ಕರ್ನಾಟಕದಲ್ಲಿ ಮೋದಿ ಭಷ್ಟಾಚಾರ: ರಾಹುಲ್ ಗಾಂಧಿ ಖಂಡನೆ
Team Udayavani, May 19, 2018, 7:26 PM IST
ಹೊಸದಿಲ್ಲಿ : ಕರ್ನಾಟಕದ ರಾಜಕೀಯ ಬೆಳವಣಿಗೆಗೆ ಖಡಕ್ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು “ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸಲು ಹಣಬಲ ಬಳಸುವುದಕ್ಕೆ ಬಿಜೆಪಿಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟ ವ್ಯಕ್ತಿ’ ಎಂದು ನೇರವಾಗಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕಾಗಿ ಪ್ರಧಾನಿ ಮೋದಿ ನಡೆಸಿರುವ ಭ್ರಷ್ಟಾಚಾರವನ್ನು ರಾಹುಲ್ ಉಗ್ರವಾಗಿ ಖಂಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ನಾಯಕರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವುದಕ್ಕೆ ಪ್ರತಿಫಲವಾಗಿ ಬಿ ಎಸ್ ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಪದಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಯಿತು ಎಂದು ರಾಹುಲ್ ಗಾಂಧಿ ಹೇಳಿದರು.
“ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸುವುದಕ್ಕೆ ಅನುಮೋದನೆ ನೀಡಿರುವುದನ್ನು ನೀವೆಲ್ಲ ಬಹಿರಂಗವಾಗಿ ಕಂಡಿದ್ದೀರಿ; ಪ್ರಧಾನಿಯವರು ತಾನು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ; ಆದರೆ ವಾಸ್ತವದಲ್ಲಿ ಅದು ಶುದ್ಧ ಸುಳ್ಳು. ಅವರು ನಿಜಕ್ಕೂ ಓರ್ವ ಭ್ರಷ್ಟ ವ್ಯಕ್ತಿ’ ಎಂದು ರಾಹುಲ್ ಗಾಂಧಿ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
“ಬಿಜೆಪಿ ದೇಶದ ಪ್ರಜಾಸತ್ತೆಯ ಪ್ರತಿಯೊಂದು ಸಂಸ್ಥೆಯ ಮೇಲೆ ದಾಳಿ ನಡೆಸುತ್ತಿದೆ; ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿನ ವಿರೋಧ ಪಕ್ಷಗಳು ಒಗ್ಗೂಡಿ ನಿಂತಿರುವುದಕ್ಕೆ ಮತ್ತು ಬಿಜೆಪಿಯನ್ನು ಸೋಲಿಸಿರುವುದಕ್ಕೆ (ಕರ್ನಾಟಕದಲ್ಲಿ) ನಾನು ಹೆಮ್ಮೆ ಪಡುತ್ತೇನೆ; ಹೀಗೆ ಮಾಡುವುದನ್ನು ನಾವು ಮುಂದುವರಿಸಲಿದ್ದೇವೆ’ ಎಂದು ರಾಹಲ್ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ