ಬಿರುಗಾಳಿ, ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬ: ಸುಳ್ಯ ಕತ್ತಲುಮಯ


Team Udayavani, May 21, 2018, 3:37 PM IST

21-may-18.jpg

ಸುಳ್ಯ : ಶನಿವಾರ ತಡರಾತ್ರಿ ಬೀಸಿದ ಗಾಳಿ ಮಳೆಯ ಅಬ್ಬರದ ಪರಿಣಾಮ ಸುಳ್ಯ 33 ಕೆವಿ ಸಬ್‌ ಸ್ಟೇಷನ್‌ ವ್ಯಾಪ್ತಿಯಿಂದ ಹೊರಡುವ ವಿದ್ಯುತ್‌ ಪೂರೈಕೆ ಮಾರ್ಗಗಳು ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಂಡು ಹತ್ತಾರು ಗ್ರಾಮಗಳು ಕತ್ತಲಲ್ಲೆ ಕಾಲ ಕಳೆದವು. ಬರೋಬ್ಬರಿ 24 ತಾಸು ಮಿಕ್ಕಿ ವಿದ್ಯುತ್‌ ಇಲ್ಲದೆ, ದಿನವಿಡೀ ಪರದಾಡುವ ಪರಿಸ್ಥಿತಿ ಉಂಟಾಯಿತು.

ಸುಳ್ಯ ನಗರ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಮಡಪ್ಪಾಡಿ, ಮರ್ಕಂಜ, ಗುತ್ತಿಗಾರು, ದುಗಲಡ್ಕ, ದೇವಚಳ್ಳ, ನೆಲ್ಲೂರು ಕೆಮ್ರಾಜೆ, ಅರಂತೋಡು ಮೊದಲಾದ ಗ್ರಾಮಗಳಲ್ಲಿ ಶನಿವಾರ ತಡರಾತ್ರಿಯಿಂದ ರವಿವಾರ ದಿನಪೂರ್ತಿ ವಿದ್ಯುತ್‌ ಇರಲಿಲ್ಲ. ಹಲವು ಭಾಗದಲ್ಲಿ ಗಾಳಿ ಮಳೆಯಿಂದ ಉಂಟಾದ ತೊಂದರೆಯಿಂದ ಯಾವುದೇ ಫೀಡರ್‌ಗಳು ಕಾರ್ಯ ನಿರ್ವಹಿಸಲಿಲ್ಲ.

ಸುಳ್ಯ 33 ಕೆವಿ ಸಬ್‌ಸ್ಟೇಷನ್‌ ವ್ಯಾಪ್ತಿಯಲ್ಲಿ ನೂರಾರು ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿ ಉಂಟಾಗಿರುವುದು ವಿದ್ಯುತ್‌ ವ್ಯತಯಕ್ಕೆ ಕಾರಣವಾಗಿದೆ. ಹಲವೆಡೆ ಮರಗಳ ವಿದ್ಯುತ್‌ ಕಂಬ ಹಾಗೂ ಲೈನ್‌ ಮೇಲೆ ಬಿದ್ದಿದ್ದು, ಅದರ ತೆರವು ಕಾರ್ಯ ಆದ ಬಳಿಕ, ಹೊಸ ಕಂಬ ಅಳವಡಿಸಿ, ತಂತಿ ಎಳೆದು ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಿದೆ.

33 ಕೆವಿ ಸಬ್‌ಸ್ಟೇಷನ್‌ ಕಚೇರಿ ಬಳಿಯೇ ವಿದ್ಯುತ್‌ ಕಂಬ ಧರೆಗುರಳಿದೆ. ನಗರದ ನಾನಾ ಭಾಗಗಳಲ್ಲಿ ಸಾಲು-ಸಾಲು ಕಂಬಗಳು ಉರುಳಿವೆ. ಮೆಸ್ಕಾಂ ಸಿಬಂದಿ ಕಂಬ ಜೋಡಣೆ ಕಾರ್ಯದಲ್ಲಿ ನಿರತರಾಗಿದ್ದು, ಪೂರ್ಣ ಪ್ರಮಾಣದಲ್ಲಿ ಅಳವಡಿಕೆಗೆ ಸೋಮವಾರ ತನಕವು ಕಾಯಬೇಕಿದೆ. ಕಾಡು ಆವರಿತ ಪ್ರದೇಶಗಳಲ್ಲೂ ಕಂಬಗಳಿಗೆ ಹಾನಿ ಉಂಟಾಗಿರುವುದು ತತ್‌ಕ್ಷಣ ಜೋಡಣೆಗೆ ಸವಾಲೆನಿಸಿದೆ.

ರವಿವಾರ ಪೇಟೆಯಲ್ಲಿ ವ್ಯವಹಾರ ನೀರಸವಾಗಿತ್ತು. ವಿದ್ಯುತ್‌ ಇಲ್ಲದ ಪರಿಣಾಮ ಸಣ್ಣ ಪುಟ್ಟ ಉದ್ಯಮದಾರರು, ಹೋಟೆಲ್‌, ಬೇಕರಿ, ಜ್ಯೂಸ್‌ ಸೆಂಟರ್‌ ಮೊದಲಾದ ಅಂಗಡಿ ಮುಂಗಟ್ಟುಗಳಿಗೆ ತೊಂದರೆ ಉಂಟಾಯಿತು. ಗ್ರಾಮಾಂತರ ಪ್ರದೇಶದಲ್ಲಿಯೂ ರಾತ್ರಿ ವಿದ್ಯುತ್‌ ಇಲ್ಲದೆ ಜನರು ಪರದಾಡಿದರು. ಕೊಳವೆಬಾವಿ, ನಳ್ಳಿ ನೀರು ಆಶ್ರಯ ಹೊಂದಿರುವ ಮಂದಿಯೂ ವಿದ್ಯುತ್‌ ಅಭಾವದಿಂದ ಸಮಸ್ಯೆಗೊಳಗಾದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.