ಶ್ರೀ ಸರಸ್ವತಿ ಹವನ, ಶೈಕ್ಷಣಿಕ ವರ್ಷ ಪ್ರಾರಂಭ
Team Udayavani, May 19, 2018, 4:49 PM IST
ನಗರ: ಪುತ್ತೂರು ಧರ್ಮಸ್ಥಳ ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಶುಕ್ರವಾರ ಶ್ರೀ ಸರಸ್ವತಿ ಹವನದೊಂದಿಗೆ ಶೈಕ್ಷಣಿಕ ವರ್ಷದ ಚಟುವಟಿಕೆ ಆರಂಭಗೊಂಡಿತು.
ಬೆಳಗ್ಗೆ ಶ್ರೀ ಸರಸ್ವತಿ ಹವನ, ಗಣಹೋಮ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಸ್ಥೆಯ ಸಂಚಾಲಕ ಪಿ.ವಿ. ಗೋಕುಲ್ನಾಥ್, ಪ್ರಾಂಶುಪಾಲೆ ಹೇಮಲತಾ ಗೋಕುಲ್ನಾಥ್, ಉಪನ್ಯಾಸಕ, ಬೋಧಕೇತರ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಒಳಿತಿಗಾಗಿ ಪ್ರತಿ ವರ್ಷದಂತೆ ಸಂಸ್ಥೆಯಲ್ಲಿ ಈ ವರ್ಷವೂ ಶ್ರೀ ಸರಸ್ವತೀ ಹವನ ನಡೆಸಲಾಯಿತು. ಮಧ್ಯಾಹ್ನದ ಬಳಿಕ ಉಪನ್ಯಾಸಕರು ಪಠ್ಯ- ಪ್ರವಚನ ಪ್ರಾರಂಭಿಸುವ ಮೂಲಕ ಶೈಕ್ಷಣಿಕ ಚಟುಟಿಕೆಗೆ ಚಾಲನೆ ನೀಡಿದರು. ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಸಾಕಷ್ಟು ಮುಂಚಿತವಾಗಿಯೇ ಈ ಬಾರಿ ತರಗತಿ ಆರಂಭಗೊಂಡಿದೆ. ವಿಜ್ಞಾನ ವಿಭಾಗವೂ ಈ ವರ್ಷದಿಂದ ಆರಂಭಗೊಂಡಿದ್ದು, ದಾಖಲಾತಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ