ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ
Team Udayavani, May 19, 2018, 5:23 PM IST
ಉಪ್ಪಿನಬೆಟಗೇರಿ: ಗ್ರಾಮದ ಶ್ರೀ ಮೂರುಸಾವಿರ ವಿರಕ್ತಮಠಕ್ಕೆ ಮಾಜಿ ಶಾಸಕ ಎ.ಬಿ. ದೇಸಾಯಿ ಭೇಟಿ ನೀಡಿ ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ವೇಳೆ ಕುಮಾರ ವಿರೂಪಾಕ್ಷ ಸ್ವಾಮೀಜಿ ಮಾತನಾಡಿ, ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ ದೇಸಾಯಿ ಜಯ ಸಾಧಿಸಿ ಶಾಸಕರಾಗಿದ್ದು ಈ ಕ್ಷೇತ್ರದ ಸುದೈವ. ಜನರು ಚಿಕ್ಕ ವಯಸ್ಸಿನವರಾದ ಅಮೃತ ದೇಸಾಯಿ ಅವರನ್ನು ಆರಿಸಿ ತಂದಿದ್ದು ಎಲ್ಲರಿಗೂ ಸಂತೋಷದ ವಿಷಯ. ಅವರು ಜನರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಉತ್ತಮವಾದ ಆಡಳಿತ ನೀಡಬೇಕು ಎಂದರು.
ಮಾಜಿ ಶಾಸಕ ಎ.ಬಿ. ದೇಸಾಯಿ ಮಾತನಾಡಿ, ಕ್ಷೇತ್ರದ ಜನ ನಂಬಿಕೆ ಇಟ್ಟು ನನ್ನ ಮಗ ಅಮೃತ ದೇಸಾಯಿ ಅವರನ್ನು ಗೆಲ್ಲಿಸಿದ್ದು ನಾನು ಚಿರ ಋಣಿಯಾಗಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕೆ ಮೊದಲು ಆದ್ಯತೆ ನೀಡಿ ಹಂತ ಹಂತವಾಗಿ ಜನರ ಎಲ್ಲ ಕಾರ್ಯಗಳನ್ನು ಮಾಡಲು ಅಮೃತಗೆ ತಿಳಿಸಲಾಗುವುದು ಎಂದರು.
ಶಂಕ್ರಯ್ಯ ಇಂಚಗೇರಿಮಠ, ಧರಣೇಂದ್ರ ಅಷ್ಟಗಿ, ಬಸವರಾಜ ಕಬ್ಬೂರ, ರುದ್ರಪ್ಪ ಬಡ್ಡೂರ, ದುಂಡಪ್ಪ ಪಟ್ಟಣಶೆಟ್ಟಿ, ಬಸವಂತಪ್ಪ ಲಗಮಣ್ಣವರ, ಕೃಷ್ಣಾ ಬುದ್ನಿ, ಈರಪ್ಪ ಬಡ್ಡೂರ, ಮಡಿವಾಳಪ್ಪ ಕೋಟೂರ, ವಿರೂಪಾಕ್ಷಪ್ಪ ಬೆಳವಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
MUST WATCH
ಹೊಸ ಸೇರ್ಪಡೆ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ