ಈಗ ಕುಮಾರಸ್ವಾಮಿ ಟೆಂಪಲ್ ರನ್
Team Udayavani, May 21, 2018, 7:35 AM IST
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ನಾಯಕರು ಟೆಂಪಲ್ ರನ್ನಲ್ಲಿ ನಿರತರಾಗಿದ್ದರೆ
ತಣ್ಣಗೆ ರಾಜ್ಯಾದ್ಯಂತ ಓಡಾಡುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿಯಾಗಿ
ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರಿಂದ ಆಹ್ವಾನ ಪಡೆದ ಮೇಲೆ ದೇವಸ್ಥಾನಗಳ ಭೇಟಿ ಆರಂಭಿಸಿದ್ದಾರೆ.
ಭಾನುವಾರ ಸಂಜೆ ತಮಿಳುನಾಡಿನ ತಿರುಚ್ಚಿಯಲ್ಲಿರುವ ಶ್ರೀರಂಗಂ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ
ಕುಮಾರಸ್ವಾಮಿ, ಸೋಮವಾರ ದೆಹಲಿಗೆ ತೆರಳುವ ಮುನ್ನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಹೊಳೇನರಸೀಪುರಕ್ಕೆ ತೆರಳಿ, ನಂತರ ಲಕ್ಷ್ಮೀನರಸಿಂಹ ದೇವಸ್ಥಾನ, ಹರದನಹಳ್ಳಿ ಶಿವ ದೇವಾಲಯ, ರಂಗನಾಥಸ್ವಾಮಿ ದೇವಾಲಯ ಮತ್ತು ಎಲಿಮಲಕ ದೇವಸ್ಥಾನಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸುವರು.
ಬಳಿಕ, ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜತೆ ಸಮಾಲೋಚನೆ ನಡೆಸುವರು.
ರಾಜ್ಯದ ಜಲಾಶಯಗಳಲ್ಲಿ ನೀರಿದ್ದರೆ ತಾನೆ ಬಿಡುವುದು. ರಜನೀಕಾಂತ್ ಅವರಲ್ಲಿ ನಾನು ಮನವಿ ಮಾಡುತ್ತೇನೆ.
ದಯವಿಟ್ಟು ರಾಜ್ಯಕ್ಕೆ ಬಂದು ಜಲಾಶಯಗಳ ಪರಿಸ್ಥಿತಿ ಮತ್ತು ರೈತರು ಏನಾಗಿದ್ದಾರೆ ಎಂಬುದನ್ನು ನೋಡಿ. ಅದರ ಬಳಿಕ ನಿಮಗೆ ಕಾವೇರಿ ನದಿಯಿಂದ ನೀರು ಬೇಕೆ ಎಂಬುದನ್ನು ಚರ್ಚೆ ಮಾಡೋಣ.
– ಎಚ್.ಡಿ.ಕುಮಾರಸ್ವಾಮಿ, ನಿಯೋಜಿತ ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ