ್ತೆ ಅರಂತೋಡಿನಿಂದ ತೊಡಿಕಾನದ ದ.ಕ. – ಕೊಡಗು ಗಡಿಭಾಗದ ತನಕ ಜಿಲ್ಲಾ ಪಂಚಾಯತ್‌ ರಸ್ತೆಯಾಗಿದ್ದು, ನಾಲ್ಕು ವರ್ಷಗಳ ಹಿಂದೆ 4 ಕೋಟಿ ರೂ. ವೆಚ್ಚದಲ್ಲಿ ಡಾಮರು ಕಾಮಗಾರಿ, ಸೇತುವೆ, ಮೋರಿ, ಇತರ ಕೆಲಸಗಳನ್ನು ಲೋಕೋಪಯೋಗಿ ಇಲಾಖೆ ನಡೆಸಿತ್ತು. ವಿಪರ್ಯಾಸ ಏನೆಂದರೆ, ಎಸ್ಟಿಮೇಟ್‌ ಪ್ರಕಾರ ಗುತ್ತಿಗೆದಾರರು ಕೆಲಸ ಮಾಡದೆ ವಂಚಿಸಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ಎಸ್ಟಿಮೇಟ್‌ ಪ್ರಕಾರ ಈಗ ಕುಸಿತಗೊಂಡಿರುವ ಒಂದು ಮೋರಿಯನ್ನು ತೆಗೆದು ಕಿರು ಸೇತುವೆ ನಿರ್ಮಾಣ ಮಾಡಬೇಕಾಗಿತ್ತು. ಇನ್ನೊಂದು ಮೋರಿಯನ್ನು ತೆಗೆದು ಹೊಸ ಮೋರಿ ನಿರ್ಮಾಣ ಮಾಡಬೇಕಾಗಿತ್ತು. ಸೇತುವೆ ಮತ್ತು ಮೋರಿ ನಿರ್ಮಾಣ ಮಾಡದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣ ವಾಗಿದೆ. ಗುತ್ತಿಗೆದಾರರು ಕಾಮಗಾರಿ ಮುಗಿದ ಬಳಿಕ ಎರಡು ವರ್ಷಗಳ ಕಾಲ ರಸ್ತೆಯ ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗಿತ್ತು. ಅದನ್ನೂ ಮಾಡಿಲ್ಲ. ಕಳೆದ ವರ್ಷ ಮೋರಿಗಳು ಕುಸಿತಗೊಂಡಿದ್ದು, ಅದನ್ನು ಬದಲಾಯಿಸುವಂತೆ ಜಿಲ್ಲಾ ಪಂಚಾಯತ್‌ಗೆ ಬರೆದರೂ ಕಾಮಗಾರಿ ಇನ್ನೂ ಪ್ರಾರಂಭಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಧಾರ್ಮಿಕ ಕೇಂದ್ರದ ಸಂಪರ್ಕ ರಸ್ತೆ
ಅರಂತೋಡು – ತೊಡಿಕಾನ ರಸ್ತೆ ಸುಳ್ಯ ಸೀಮೆ ದೇವಾಲಯವಾದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಭಕ್ತರು ಅಲ್ಲದೆ ಉತ್ಸವಾದಿ ದಿನಗಳಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಈ ರಸ್ತೆಯ ಮೂಲಕವೇ ಬರುತ್ತಾರೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಇರುತ್ತದೆ. ಕುಸಿದು ನಿಂತಿರುವ ಮೋರಿಗಳು ಯಾವ ಸಮಯದಲ್ಲಿ ಪೂರ್ಣವಾಗಿ ಕುಸಿದು ರಸ್ತೆ ಸಂಪರ್ಕ ಕಡಿತವಾಗುತ್ತದೆ ಎಂಬ ಭಯದಲ್ಲಿ ಜನರು ದಿನ ಕಳೆಯುವಂತಾಗಿದೆ.

ಕೊಡಗು ಸಂಪರ್ಕ ರಸ್ತೆ
ಈ ರಸ್ತೆಯೂ ಕೊಡಗು ಜಿಲ್ಲೆಯ ತಲಕಾವೇರಿ, ಭಾಗಮಂಡಲಕ್ಕೆ ಸಂಪರ್ಕ ಕಲ್ಪಿಸುತ್ತದೆ. ತೊಡಿಕಾನದಿಂದ ತೊಡಿಕಾನ -ಪಟ್ಟಿ ರಸ್ತೆಯ ಅತಿ ಹತ್ತಿರದ ರಸ್ತೆ ಇದ್ದು, ಕಡಿಮೆ ಅವಧಿಯಲ್ಲಿ ತಲಕಾವೇರಿ ಭಾಗಮಂಡಲವನ್ನು ಸೇರಬಹುದಾಗಿದೆ. ತೊಡಿಕಾನ ದೇವಾಲಯಕ್ಕೆ ಭೇಟಿ ನೀಡುವ ಕೆಲವು ಭಕ್ತರು ಈ ರಸ್ತೆಯ ಮೂಲಕ ತಲಕಾವೇರಿ ಭಾಗಮಂಡಲಕ್ಕೆ ಪ್ರಯಾಣ ಬೆಳೆಸುತ್ತಾರೆ.

ನೀತಿ ಸಂಹಿತೆ ಅಡ್ಡಿ
ಚುನಾವಣೆಯ ನೀತಿ ಸಂಹಿತೆ ಬಂದಿರುವ ಕಾರಣ ಕಾಮಗಾರಿ ನಡೆಸಲು ಸಮಸ್ಯೆಯಾಗಿದೆ. ಮುಂದಿನ ದಿನದಲ್ಲಿ ಮೋರಿಯ ಕಾಮಗಾರಿ ನಡೆಸುತ್ತೇವೆ.
–  ಮಣಿಕಂಠ,
   ಜಿ.ಪಂ. ಎಂಜಿನಿಯರ್ 

ಪೂರ್ತಿ ಕುಸಿದರೆ ಸಮಸ್ಯೆ
ಗ್ರಾಮ ಸಭೆಯಲ್ಲಿ ನಿರ್ಣಯ ಮಾಡಿ ಜಿ.ಪಂ.ಗೆ ಬರೆಯಲಾಗಿದೆ. ಆದರೆ ಇನ್ನೂ ಕಾಮಗಾರಿ ಪ್ರಾರಂಭಿಸಿಲ್ಲ. ಈ ಮೋರಿಗಳು ಸಂಪೂರ್ಣವಾಗಿ ಕುಸಿತಗೊಂಡರೆ ಅರಂತೋಡು ತೊಡಿಕಾನ ಸಂಪರ್ಕಕ್ಕೆ ಸಮಸ್ಯೆಯಾಗಲಿದೆ.
 - ಶಿವಾನಂದ ಕುಕ್ಕುಂಬಳ ಗ್ರಾ.ಪಂ. ಉಪಾಧ್ಯಕ್ಷ

 ಕಾಮಗಾರಿ ನಡೆದಿಲ್ಲ
ರಸ್ತೆ ಡಾಮರು ಕಾಮಗಾರಿ ಸಂದರ್ಭದಲ್ಲಿ ಗುತ್ತಿಗೆದಾರರು ಎಸ್ಟಿಮೇಟ್‌ ಪ್ರಕಾರ ಕಾಮಗಾರಿ ನಡೆಸಿಲ್ಲ. ಈ ಜಾಗದಲ್ಲಿ ಒಂದು ಕಿರುಸೇತುವೆ, ಇನ್ನೊಂದು ಮೋರಿ ನಿರ್ಮಾಣ ಮಾಡಬೇಕಾಗಿತ್ತು. ಅದನ್ನು ಅವರು ಮಾಡಿಲ್ಲ. ಹಳೆ ಮೋರಿಗಳ ಮೇಲೆ ಡಾಮರು ಹಾಕಿ ಬಿಟ್ಟಿದ್ದಾರೆ. ಪರಿಣಾಮವನ್ನು ಜನರು ಎದುರಿಸಬೇಕಾಗಿದೆ. ಕುಸಿದ ಮೋರಿಯನ್ನು ಬದಲಾಯಿಸುವಂತೆ ಸಂಬಂಧಪಟ್ಟ ಇಲಾಖೆಗೆ ಬರೆದರೂ ಯಾವುದೇ ಕಾಮಗಾರಿ ನಡೆದಿಲ್ಲ. 
 -  ವಸಂತ್‌ ಭಟ್‌ ದೊಡ್ಡಡ್ಕ,
     ಸ್ಥಳೀಯರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.