ಕಳವಿನ ಶಂಕೆ: ದಲಿತನನ್ನು ಹೊಡೆದು ಕೊಂದ ಫ್ಯಾಕ್ಟರಿ ಕೆಲಸಗಾರರು
Team Udayavani, May 21, 2018, 4:04 PM IST
ಹೊಸದಿಲ್ಲಿ : ಗುಜರಾತ್ನ ರಾಜ್ಕೋಟ್ನಲ್ಲಿ ಫ್ಯಾಕ್ಟರಿಯೊಂದರಲ್ಲಿ ಕಳ್ಳತನ ನಡೆಸಿದ ಶಂಕೆಯಲ್ಲಿ ದಲಿತ ವ್ಯಕ್ತಿಯೋರ್ವನನ್ನು ನಿರ್ದಯವಾಗಿ ಹೊಡೆದು ಸಾಯಿಸಲಾಗಿರುವ ಘಟನೆ ನಿನ್ನೆ ಭಾನುವಾರ ನಡೆದಿದ್ದು ಈ ಅಮಾನುಷ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ಚಿತ್ರಿಕೆಯನ್ನು ಹಂಚಿಕೊಂಡಿರುವ ಗುಜರಾತ್ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಮಿತ್ ಚಾವ್ಡಾ ಅವರು, ಅಮಾನುಷವಾಗಿ ಹೊಡೆದು ಸಾಯಿಸಲ್ಪಟ್ಟಿರುವ ದಲಿತ ವ್ಯಕ್ತಿಯ ಹೆಸರು ಮುಕೇಶ್ ವಾಣಿಯ ಎಂದು ಹೇಳಿದ್ದಾರೆ.
“ಮುಕೇಶ್ ವಾಣಿಯಾ ಫ್ಯಾಕ್ಟರಿ ಹೊರಗಿನ ಕಸವನ್ನು ಸಂಗ್ರಹಿಸುತ್ತಿದ್ದ. ಕಳವು ಗೈದ ಶಂಕೆಯಲ್ಲಿ ಆತನನ್ನು ಅಮಾನುಷವಾಗಿ ಹೊಡೆದು ಸಾಯಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಫ್ಯಾಕ್ಟರಿ ಆವರಣದಲ್ಲಿದ್ದ ಆತನ ಪತ್ನಿಯನ್ನು ಕೂಡ ಹೊಡೆದಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
ದಲಿತ ವ್ಯಕ್ತಿಯನ್ನು ಅದೇ ಫ್ಯಾಕ್ಟರಿಯ ಮೂವರು ಕೆಲಸಗಾರರು ಹೊಡೆದು ಸಾಯಿಸಿದ್ದಾರೆ ಎಂದು ಅಲಹಾಬಾದ್ ಮಿರರ್ ವರದಿ ಮಾಡಿದೆ. ಇದನ್ನು ಅನುಸರಿಸಿ ಪೊಲೀಸರು ಘಟನೆ ಬಗ್ಗೆ ಕೇಸು ದಾಖಲಿಸಿಕೊಂಡು ಇಬ್ಬರು ಫ್ಯಾಕ್ಟರಿ ಕೆಲಸಗಾರರನ್ನು ಬಂಧಿಸಿ ಅವರನ್ನು ಪ್ರಶ್ನಿಸುತ್ತಿದ್ದಾರೆ.
ಮೃತ ವಾಣಿಯಾ ನ ಪತ್ನಿ ತನ್ನ ಕೆಲವು ಸಂಬಂಧಿಕರೊಂದಿಗೆ ಸ್ಥಳಕ್ಕೆ ಧಾವಿಸಿ ಬಂದಾಗಲೇ ಹಲ್ಲೆಕೋರರು ಹೊಡೆಯುವುದನ್ನು ನಿಲ್ಲಿಸಿದ್ದರು. ಮಾರಣಾಂತಿಕವಾಗಿ ಗಾಯಗೊಂಡಿದ್ದ ವಾಣಿಯಾ ನನ್ನು ರಾಜ್ಕೋಟ್ ಸಿವಿಲ್ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ ಆತ ಕೊನೆಯುಸಿರೆಳೆದನೆಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!
Madhya Pradesh: ಮತ್ತೊಬ್ಬ ಕಾಂಗ್ರೆಸ್ ಎಂಎಲ್ಎ ಬಿಜೆಪಿಗೆ
ನೂಪುರ್ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ
MUST WATCH
ಹೊಸ ಸೇರ್ಪಡೆ
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!