ಇನ್ನೆರಡು ಕ್ಷೇತ್ರ ಚುನಾವಣೆಗೆ ಮೈತ್ರಿ ಇಲ್ಲ:ಡಾ. ಪರಮೇಶ್ವರ್‌


Team Udayavani, May 21, 2018, 6:00 AM IST

parameshwara-700.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರ ರಚನೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಜಯನಗರ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಚುನಾವಣೆಯಲ್ಲೂ ಎರಡೂ ಪಕ್ಷಗಳ ನಡುವೆ ಮೈತ್ರಿಯಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌, “ಅಂತಹ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಈಗಾಗಲೇ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರು ಪ್ರಕಟಗೊಳಿಸಿದೆ. 

ಚುನಾವಣಾ ಪ್ರಕ್ರಿಯೆಯೂ ಪೂರ್ಣಗೊಂಡು, ಮತದಾನ ಮಾತ್ರ ಬಾಕಿ ಇದೆ. ಎರಡೂ ಪಕ್ಷಗಳ ಅಭ್ಯರ್ಥಿಗಳು ಅಲ್ಲಿ ಕಣದಲ್ಲಿದ್ದಾರೆ. ಹೀಗಾಗಿ, ಈ ಹಂತದಲ್ಲಿ ಮೈತ್ರಿ ಮಾತು ಉದ್ಭವಿಸುವುದೇ ಇಲ್ಲ ಎಂದು ಹೇಳಿದರು. ಈ ಮಧ್ಯೆ ಎಚ್‌.ಡಿ. ಕುಮಾರಸ್ವಾಮಿ ಸಹ ಮಾತನಾಡಿ, ಎರಡೂ ಕ್ಷೇತ್ರಗಳಲ್ಲಿ ಮೈತ್ರಿ ಬಗ್ಗೆ ತೀರ್ಮಾನ ಆಗಿಲ್ಲ ಎಂದಿದ್ದಾರೆ.
ಜಯನಗರದಲ್ಲಿಯೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದ್ದು, ಬಿಜೆಪಿ ಅಭ್ಯರ್ಥಿ ಘೋಷಿಸುವುದು ಮಾತ್ರ ಬಾಕಿಯಿದೆ. ಹೀಗಾಗಿ, ಮೈತ್ರಿ ಕಷ್ಟ ಎಂಬುದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ವಾದವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬಿಜೆಪಿ ವಿರುದ್ಧ ಸರ್ಕಾರ ರಚನೆಯಲ್ಲಿ ಒಂದಾಗಿದ್ದರೂ ಜಯನಗರ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಚುನಾವಣೆಯಲ್ಲಿ “ಫ್ರೆಂಡ್ಲಿ’ ಫೈಟ್‌ ನಡೆಯಬಹುದು ಎಂದು ಹೇಳಲಾಗಿದೆ.

ಈ ಮಧ್ಯೆ, ಹಾಲಿ ಶಾಸಕರಾಗಿದ್ದ ಬಿ.ಎನ್‌.ವಿಜಯಕುಮಾರ್‌ ನಿಧನದಿಂದ ತೆರವಾಗಿರುವ ಜಯನಗರದಲ್ಲಿ ಅವರ ಸಹೋದರ ಪ್ರಹ್ಲಾದ್‌ ಬಾಬು ಅವರನ್ನೇ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ. ಜತೆಗೆ ಮಾಜಿ ಮೇಯರ್‌ ಎಸ್‌.ಕೆ. ನಟರಾಜ್‌, ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವ ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಒತ್ತಾಯವಿದೆ. ಆದರೆ, ಅನಂತಕುಮಾರ್‌ ಇದಕ್ಕೆ ಒಪ್ಪುವರೇ ಎಂಬ ಪ್ರಶ್ನೆಯೂ ಇದೆ.

ರಾಜರಾಜೇಶ್ವರಿ ನಗರ ಚುನಾವಣಾ ಉಸ್ತುವಾರಿ ಬಿಜೆಪಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ವಹಿಸಿದ್ದರೆ, ಜಯನಗರ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಅನಂತಕುಮಾರ್‌ ಅವರಿಗೆ ವಹಿಸಲಾಗಿದೆ.

ನಂಬರ್‌ ಗೇಮ್‌ಗೆ ಸಹಕಾರಿ
ಬೆಂಗಳೂರು ವ್ಯಾಪ್ತಿಯ 28 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ 13, ಬಿಜೆಪಿ 11 ಹಾಗೂ ಜೆಡಿಎಸ್‌ 2 ಸ್ಥಾನ ಪಡೆದಿದೆ. 2013ರ ಚುನಾವಣಾ ಫ‌ಲಿತಾಂಶಕ್ಕೆ ಹೋಲಿಸಿದರೆ ಕಾಂಗ್ರೆಸ್‌ ಕಳೆದ ಬಾರಿ ಗಳಿಸಿದ್ದ 13 ಸ್ಥಾನಗಳನ್ನು ಈಗಾಗಲೇ ಪಡೆದುಕೊಂಡಿದೆ. ಜೆಡಿಎಸ್‌ ಹಾಗೂ ಬಿಜೆಪಿ ತಲಾ ಒಂದು ಸ್ಥಾನ ಕಳೆದುಕೊಂಡಿವೆ. ಇದೀಗ ಎರಡು ಕ್ಷೇತ್ರಗಳಿಗೆ ಸದ್ಯದಲ್ಲೇ ಮತದಾನ ನಡೆಯಲಿದೆ. ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿ ಪೈಕಿ ಯಾರು ಗೆದ್ದರೂ ಮೈತ್ರಿ ಸರ್ಕಾರದ ಸದಸ್ಯರ ಸಂಖ್ಯೆ ಹೆಚ್ಚಲಿದೆ. ಬಿಜೆಪಿ ಗೆಲ್ಲುವ ಸಂಖ್ಯೆಗೆ ಅನುಗುಣವಾಗಿ ಸಂಖ್ಯಾಬಲ ಹೆಚ್ಚಾಗಲಿದೆ. ಹಾಗಾಗಿ ರಾಜಧಾನಿಯ ಎರಡು ಕ್ಷೇತ್ರಗಳಲ್ಲಿ ಜೂನ್‌ ಮಧ್ಯಭಾಗದವರೆಗೆ ಚುನಾವಣಾ ಗುಂಗು ಇರಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಿ ತನ್ನ ಸಂಖ್ಯೆ ವೃದ್ಧಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ಸಹ ಎಲ್ಲ ರೀತಿಯ ತಂತ್ರಗಳನ್ನೂ ಅನುಸರಿಸಲಿವೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.