ಐಪಿಎಲ್‌ ನಿಂದ ತಡವಾಯ್ತು ನಿರ್ಮಾಣ ಕಾರ್ಯ


Team Udayavani, May 21, 2018, 11:27 AM IST

dvg-2.jpg

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು, ವಿವಿಧ ಕ್ರೀಡೆಗಳ ತವರೂರು, ಕ್ರೀಡಾಭಿಮಾನಿಗಳ ನಗರಿ ದಾವಣಗೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಮೈದಾನಕ್ಕೆ ಕ್ರಿಕೆಟ್‌ ಪ್ರಿಯರು ಇನ್ನಷ್ಟು ದಿನ ಕಾಯಬೇಕಾಗಿದೆ.

ಕೆಲ ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ರಾಜ್ಯ ಕ್ರಿಕೆಟ್‌ ಸಂಸ್ಥೆಯ ದಿಗ್ಗಜರ ಸಮ್ಮುಖದಲ್ಲಿ ಶಾಮನೂರಿನ ಜೆ.ಎಚ್‌. ಪಟೇಲ್‌ ಬಡಾವಣೆಯಲ್ಲಿ ಸುಸಜ್ಜಿತ ಕ್ರಿಕೆಟ್‌ ಮೈದಾನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಮೈದಾನ ನಿರ್ಮಾಣ ಆಗಲಿದೆ ಎಂಬಂತ ಸ್ಥಿತಿ ಅಂದು
ಇತ್ತು.  

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಎಸ್‌ ಸಿಎನ ಘಟಾನುಘಟಿಗಳು ಕೆಲವೇ ತಿಂಗಳಲ್ಲಿ ಇಲ್ಲಿ ಕೆಪಿಎಲ್‌ ಪಂದ್ಯ ನಡೆಯಲಿವೆ. ಅಂತಹ ಸುಸಜ್ಜಿತ ಕ್ರಿಕೆಟ್‌ ಮೈದಾನ ನಿರ್ಮಾಣ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಆದರೆ, ಈ ವರೆಗೆ ಮೈದಾನಕ್ಕೆ ಕಾದಿರಿಸಿರುವ ಜಾಗದಲ್ಲಿ ಏನೂ ಆಗಿಲ್ಲ. ಶಂಕುಸ್ಥಾಪನೆ ನೆರವೇರಿದ ನಂತರ ಯಾರೂ ಸಹ ಇತ್ತ ಸುಳಿದಿಲ್ಲ.

ವಿಧಾನ ಪರಿಷತ್‌ ಸದಸ್ಯ ಕೊಂಡಜ್ಜಿ ಮೋಹನ್‌, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪ್ರಯತ್ನದಿಂದ ಕೆಲವೇ ದಿನಗಳಲ್ಲಿ ಅಗತ್ಯವಿದ್ದ ಜಾಗವನ್ನು ಡೂಡಾದಿಂದ ಕೆಎಸ್‌ಸಿಎಗೆ ಹಸ್ತಾಂತರ ಮಾಡುವ ಕಾರ್ಯವನ್ನು ಮಾಡಿದ್ದರು.

ಸ್ವತಃ ಕೆಎಸ್‌ಸಿಐ ಪದಾಧಿಕಾರಿಗಳೇ  ಬೆರಗಾಗಿದ್ದರು. ಈವರೆಗೆ ಅನೇಕ ಕಡೆ ನಾವು ಮೈದಾನ ನಿರ್ಮಾಣಕ್ಕೆ ಮುಂದೆ ಬಂದಾಗ ಸ್ಥಳೀಯ ನಾಯಕರು ತೋರಿದ ಆಸಕ್ತಿ, ಪ್ರೋತ್ಸಾಹದಾಯಕವಾಗಿರಲಿಲ್ಲ. ಆದರೆ, ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ತೋರಿದ ಆಸಕ್ತಿ ನಿಜಕ್ಕೂ ಅತ್ಯದ್ಭುತ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

 ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದ ದಾವಣಗೆರೆ ಎಕ್ಸ್‌ಪ್ರೆಸ್‌ ಖ್ಯಾತಿಯ ಭಾರತೀಯ ಕ್ರಿಕೆಟ್‌ ತಂಡದ ವೇಗದ ಬೌಲರ್‌ ವಿನಯಕುಮಾರ್‌ ಸಹ ಸಂತಸ ವ್ಯಕ್ತಪಡಿಸಿ, ನನ್ನ ಹುಟ್ಟೂರಾದ ದಾವಣಗೆರೆಯಲ್ಲಿ ಮೈದಾನ ಆಗುತ್ತಿರುವುದು
ನನಗೆ ಸಂತಸ ತಂದಿದೆ. ಆದಷ್ಟು ಬೇಗ ಮೈದಾನ ನಿರ್ಮಾಣ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್‌ ಮೈದಾನ ನಿರ್ಮಾಣ ಕಾರ್ಯ ಈಗಾಗಲೇ ಆರಂಭ ಆಗಬೇಕಿತ್ತು. ಆದರೆ, ಐಪಿಎಲ್‌ ಪಂದ್ಯಾವಳಿ ಆರಂಭವಾಗಿದ್ದರಿಂದ ಪಿಚ್‌ ನಿರ್ಮಾಣ ಕಾರ್ಯ ನಿಭಾಯಿಸುವರರು ಐಪಿಎಲ್‌ ಪಂದ್ಯ ನಡೆಯುವ ಮೈದಾನದ ನಿಗಾವಹಿಸಬೇಕಾಯಿತು. ಇದೇ ಕಾರಣಕ್ಕೆ ಇಲ್ಲಿನ ಮೈದಾನದ ಕಾರ್ಯ ಇನ್ನೂ ಆರಂಭವಾಗಿಲ್ಲ ಎನ್ನುತ್ತವೆ ಮೂಲಗಳು.

ಇದರ ಜೊತೆಗೆ ಇಲ್ಲಿ ನಿರ್ಮಾಣ ಆಗಲಿರುವ ಮೈದಾನ ಅಂತಾರಾಷ್ಟ್ರೀಯ ಗುಣಮಟ್ಟದ್ದಾಗಿರಲಿದೆ. ರಣಜಿ, ಕೆಪಿಎಲ್‌,
ವಲಯ ಮಟ್ಟದ ಪಂದ್ಯಾವಳಿ ಸೇರಿದಂತೆ ದೇಸಿಯ ಕ್ರಿಕೆಟ್‌ ಪಂದ್ಯ ಆಯೋಜಿಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮೈದಾನದಲ್ಲಿ ಒದಗಿಸುವ ಯೋಜನೆ ಸದ್ಯ ರೂಪುಗೊಳ್ಳುತ್ತಿದೆ.

ಮುಂದಿನ ವರ್ಷ ರಣಜಿ ಪಂದ್ಯ ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ವರ್ಷ ನಮ್ಮೂರಲ್ಲಿ ರಣಜಿ, ಕೆಪಿಎಲ್‌ ಪಂದ್ಯಗಳು ನಡೆಯಲಿವೆ. ರಾಜ್ಯ ತಂಡದಲ್ಲಿನ ಮನೀಶ್‌ ಪಾಂಡೆ, ಕೆ.ಎಲ್‌. ರಾಹುಲ್‌, ಕರುಣ್‌ ನಾಯರ್‌, ಮಯಾಂಕ್‌ ಅಗರವಾಲ್‌ ಸೇರಿದಂತೆ ಖ್ಯಾತನಾಮ ಕ್ರಿಕೆಟಿಗರ ಆಟವನ್ನು ನೇರವಾಗಿ ನೋಡುವ ಅವಕಾಶ ದೊರೆಯಲಿದೆ.

ಅಂತಾರಾಷ್ಟ್ರೀಯ ಮೈದಾನ ಆಗಲಿದೆ ನಮ್ಮ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮೈದಾನ ನಿರ್ಮಾಣ ಮಾಡುವ ಕನಸನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ್‌ ಹೊಂದಿದ್ದರು. ಅವರ ಪ್ರಯತ್ನದಿಂದಾಗಿ 8.5 ಎಕರೆ ವಿಶಾಲವಾದ ಜಮೀನು ಕ್ರಿಕೆಟ್‌ ಮೈದಾನಕ್ಕೆ ಸಿಕ್ಕಿದೆ. ಇಲ್ಲೊಂದು ಸುಸಜ್ಜಿತ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಮೈದಾನ ನಿರ್ಮಾಣ ಮಾಡುವ ಅವರ ಕನಸು ಶೀಘ್ರ ನನಸಾಗಲಿದೆ. 15 ದಿನಗಳಲ್ಲಿ ಮೈದಾನ ನಿರ್ಮಾಣ ಕಾರ್ಯ ಆರಂಭ ಆಗಲಿದೆ.
 ಕೆ. ಶಶಿಧರ್‌, ಕೆಎಸ್‌ಸಿಐ ಸದಸ್ಯ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.