ಜಿಲ್ಲೆಯಲ್ಲಿ ಭೂಗರ್ಭ ಜಲಮಟ್ಟ ಕುಸಿತ


Team Udayavani, May 21, 2018, 2:40 AM IST

20ksde6.jpg

ಕಾಸರಗೋಡು: ವರ್ಷ ದಿಂದ ವರ್ಷಕ್ಕೆ ನೀರಿನ ಬಳಕೆ ಅಧಿಕ ವಾಗುತ್ತಿರುವುದರಿಂದ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆ ಎಂದು ಸಂಬಂಧಪಟ್ಟ ಇಲಾಖೆ ವರದಿಯಲ್ಲಿ ಬಹಿರಂಗಗೊಳಿಸಿದೆ. ಕಾಸರಗೋಡು ಭೂಗರ್ಭ ಜಲ ಇಲಾಖೆ ಕಳೆದ 10 ವರ್ಷಗಳಿಂದ ಸಂಗ್ರಹಿಸಿದ ಅಂಕಿಅಂಶದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ವಲಯಗಳಲ್ಲಿ ಭೂಗರ್ಭ ಜಲಮಟ್ಟ ಕುಸಿಯುತ್ತಿದೆ ಎಂಬುದನ್ನು  ಸೂಚಿಸುತ್ತಿದೆ. ಇದೇ ಸಂದರ್ಭದಲ್ಲಿ ಪ್ರಸ್ತುತ ವರ್ಷ 950 ಕೊಳವೆ ಬಾವಿ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಅಜಾನೂರು, ನೀಲೇಶ್ವರ, ಬದಿಯಡ್ಕ, ಕುಂಬಾxಜೆ, ಪೈವಳಿಕೆ, ಎಣ್ಮಕಜೆ, ವರ್ಕಾಡಿ, ಕಳ್ಳಾರು, ಪನತ್ತಡಿ ಮೊದಲಾದ ವಲಯಗಳಲ್ಲಿ ನಿರಂತರವಾಗಿ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆಯೆಂದು ಕಂಡುಕೊಳ್ಳಲಾಗಿದೆ. 2008ರಿಂದ 2018ರ ಮೇ ತಿಂಗಳ ವರೆಗೆ ದಾಖಲಿಸಿಕೊಂಡ ಅಂಕಿ ಅಂಶಗಳಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಕಾರಡ್ಕ, ಬೇಡಗ, ಕೊಳತ್ತೂರು, ಕುಟ್ಟಿಕ್ಕೋಲ್‌, ಮುಳಿಯಾರು, ಚೆಮ್ನಾಡ್‌ ಉಪ್ಪಳ, ವೆಸ್ಟ್‌ ಎಳೇರಿ, ಈಸ್ಟ್‌ ಎಳೇರಿ ಮೊದಲಾದೆಡೆ ಸಂಗ್ರಹಿಸಿದ ಅಂಕಿಅಂಶದಂತೆ ಭೂಗರ್ಭ ಜಲ ಪ್ರಮಾಣ ಸ್ವಲ್ಪ ಮಟ್ಟಿಗೆ ಹೆಚ್ಚಳವಿದೆ ಎಂದು ತಿಳಿಯಲಾಗಿದೆ. ಆದರೆ ಈ ಜಲ ಮಟ್ಟ ದೊಡ್ಡ ಮಟ್ಟದ ಹೆಚ್ಚಳವಲ್ಲ. ಒಟ್ಟು  ಅಂಕಿಅಂಶ ಸೂಚಿಸುವುದೆಂದರೆ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಭೂಗರ್ಭ ಜಲ ಮಟ್ಟ ಮೈನಸ್‌ ಆರು ಮೀಟರ್‌ ವರೆಗೆ ಕುಸಿದ ಸ್ಥಳವೂ ಇದೆ. ಆದರೆ ಭೂಗರ್ಭ ನೀರು ಹೆಚ್ಚಳ ಕಂಡು ಬಂದಲ್ಲಿ ಒಂದು ಮೀಟರ್‌ಗಿಂತ ಅಧಿಕ ಏರಿಲ್ಲ ಎಂದು ಭೂಗರ್ಭ ಜಲ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಜಿಲ್ಲೆಯಲ್ಲಿ ಭೂಗರ್ಭ ಜಲ ಇಲಾಖೆಗೆ ಕೊಳವೆ ಬಾವಿ ಸಹಿತ 70 ಬಾವಿಗಳು ವೀಕ್ಷಿಸಲು ಇವೆ. ಈ ಬಾವಿಗಳಿಂದ ನೀರಿನ ಪ್ರಮಾಣ ಕಂಡುಕೊಳ್ಳಲಿರುವುದರಿಂದ ನೀರನ್ನು ಪಂಪ್‌ ಮಾಡುವುದಿಲ್ಲ. ಡೀಪ್‌ ಮೀಟರ್‌ ಬಳಸಿ ಜಲ ಮಟ್ಟವನ್ನು ಅಳೆಯಲಾಗುತ್ತಿದೆ. ಪ್ರತೀ ತಿಂಗಳೂ ಭೂಗರ್ಭ ಜಲ ಇಲಾಖೆ ನೀರಿನ ಮಟ್ಟವನ್ನು ಅಳೆಯುತ್ತದೆ.

ವರ್ಷದಿಂದ ವರ್ಷಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಕಟ್ಟಡಗಳ ಸಂಖ್ಯೆ ಹೆಚ್ಚಳ ವಾಗುತ್ತಿದ್ದು, ಅರಣ್ಯ ಪ್ರದೇಶ ಮತ್ತು ಜಲಾಶಯಗಳು ಕಡಿಮೆಯಾಗುತ್ತಿವೆ. ಇದರಿಂದಾಗಿ ಭೂಮಿಯೊಳಗೆ ಸಹಜವಾಗಿ (ನ್ಯಾಚುರಲ್‌ ರೀ ಚಾರ್ಜಿಂಗ್‌) ನೀರು ಸಾಗುವುದಿಲ್ಲ. ಆದರೆ ಅದೇ ವೇಳೆ ನೀರಿನ ಬಳಕೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದರಿಂದಾಗಿ ಭೂಗರ್ಭ ಜಲಸಂಪತ್ತು ಕುಸಿಯುತ್ತಲೇ ಸಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇಂಗು ಗುಂಡಿಗಳು, ಚೆಕ್‌ ಡ್ಯಾಂಗಳು, ತಡೆಗೋಡೆ, ಬಾವಿ ರೀಚಾರ್ಜಿಂಗ್‌ ನಿರ್ಮಿಸುವ ಮೂಲಕ ನೀರು ಸಂಗ್ರಹಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ.

2006ರಲ್ಲಿ ಜಾರಿಗೆ ಬಂದ ಭೂಗರ್ಭ ಕಾಯ್ದೆ ಪ್ರಕಾರ ಭೂಗರ್ಭ ಜಲ ಕುಸಿಯುತ್ತಿರುವ ಸ್ಥಳಗಳ ಯಾದಿಯಲ್ಲಿ ಕಾಸರಗೋಡು ಸಹ ಸೇರ್ಪಡೆಗೊಂಡಿದೆ. ಇದರಂತೆ ಕಾಸರಗೋಡು ನಗರಸಭೆ, ಮಧೂರು, ಮೊಗ್ರಾಲ್‌ಪುತ್ತೂರು, ಚೆಂಗಳ, ಚೆಮ್ನಾಡ್‌, ಬೇಡಗ, ಕಾರಡ್ಕ, ಮುಳಿಯಾರು, ಕುಟ್ಟಿಕ್ಕೋಲ್‌, ದೇಲಂಪಾಡಿ ಮೊದಲಾದ ಸ್ಥಳಗಳೂ ಈ ಕಾಯ್ದೆಯಲ್ಲಿ ಒಳಗೊಂಡಿವೆೆ. ಈ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆಯಲು ಭೂಗರ್ಭ ಜಲ ಇಲಾಖೆಯ ಅನುಮತಿ ಬೇಕು. ಆದರೆ ಯಾವುದೇ ಅನುಮತಿ ಪಡೆಯದೆ ಜಿಲ್ಲೆಯ ವಿವಿಧೆಡೆಗಳಲ್ಲಿ ಕೊಳವೆ ಬಾವಿ ಕೊರೆಯಲಾಗುತ್ತಿದೆ.

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.