ವಾಜಪೇಯಿ ಹಾದಿ ತುಳಿದ ಯಡಿಯೂರಪ್ಪ
Team Udayavani, May 20, 2018, 6:35 AM IST
ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸುವ ವಿಚಾರದಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಅವರ ಹಾದಿಯನ್ನೇ ತುಳಿದಿದ್ದಾರೆ.
ವಿಶ್ವಾಸಮತ ಯಾಚಿಸುವ ಬದಲು ಭಾವನಾತ್ಮಕ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 1996ರಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿ ಅವರೂ ಇದೇ ಮಾರ್ಗ ಅನುಸರಿಸಿದ್ದರು.
ವಿಶೇಷವೆಂದರೆ, ವಾಜಪೇಯಿ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಧಾನಿಯಾದರೆ, ಇಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ
ಬಳಿಕ ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಿದ್ದಾರೆ. ಎರಡೂ ಸಂದರ್ಭದಲ್ಲಿ
ಜೆಡಿಎಸ್ಗೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆ ಸಿಗಲು ಕಾರಣವಾಗುತ್ತಿರುವುದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್.