ಖಾಸಗಿ ಶಾಲೆಗಲ್ಲಿ ಹಗಲು ದರೋಡೆ
Team Udayavani, May 21, 2018, 3:11 PM IST
ಕೆ.ಆರ್.ನಗರ: ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ 15 ರಿಂದ 20 ಪಟ್ಟು ಹೆಚ್ಚು ಶುಲ್ಕವನ್ನು ಪಡೆಯಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರುದ್ರೇಶ್ ಮತ್ತು ಸದಸ್ಯರು ಇಲ್ಲಿನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು. ಕೇಂದ್ರ ಪಠ್ಯಕ್ರಮದ ನೆಪ ಹೇಳಿ ದುಬಾರಿ ಶುಲ್ಕ ಸ್ವೀಕರಿಸುತ್ತಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ಸುಮಾರು 18 ಸಾವಿರ ರೂ. ವಸೂಲಿ ಮಾಡುತ್ತಿದೆ.
ಅಲ್ಲದೇ ಒಂದು ಕೊಠಡಿಯಲ್ಲಿ 40 ಮಕ್ಕಳಿಗೆ ಅವಕಾಶವಿದ್ದರೂ 90 ರಿಂದ 100 ಮಕ್ಕಳನ್ನು ತುಂಬಿ, ಮಕ್ಕಳಿಗೆ ಉಸಿರಾಟದ ತೊಂದರೆ ಉಂಟಾಗುವಂತೆ ಮಾಡುತ್ತಿದೆ. ವಾಸವಿ ಸೆಂಟ್ರಲ್ ಸ್ಕೂಲು ಕೇವಲ ಆಂಗ್ಲ ಮಾಧ್ಯಮ ಮಾತ್ರ ಅನುಮತಿ ಇದ್ದು, ಆ ಶಾಲೆಗೆ ಕೇಂದ್ರ ಅನುಮತಿ ಇದೆ ಎಂದು ಸುಳ್ಳು ನೆಪ ಹೇಳಿ 35 ಸಾವಿರದಿಂದ 70ರವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ನಿಗದಿಪಡಿಸಿರುವಂತೆ 600 ರೂ.ಗಳಿಂದ 2500 ರೂ. ವರೆಗೆ ಮಾತ್ರ ಶುಲ್ಕ ಪಡೆಯಬಹುದಾಗಿದೆ ಎಂದು ಮಾಹಿತಿ ಇದೆ. ಆದರೆ ಆರಂಭಿಕ ಶುಲ್ಕದಲ್ಲಿ ಅಭಿವೃದ್ಧಿ ನೆಪ ಒಡ್ಡಿ ಹೆಚ್ಚಿನ ಹಣ ವಸೂಲಿ ಮಾಡುತ್ತಿವೆ. ಇಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಅರ್ಪಿಸಿದರಲ್ಲದೆ, ಪತ್ರಿಕಾಗೋಷ್ಠಿಯ ಮೂಲಕ ಪೋಷಕರಿಗೆ ಮಾಹಿತಿ ನೀಡಬೇಕು.
ಇಲ್ಲದಿದ್ದರೆ ಪೋಷಕರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ 3 ದಿನಗಳೊಳಗೆ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ
Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ
MUST WATCH
ಹೊಸ ಸೇರ್ಪಡೆ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ