ಅರವತ್ತು ರೂಪಾಯಿಗಳ ಸೀರೆ


Team Udayavani, May 22, 2018, 6:00 AM IST

7.jpg

ನನಗೆ ಮೈಸೂರಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಸಾಂಪ್ರದಾಯಿಕ ತತ್ವಗಳಿಗೆ ಅಂಟಿಕೊಂಡಿದ್ದ ಅಣ್ಣನಿಂದ ಸಮ್ಮತಿ ದೊರಕಿರಲಿಲ್ಲ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದ ನನಗೆ ಅಂದಿನ ದಿನಗಳಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗಿರಲಿಲ್ಲ. ನಮ್ಮ ಮನೆತನದಲ್ಲಿ ಹೆಣ್ಣುಮಕ್ಕಳು ಯಾರೂ ಕೆಲಸಕ್ಕೆ ಹೋಗಬಾರದು ಎಂಬ ಆಜ್ಞೆ ಅಣ್ಣನಿಂದ. ತಂದೆಯನ್ನು ಕಳೆದುಕೊಂಡಿದ್ದ ನಾವು ಅವನ ಮಾತಿಗೆ ತಲೆ ಬಾಗಲೇಬೇಕಾಗಿತ್ತು. ಕಿತ್ತು ತಿನ್ನುವ ಬಡತನ. ಸಣ್ಣಪುಟ್ಟ ಬೇಕು ಬೇಡಗಳಿಗೂ ಮನೆಯವರನ್ನು ಅವಲಂಬಿಸಬೇಕಾಗಿತ್ತು. 

ಅಂಥ ಸಮಯದಲ್ಲಿ ನನಗೆ ನೆರವಾದವಳು ನನ್ನ ಗೆಳತಿ. ಆ ದಿನಗಳಲ್ಲಿ ಮಹಿಳಾ ಸಮಾಜದಿಂದ ಬಾಸ್ಕೆಟ್‌ಗಳನ್ನು ಹೆಣೆಸಿ, ಒಂದಕ್ಕೆ ಹನ್ನೆರಡು ರೂಪಾಯಿಗಳಂತೆ ಕೊಡುತ್ತಿದ್ದರು. ಅವುಗಳನ್ನು ಒಬ್ಬಳೇ ಮಾಡಿ ಪೂರೈಸುವ ಅರ್ಹತೆಯಿದ್ದರೂ ಆ ಗೆಳತಿ ನನ್ನ ಕಷ್ಟವನ್ನು ನೋಡಿ, ಅದರಲ್ಲಿ ಅರ್ಧವನ್ನು ನನಗೂ ವಹಿಸಿ ನಾನೂ ಅಲ್ಪಸ್ವಲ್ಪ ದುಡ್ಡು ಗಳಿಸುವಂತೆ ಮಾಡಿದಳು.

ಮಹಿಳಾ ಮಂಡಳಿಯವರು ಸದಸ್ಯೆಯರಿಂದ ಹಣ ಸಂಗ್ರಹಿಸಿ, ಅದನ್ನು ಅಂಚೆ ಕಚೇರಿಯ ಉಳಿತಾಯ ಖಾತೆಗೆ ತಿಂಗಳು ತಿಂಗಳೂ ಠೇವಣಿ ಇಡುತ್ತಿದ್ದರು. ಅದನ್ನು ಬರೆದು ಕಚೇರಿಗೆ ಕಳುಹಿಸುವ ಜವಾಬ್ದಾರಿಯನ್ನು ನನಗೇ ವಹಿಸಿ, ತಿಂಗಳಿಗೆ ಮೂವತ್ತು ರೂಪಾಯಿಗಳಂತೆ ಕೊಡುತ್ತಿದ್ದರು. 

ಈ ಎಲ್ಲಾ ಹಣವನ್ನು ಸಂಗ್ರಹಿಸಿ, ಅಂಚೆ ಕಚೇರಿಯಲ್ಲಿಟ್ಟು ಅದರಿಂದ 60-70 ರೂಪಾಯಿಗಳನ್ನು ತೆಗೆದು ನನ್ನ ಅಮ್ಮನಿಗೆ ಒಂದು ಸೀರೆ ತೆಗೆದುಕೊಟ್ಟೆ. ಹೊರಗಡೆ ಉಟ್ಟುಕೊಂಡು ಹೋಗಲು ಒಂದು ಒಳ್ಳೆಯ ಸೀರೆಯೂ ಇಲ್ಲದಿದ್ದ ಅವರಿಗೆ ಇದು ಪೀತಾಂಬರದಂತೆ ಭಾಸವಾಗಿ ಸೀರೆಯನ್ನು ಕಂಡು ಗಳಗಳನೆ ಅತ್ತಿದ್ದರು. ಅದನ್ನು ಅವರು ನಾಲ್ಕಾರು ಸಲ ಉಟ್ಟಿರಬಹುದು. ನಂತರ ದುರದೃಷ್ಟಕ್ಕೆ ಹಾಸಿಗೆ ಹಿಡಿದುಬಿಟ್ಟರು. 

ಸೀರೆಯ ಮೌಲ್ಯ ಎಷ್ಟೇ ಇರಲಿ, ಅದನ್ನು ಅವರು ಎಷ್ಟು ಬಾರಿಯೇ ಉಟ್ಟಿರಲಿ, ನನ್ನ ಅಮ್ಮನಿಗೆ ಮೊದಲ ಸಂಪಾದನೆಯಿಂದ ತೆಗೆದುಕೊಟ್ಟ ಉಡುಗೊರೆ ಅದು ಎಂಬ ತೃಪ್ತಿ ನನ್ನಲ್ಲಿ ಇನ್ನೂ ಮಾಸಿಲ್ಲ. 

ಪುಷ್ಪಲತಾ ಎನ್‌.ಕೆ. ರಾವ್‌

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.