ಸೋಮೇಶ್ವರ ಕಡಲ ತಡಿಯಲ್ಲಿ ಮೂಲಸೌಕರ್ಯ ಕೊರತೆ


Team Udayavani, May 22, 2018, 2:35 AM IST

2105kdlm1ph1.jpg

ಕುಂದಾಪುರ: ಸೋಮೇಶ್ವರ ಕಡಲ ತೀರದಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಒಂದೆಡೆ ಸೋಮೇಶ್ವರ ದೇವಾಲಯ, ಇನ್ನೊಂದೆಡೆ ಕ್ಷಿತಿಜ ನೇಸರಧಾಮ, ಮತ್ತೂಂದೆಡೆ ಸಮುದ್ರ ಬದಿಯಲ್ಲೇ ಸಿಹಿನೀರ ಕೆರೆ ಹೀಗೆ ಹತ್ತಾರು ಆಕರ್ಷಣೆ, ವಿಶೇಷಗಳನ್ನು ಒಳಗೊಂಡಿದ್ದರೂ ಪ್ರವಾಸೋದ್ಯಮದ ದೃಷ್ಟಿಯಿಂದ ಸೋಮೇಶ್ವರ ಹಿಂದುಳಿದಿದೆ. ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‌ ಈಗ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಪ್ರವಾಸೋದ್ಯಮ ಇಲಾಖೆ ಇದನ್ನು ಜಿಲ್ಲೆಯ ಸುರಕ್ಷಿತ ಕಡಲ ಕಿನಾರೆ ಎಂದು ಘೋಷಿಸಲು ಸಿದ್ಧತೆ ನಡೆಸಿದೆ. ಇದರಿಂದಾಗಿ ಬೈಂದೂರು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಿದೆ.

ಅಪಾಯ ರಹಿತ ಬೀಚ್‌
ಈ ಬೀಚ್‌ ನಗಣ್ಯವಲ್ಲ. ಪ್ರವಾಸಿಗರಿಗೆ ಮಾಹಿತಿಯೂ ಇಲ್ಲದಿಲ್ಲ. ನೂರಾರು ಪ್ರವಾಸಿಗರು ಬರುತ್ತಾರೆ. ಈ ವರೆಗೆ ಯಾವುದೇ ಅಪಾಯ ಸಂಭವಿಸದೇ ಇರುವುದರಿಂದ ಅಪಾಯ ರಹಿತ ಬೀಚ್‌ ಎಂದು ಗುರುತಿಸಲ್ಪಟ್ಟಿದೆ. 

ಸೌಕರ್ಯಗಳಿಲ್ಲ
ಪ್ರವಾಸಿಗರು ಬಂದಾಗ ಸುಸಜ್ಜಿತ ಪಾರ್ಕಿಂಗ್‌, ಕುಳಿತುಕೊಳ್ಳಲು ಬೆಂಚ್‌, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಸ್ನಾನಗೃಹ, ಬಟ್ಟೆ ಬದಲಿಸುವ ಕೊಠಡಿ, ಶೌಚಾಲಯ ಇತ್ಯಾದಿ ಸೌಕರ್ಯಗಳ ಅಗತ್ಯವಿದೆ. ಕಡಲತೀರಕ್ಕೆ ಬರಲು ಸುಸಜ್ಜಿತ ರಸ್ತೆ ಬೇಕು.

ನೇಸರಧಾಮ
ಸಮೀಪದ ವತ್ತಿನೆಣೆಯಲ್ಲಿ  ಅರಣ್ಯ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಕ್ಷಿತಿಜ ನೇಸರಧಾಮವಿದೆ. ಬಾನು ಕೆಂಪೇರುವ ಹೊತ್ತು ತಂಪಾಗಿಸುವ ಆಹ್ಲಾದಕರ ಗಾಳಿಗೆ ಮೈಯೊಡ್ಡಿ ಸಮುದ್ರತಟದಲ್ಲಿ  ಮೇಲ್ದಂಡೆಯ ಅಟ್ಟಳಿಗೆಯಲ್ಲಿ ನಿಂತು ಸೂರ್ಯಾಸ್ತಮಾನ ವೀಕ್ಷಿಸಲೂ ಸಾಧ್ಯ. 

ಹೆಸರಿನಿಂದ ಗೊಂದಲ
ಸೋಮೇಶ್ವರ ಬೀಚ್‌ ಕುರಿತು ಮಾಹಿತಿಯ ಕೊರತೆ ಇದೆ. ಕೆಲವರು ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ ಎಂದು ಭಾವಿಸುತ್ತಾರೆ. ಆದ್ದರಿಂದ ಇಲಾಖೆ ಈ ಕುರಿತು ಗಮನ ಹರಿಸಿ ಮಾಹಿತಿ ಫ‌ಲಕದ ಅಲ್ಲಲ್ಲಿ ಹಾಕುವ ಅಗತ್ಯವಿದೆ. 

ಡಿಸೆಂಬರ್‌ನಲ್ಲಿ ಪೂರ್ಣ
ಮೂಲಸೌಕರ್ಯ ವೃದ್ಧಿಗೆ ವಿಸ್ತೃತ ಯೋಜನಾ ವರದಿ ತಯಾರಾಗುತ್ತಿದ್ದು ಡಿಸೆಂಬರ್‌ ವೇಳೆಗೆ ಕೋಸ್ಟಲ್‌ ಸರ್ಕ್ನೂಟ್‌ ಯೋಜನೆಯಿಂದ ಶೌಚಾಲಯ, ಸ್ನಾನಗೃಹ, ವಿರಾಮದ ಕುರ್ಚಿ ಸೇರಿದಂತೆ ಕಾಮಗಾರಿ ಅನುಷ್ಠಾನವಾಗಲಿದೆ.
– ಅನಿತಾ,ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ

ಮೂಲಸೌಕರ್ಯ ಅಗತ್ಯ
ಇಲ್ಲಿ ಬಂದರೆ ಉಳಿದುಕೊಳ್ಳುವ ಪ್ರವಾಸಿಗರಿಗೆ ವಸತಿಗೃಹದ ಆವಶ್ಯಕತೆಯಿದೆ. ಜತೆಗೆ ಶೌಚಾಲಯ, ಸ್ನಾನಗೃಹ ಬೇಕು. ಪ್ರವಾಸಿಗರ ವಾಹನ ಇರಿಸಲು ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಕೂಡಾ ಇಲ್ಲ. ಪ್ರಕೃತಿ ಸಹಜ ಸುಂದರ ತಾಣ. ಆದರೆ ಮೂಲಸೌಕರ್ಯಗಳಿಲ್ಲದೇ ಬರಡಾಗುತ್ತಿದೆ. 
– ರಾಮ ಕೆ.,ಸೋಡಿತಾರ್‌, ಉದ್ಯಮಿ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.