ಬಣ್ಣದ ಲೋಕಕ್ಕೆ ಸಾಹಿತಿಗಳ ಪ್ರವೇಶ ಸಾಹಿತ್ಯಕ್ಕೆ ತೊಡಕು


Team Udayavani, May 20, 2018, 12:20 PM IST

bannada-loka.jpg

ಬೆಂಗಳೂರು: ನಿರಂತರ ಸಾಹಿತ್ಯ ಕೃಷಿ ಮಾಡುತ್ತಿರುವ ಸಾಹಿತಿಗಳು ಕಿರುತೆರೆ ಹಾಗೂ ಸಿನಿಮಾರಂಗದಂತಹ ಬಣ್ಣದ ಲೋಕ ಪ್ರವೇಶ ಮಾಡುತ್ತಾ ಹೋದರೆ, ಕೃತಿ ರಚನೆ ಮಾಡುವವರು ಯಾರು ಎಂದು ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್‌. ನಿಸಾರ್‌ ಅಹ್ಮದ್‌ ಕಳವಳ ವ್ಯಕ್ತಪಡಿಸಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್ ಕಲ್ಚರ್‌ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಶನಿವಾರ ಮೈಸೂರಿನ ತುಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ ಹೊರತಂದ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರ ಗಾನಯಾನ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಆವರು, ಸಾಹಿತಿಗಳು ಕಿರುತೆರೆ ಹಾಗೂ ಸಿನಿಮಾ ಲೋಕ ಪ್ರವೇಶ ಮಾಡುವುದರಿಂದ ಗಟ್ಟಿ ಸಾಹಿತ್ಯಕ್ಕೆ ತೊಡಕಾಗುವ ಸಾಧ್ಯತೆ ಇದೆ. ಪ್ರಸಕ್ತ ದಿನಗಳಲ್ಲಿ ಸಾಹಿತಿಗಳು ಚಲನಚಿತ್ರ ರಂಗದೆಡೆಗೆ ಸಾಗುತ್ತಿದ್ದಾರೆ ಎಂದು ಹೇಳಿದರು.

ಗಟ್ಟಿ ಸಾಹಿತ್ಯ: ಜನಪ್ರಿಯ ಸಿನಿಮಾ ಸಂಗೀತದಲ್ಲಿ ಸಾಹಿತ್ಯಕ್ಕೆ ಅಷ್ಟೊಂದು ಮಹತ್ವವಿಲ್ಲ. ಹೀಗಾಗಿ ಸಾಹಿತಿಗಳು ಸಿನಿಮಾಕ್ಕೆ ಬೇಕಾದ ರಚನೆ ಸಿದ್ಧಪಡಿಸುವಾಗ ಲಯ ಕಳೆದುಕೊಳ್ಳುವ ಸಾಧ್ಯತೆ ಇದೆ. ದೊಡ್ಡರಂಗೇಗೌಡರಂತಹ ಸಾಹಿತಿಗಳು ಪರಿಸರವನ್ನು ಆಧಾರವಾಗಿಟ್ಟುಕೊಂಡು ಗಟ್ಟಿ ಸಾಹಿತ್ಯ ರಚನೆ ಮಾಡುತ್ತಿದ್ದಾರೆ ಎಂದು ಶ್ಲಾ ಸಿದರು.

ಗಾನಯಾನ ಕವನ ಸಂಕಲನದಲ್ಲಿ ಬರುವ ಗೋವಿನ ಕವಿತೆ ರಾಜಕೀಯ ಪಕ್ಷವೊಂದರ ಪ್ರಣಾಳಿಕೆಯಂತಿದೆ ಎಂದು ಕೆ.ಎಸ್‌.ನಿಸಾರ್‌ ಅಹ್ಮದ್‌ ಅವರು ವಿಮರ್ಶಿಸಿರುವುದಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ಸಾಹಿತಿ ದೊಡ್ಡರಂಗೇಗೌಡರು, ನಾನು ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವನು, ದೇಶದ ಪ್ರತಿಯೊಬ್ಬರ ರೈತನಿಗೂ ಗೋವಿಗೂ ಅವಿನಾಭಾವ ಸಂಬಂಧ ಇದೆ. ಕೊಟ್ಟಿಗೆಯಲ್ಲಿ ಗೋವಿನ ಸೆಗಣಿ, ಗಂಜಲನ್ನು ತಿಪ್ಪೆಗೆ ಹಾಕಿರುವ ನೆನಪು ಇನ್ನೂ ಮಾಸಿಲ್ಲ. ಬಿಜೆಪಿ ಸೇರುವ ಮೊದಲೇ ಗೋವಿನ ಬಗ್ಗೆ ಅನೇಕ ಕವಿತೆ ರಚಿಸಿದ್ದೇನೆ ಎಂದರು.

ಬುಗುರಿಯಂತ ಕವಿತೆ: ಮಕ್ಕಳು ಬುಗುರಿ ಸಿದ್ಧಪಡಿಸಿ, ನಾಜೂಕಿನಿಂದ ಮೊಳೆ ಹೊಡೆಯುವುದು ಎಷ್ಟು ಕಷ್ಟವೋ, ಕವಿ ರಚಿಸಿದ ಕವಿತೆಗೆ ಶೀರ್ಷಿಕೆ ನೀಡುವುದು ಅಷ್ಟೇ ಕಷ್ಟ. ಬುಗುರಿ ತಯಾರಿಸಿ, ಮೊಳೆ ಹೊಡೆದು, ಕೈ ಮೇಲೆ ತಿರುಗಿಸಿಕೊಂಡು ಆನಂದ ಪಟ್ಟಂತೆ ಕವಿಯೂ ಕೂಡ ಕವಿತೆ ರಚಿಸಿ, ಶೀರ್ಷಿಕೆ ನೀಡಿ ಆನಂದಿಸುತ್ತಾನೆ .ಆದರೆ, ಒಳ್ಳೆಯ ವಿಷಯವನ್ನು ಒಪ್ಪಿಕೊಳ್ಳದಂತಹ ವಿಷಮ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಕವಿ ದೊಡ್ಡರಂಗೇಗೌಡ ಹೇಳಿದರು.

ಕವಿ ಡಾ.ಎಚ್‌.ಎಸ್‌. ವೆಂಕಟೇಶ ಮೂರ್ತಿ, ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್‌, ಚಲನಚಿತ್ರ ಕಲಾವಿದ ಸುಚೇಂದ್ರ ಪ್ರಸಾದ್‌, ಮೈಸೂರಿನ ತುಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ ಪ್ರಕಾಶಕ ಟಿ.ಎಸ್‌. ಛಾಯಾಪತಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.