ತ್ರಿವಳಿ ವಿದ್ಯಾರ್ಥಿಗಳ ವಿಶಿಷ್ಟ ಸಾಧನೆ


Team Udayavani, May 21, 2018, 3:57 PM IST

21-may-19.jpg

ಮಂಗಳೂರು: ಭಾಗಶಃ ಅಂಧತ್ವ ಇದ್ದರೂ ಅದನ್ನು ಮೆಟ್ಟಿ ನಿಂತು ಎಸೆಸೆಲ್ಸಿಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ಉತ್ತೀರ್ಣರಾದ, ಒಂದೇ ಮನೆಯ ಮೂವರು ವಿದ್ಯಾರ್ಥಿಗಳ ಯಶೋಗಾಥೆಯಿದು.

ಕಾಟಿಪಳ್ಳ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಜೀವನ್‌, ಜಯೇಶ್‌ ಮತ್ತು ಜಿತೇಶ್‌ ಈ ಸಾಧಕ ವಿದ್ಯಾರ್ಥಿಗಳು. ಮೂವರೂ ಕಾಟಿಪಳ್ಳ ಐದನೇ ಬ್ಲಾಕ್‌ ನಿವಾಸಿಗಳು. ಜೀವನ್‌ ಮತ್ತು ಜಯೇಶ್‌ ತಲಾ 541 ಅಂಕ ಪಡೆದಿದ್ದರೆ ಜಿತೇಶ್‌ 518 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮೂವರಿಗೂ ಭಾಗಶಃ ಅಂಧತ್ವ ಇದೆ, ಆದರೆ ಸಾಧನೆಗೆ ದೃಷ್ಟಿ ಸಮಸ್ಯೆ ಅಡ್ಡಿಯಲ್ಲ ಎಂಬುದನ್ನು ಶ್ರುತಪಡಿಸಿದ್ದಾರೆ. ಈ ಮಕ್ಕಳ ತಾಯಿ ಊರ್ಮಿಳಾ (ದೂರವಾಣಿ: 8904810474) ಮನೆಯಲ್ಲಿ ಬೀಡಿ ಕಟ್ಟುತ್ತಾರೆ, ತಂದೆ ವಿಶ್ವನಾಥ ಶೆಟ್ಟಿಗಾರ್‌ ಕೂಲಿ ಕೆಲಸ ಮಾಡುತ್ತಾರೆ.

ಮೂವರಿಗೂ ಪರೀಕ್ಷೆ ಬರೆಯಲು ಸಹಾಯಕರನ್ನು ನೇಮಿಸಿಕೊಳ್ಳುವ ಅವಕಾಶವಿತ್ತು. ಆದರೆ ಈ ಅವಕಾಶ ನಿರಾಕರಿಸಿ ತಾವೇ ಸ್ವತಃ ಪರೀಕ್ಷೆ ಬರೆದು ಉನ್ನತ ಶ್ರೇಣಿಯಲ್ಲೇ ಪಾಸಾಗಿದ್ದಾರೆ. 

ತೀವ್ರ ಆರ್ಥಿಕ ಸಮಸ್ಯೆ
ಇವರೊಂದಿಗೆ ಇದೇ ಶಾಲೆಯ ಇನ್ನೋರ್ವ ವಿದ್ಯಾರ್ಥಿನಿ, ಬಡ ಕುಟುಂಬದ ಹಿನ್ನೆಲೆಯ ಸುಶ್ಮಿತಾ 591 ಅಂಕ ಗಳಿಸಿದ್ದಾಳೆ. ನಾಲ್ವರು ವಿದ್ಯಾರ್ಥಿಗಳೂ ಪ್ರತಿಭಾವಂತರು. ಮನೆಯಲ್ಲಿ ತೀವ್ರ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗದೆ ಶಿಕ್ಷಣ ಮೊಟಕುಗೊಳಿಸುವ ನಿರ್ಧಾರಕ್ಕೆ ಬಂದಿದ್ದರು. ಆದರೆ ವಿದ್ಯಾರ್ಥಿಗಳ ಪ್ರತಿಭೆ ಗಮನಿಸಿದ ಸ್ಥಳೀಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು ಕಳೆದ ಸುಮಾರು ನಾಲ್ಕು ವರ್ಷದಿಂದ ಈ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಬೇಕಾಗುವ ಎಲ್ಲ ವ್ಯವಸ್ಥೆಗಳನ್ನು ಉಚಿತವಾಗಿ ನೀಡಿತ್ತು. ವಿದ್ಯಾರ್ಥಿಗಳ ಸಾಧನೆಯಿಂದ ಖುಷಿಯಾಗಿದೆ, ಮುಂದೆಯೂ ಅವರಿಗೆ ಉಚಿತ ವಿದ್ಯಾಭ್ಯಾಸಕ್ಕೆ ವ್ಯವಸ್ಥೆಗೊಳಿಸುವುದಾಗಿ ಸಮಿತಿ ಅಧ್ಯಕ್ಷ ದುರ್ಗಾಪ್ರಸಾದ್‌ ಹೊಳ್ಳ ತಿಳಿಸಿದ್ದಾರೆ.

ಈಗಿನ ಅಂಕಗಳಿಂದ ಸಮಾಧಾನ ಆಗಿಲ್ಲ 
ಇನ್ನೂ ಹೆಚ್ಚು ಅಂಕ ಬರುವ ನಿರೀಕ್ಷೆ ಇತ್ತು, ಈಗ ಲಭಿಸಿರುವ ಅಂಕಗಳಿಂದ ಸಮಾಧಾನ ಆಗಿಲ್ಲ. ಸಹಾಯ ಪಡೆದು ಪರೀಕ್ಷೆ ಬರೆಯುವ ಅವಕಾಶ ಇದ್ದರೂ ಸ್ವತಃ ಉತ್ತರಿಸಬೇಕು ಎಂದು ಬಯಸಿ ಹಾಗೆಯೇ ಮಾಡಿದೆವು. ಮುಂದೆ ಮೂವರೂ ವಾಣಿಜ್ಯ ವಿಷಯದಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತೇವೆ.
– ಜೀವನ್‌

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.