ಶಕ್ತಿಸೌಧಕ್ಕೆ ಖಾಕಿ ಸರ್ಪಗಾವಲು


Team Udayavani, May 20, 2018, 12:20 PM IST

shaktisoudha.jpg

ಬೆಂಗಳೂರು: ಸದಾ ಖಾದಿಧಾರಿಗಳಿಂದ ಕಂಗೊಳಿಸುತ್ತಿದ್ದ ಶಕ್ತಿ ಸೌಧ ವಿಧಾನಸೌಧವನ್ನು ಶನಿವಾರ ಖಾಕಿ ಸರ್ಪಗಾವಲು ಸುತ್ತುವರಿದಿತ್ತು. ರಾಜ್ಯ ಪೊಲೀಸರೊಂದಿಗೆ ಶಸ್ತ್ರಸಜ್ಜಿತ ಕೇಂದ್ರೀಯ ಮೀಸಲು ಪಡೆಯ ನಿಯೋಜನೆಯೊಂದಿಗೆ ಹಿಂದೆಂದೂ ಕಂಡರಿಯದಂತಹ ಭಾರಿ ಬಿಗಿ ಭದ್ರತೆ ನಡುವೆ ಶಾಸಕರ ಪ್ರಮಾಣ ವಚನ ಪ್ರಕ್ರಿಯೆ ನಡೆಯಿತು.

ವಿಧಾನಸೌಧ, ವಿಕಾಸಸೌಧ, ರಾಜಭವನಕ್ಕೆ ಭಾರಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ರಾಜ್ಯ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಪೊಲೀಸರೊಂದಿಗೆ ಸಿಐಡಿ, ಲೋಕಾಯುಕ್ತ ಪೊಲೀಸರು, ಗೃಹ ರಕ್ಷಕ ದಳದ ಸಿಬ್ಬಂದಿ ಜತೆಗೆ ಕೇಂದ್ರೀಯ ಮೀಸಲು ಪಡೆಯ ಸಿಐಎಸ್‌ಎಫ್, ಬಿಎಸ್‌ಎಫ್, ಸಿಆರ್‌ಪಿಎಫ್, ಆರ್‌ಎಎಫ್ ಭದ್ರತೆಯಿಂದಾಗಿ ವಿಧಾನಸೌಧ ಖಾಕಿ ನಿಯಂತ್ರಣದಲ್ಲಿತ್ತು.

ವಿಧಾನಸೌಧದ ಪೂರ್ವ ದ್ವಾರದಲ್ಲಿ ಪ್ರವೇಶ, ನಿರ್ಗಮನ ಬಂದ್‌ ಮಾಡಲಾಗಿತ್ತು. ವಿಕಾಸಸೌಧ ಪೂರ್ವ ದ್ವಾರ, ಮಾಹಿತಿ ಸೌಧದ ಕಡೆಗಿನ ಪ್ರವೇಶ ದ್ವಾರದಿಂದ ಅಧಿಕಾರಿ, ನೌಕರ, ಸಿಬ್ಬಂದಿಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಗುರುತಿನ ಚೀಟಿ, ಇತರೆ ದಾಖಲೆ ಪರಿಶೀಲಿಸಿ ಖಾತರಿಪಡಿಸಿಕೊಂಡ ಬಳಿಕವಷ್ಟೇ ಒಳಬಿಡಲಾಗುತ್ತಿತ್ತು. 

ಪಶ್ಚಿಮ ದ್ವಾರದಲ್ಲಷ್ಟೇ ಶಾಸಕರು, ಪ್ರಮುಖರಿಗೆ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ವಿಧಾನಸೌಧ ಕಟ್ಟಡ ಪಶ್ಚಿಮ, ದಕ್ಷಿಣ ಭಾಗಗಳಲ್ಲೂ ಅಧಿಕಾರಿ, ನೌಕರರ ಪ್ರವೇಶ ನಿರ್ಬಂಧಿಸಲಾಗಿತ್ತು. ಕೇವಲ ಪೂರ್ವ ಹಾಗೂ ಉತ್ತರ ದ್ವಾರಗಳಲ್ಲಿ ಎರಡನೇ ಹಂತದ ಪರಿಶೀಲನೆ ನಡೆಸಿ ಪ್ರವೇಶ ಕಲ್ಪಿಸಲಾಗಿತ್ತು.

ಹಲವು ಹಂತದಲ್ಲಿ ಪರಿಶೀಲನೆ: ಪ್ರವೇಶ ದ್ವಾರಗಳಲ್ಲಿ ತಪಾಸಣೆ ನಡೆದರೆ ನಂತರ ವಿಧಾನಸೌಧದ ಒಳ ಪ್ರವೇಶ ಹಂತದಲ್ಲೂ ಪರಿಶೀಲನೆ ವ್ಯವಸ್ಥೆಯಿತ್ತು. ಮೊದಲ ಮಹಡಿಯಲ್ಲಿನ ವಿಧಾನಸಭೆ ಸದನದ ಆವರಣಕ್ಕೂ ಸಂಬಂಧಪಡದ ಅಧಿಕಾರಿ, ನೌಕರ, ಸಿಬ್ಬಂದಿಯ ಪ್ರವೇಶ ನಿರ್ಬಂಧಿಸಲಾಗಿತ್ತು. ವಿಧಾನಸೌಧ ಆವರಣದಲ್ಲಿ ಯಾರೊಬ್ಬರೂ ನಿಲ್ಲಲು ಅವಕಾಶವಿಲ್ಲದಂತೆ ಹೆಜ್ಜೆ ಹೆಜ್ಜೆಗೆ ಪೊಲೀಸರನ್ನು ನಿಯೋಜಿಸಲಾಗಿತ್ತು.

ಅಂಬೇಡ್ಕರ್‌ ವೀದಿ, ಅರಮನೆ ರಸ್ತೆ, ರಾಜಭವನ ರಸ್ತೆ, ಹೈಕೋರ್ಟ್‌ ಮುಂಭಾಗ ಮೆಟ್ರೋ ನಿಲ್ದಾಣ ಬಳಿಯು ಭಾರಿ ಸಂಖ್ಯೆಯಲ್ಲಿ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ಪೊಲೀಸ್‌ ವಾಹನಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಕಲ್ಪಿಸಲಾಗಿತ್ತು. ಹಿರಿಯ ಐಪಿಎಸ್‌ ಅಧಿಕಾರಿಗಳೇ ಪ್ರವೇಶ ದ್ವಾರಗಳಲ್ಲಿ ನಿಂತು ಮೇಲುಸ್ತುವಾರಿ ವಹಿಸಿದ್ದರು. ಖಾಕಿ ಕಣ್ಗಾವಲಿನಲ್ಲಿ ವಿಧಾನಸೌಧದ ಆವರಣದಲ್ಲಿ ಜನ, ವಾಹನ ಸಂಚಾರವೂ ವಿರಳವಾಗಿದ್ದ ವಾತಾವರಣದಲ್ಲಿ ಸಾರ್ವಜನಿಕರಲ್ಲಿ ಭಯದ ಭಾವನೆ ಮೂಡಿಸುವಂತಿತ್ತು.

ಬಸ್‌ಗಳಲ್ಲಿ ಬಂದಿಳಿದ ಶಾಸಕರು: ಸುಪ್ರೀಂ ಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಇಲಾಖೆಯು ಶಾಸಕರಿಗೆ ವಿಶೇಷ ಭದ್ರತೆ ಕಲ್ಪಿಸಲಾಗಿತ್ತು. ಶಾಸಕರು, ಪ್ರಮುಖರಿಗೆ ಪಶ್ಚಿಮ ದ್ವಾರದ ಕಡೆಯಿಂದ ಪ್ರವೇಶ ಕಲ್ಪಿಸಲಾಗಿತ್ತು. ಮೊದಲಿಗೆ ಬೆಳಗ್ಗೆ 10.35ರ ಹೊತ್ತಿಗೆ ಕಾಂಗ್ರೆಸ್‌ ಶಾಸಕರು ಮೂರು ಬಸ್‌ಗಳಲ್ಲಿ ಕೆಂಗಲ್‌ ಹನುಮಂತಯ್ಯ ಪ್ರವೇಶ ದ್ವಾರದ ಬಳಿಗೆ ಆಗಮಿಸಿದರು. ಕಾಂಗ್ರೆಸ್‌ ನಾಯಕರಾದ ಡಿ.ಕೆ.ಶಿವಕುಮಾರ್‌, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಎಚ್‌.ಕೆ.ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ ಸೇರಿದಂತೆ ಶಾಸಕರು ವಿಧಾನಸೌಧ ಪ್ರವೇಶಿಸಿದರು.

ಬೆಳಗ್ಗೆ 10.55ರ ಸುಮಾರಿಗೆ ಬಿಜೆಪಿ ಶಾಸಕರು ಮೂರು ಪ್ರತ್ಯೇಕ ಬಸ್‌ಗಳಲ್ಲಿ ವಿಧಾನಸೌಧಕ್ಕೆ ಆಗಮಿಸಿದರು. ಬಸ್‌ನ ಮೊದಲ ಆಸನದಲ್ಲೇ ಕುಳಿತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದ ಹಾಗೂ ಶಾಸಕರು ಸದನದ ಕಡೆಗೆ ತೆರಳಿದರು. ಬೆಳಗ್ಗೆ 11.05ರ ಹೊತ್ತಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ಶಾಸಕರು ಒಂದೇ ಬಸ್‌ನಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.

ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಶಾಸಕರು ಪ್ರತ್ಯೇಕವಾಗಿ ಬಸ್‌ನಿಂದ ಇಳಿದು ವಿಧಾನಸೌಧದ ಮೆಟ್ಟಿಲೇರುವವರೆಗೆ ಎರಡೂ ಕಡೆ ಪೊಲೀಸರು, ಅಂಗರಕ್ಷಕರು ಸಾಲಾಗಿ ನಿಂತು ಭದ್ರತೆ ಕಲ್ಪಿಸಿದರು. ಜತೆಗೆ ಆಯಾ ಪಕ್ಷಗಳ ವಿಧಾನ ಪರಿಷತ್‌ ಸದಸ್ಯರು ಸಹ ಸರತಿಯಲ್ಲಿ ಶಾಸಕರು ಸದನಕ್ಕೆ ಹೋಗಲು ನೆರವಾದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.