ರಸ್ತೆ ಅಪಘಾತ: 7 ಮಂದಿ ದುರ್ಮರಣ
Team Udayavani, May 22, 2018, 7:00 AM IST
ಶಿರಾ(ತುಮಕೂರು): ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನ ಮೃತಪಟ್ಟು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಅನುಷಾ(7), ಸವಿತಾ(21), ರತ್ನಮ್ಮ(38) , ಸುಮಲತಾ(21), ಗಿರಿಜಮ್ಮ ಪಟ್ಟನಾಯಕನಹಳ್ಳಿಗೆ ಸೇರಿದವರಾಗಿದ್ದಾರೆ. ಶಂಕರ(35), ಅಶ್ವತ್ಥನಾರಾಯಣ (40) ಇಲ್ಲಿನ ಜ್ಯೋತಿನಗರ ವಾಸಿಗಳು ಎಂದು ಗುರುತಿಸಲಾಗಿದೆ.
ತಾಲೂಕಿನ ವಿವಿಧ ಭಾಗಗಳಿಂದ ಸಿಗಂದೂರು ಪ್ರವಾಸಕ್ಕೆಂದು ಖಾಸಗಿ ಬಸ್ನಲ್ಲಿ ತೆರಳಿದ್ದ ಸುಮಾರು 55 ಜನರಿದ್ದ ತಂಡ ಪ್ರವಾಸ ಮುಗಿಸಿ ಇನ್ನೇನು ಶಿರಾ ತಲುಪುವ ವೇಳೆ ಅಪಘಾತ ಸಂಭವಿಸಿದೆ. ಶನಿವಾರ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ತೆರಳಿದ್ದ ತಂಡ ವಾಪಸ್ ಬರುವಾಗ ಶಿರಾ ಹೊರವಲಯದ ಡಾಬಾ ಒಂದರ ಬಳಿ ನಿಲ್ಲಿಸಿದ್ದ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದಕ್ಕೆ ದುರ್ದೈವಿಗಳಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆ ನಂತರ ಬಸ್ ಚಾಲಕ ನಾಪತ್ತೆಯಾಗಿದ್ದಾನೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಇಂಡಿಕೇಟರ್ ಹಾಕದೇ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ