ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ನಿಫಾ ಕಟ್ಟೆಚ್ಚರ


Team Udayavani, May 22, 2018, 6:00 AM IST

29.jpg

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ ವೈರಸ್‌ ಇತ್ತ ಕಾಲಿಡದಂತೆ ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆಯು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಇದುವರೆಗೆ ನಿಫಾ ವೈರಸ್‌ ಸೋಂಕು ಪ್ರಕರಣ ವರದಿಯಾಗಿಲ್ಲ.  

ಬಾವಲಿ, ಹಂದಿಗಳಿಂದ ವೈರಸ್‌
ನಿಫಾ ವೈರಸ್‌ ಪ್ರಮುಖವಾಗಿ ಬಾವಲಿ, ಹಂದಿಗಳಿಂದ ಹರಡುತ್ತದೆ. ಇತರ ಸಾಕು ಪ್ರಾಣಿಗಳಿಂದಲೂ ಮನುಷ್ಯರಿಗೆ ತಗಲುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾಕು ಪ್ರಾಣಿಗಳಲ್ಲಿ ರೋಗಕಾರಕ ವೈರಸ್‌ ಇದೆಯೇ ಎಂದು ಪತ್ತೆ ಮಾಡಲು ಜಿಲ್ಲೆಯ ಎಲ್ಲ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಜತೆಗೆ ರೋಗ ಪೀಡಿತರ ಕೆಮ್ಮು, ಸೀನುಗಳಿಂದಲೂ ವೈರಸ್‌ ಪ್ರಸರಣ ಆಗುವ ಸಾಧ್ಯತೆ ಇರುವುದರಿಂದ ಅತೀ ಎಚ್ಚರಿಕೆ ಅವಶ್ಯ. ರೋಗ ಲಕ್ಷಣಗಳು ಪತ್ತೆಯಾದಲ್ಲಿ ರಕ್ತದ ಸ್ಯಾಂಪಲ್‌ ಅನ್ನು ಮಣಿಪಾಲ್‌ ಎಂಸಿಇಆರ್‌ಗೆ ಕಳುಹಿಸಿ ಪರೀಕ್ಷಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಬಿದ್ದ ಹಣ್ಣು ತಿನ್ನಬೇಡಿ
ಬಾವಲಿಗಳು ಕಚ್ಚಿ ಬಿದ್ದ ಹಣ್ಣುಗಳನ್ನು ಮನುಷ್ಯರು ತಿಂದಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಈಗ ಹಣ್ಣುಗಳ ಋತು ಆಗಿದ್ದು, ಮುನ್ನೆಚ್ಚರಿಕೆ ಯಾಗಿ ಮರದಿಂದ ಬಿದ್ದಿರುವ ಹಣ್ಣುಗಳನ್ನು ತಿನ್ನಬಾರದು. ಎಲ್ಲ ರೀತಿಯ ಹಣ್ಣುಗಳನ್ನು ಸ್ವತ್ಛವಾಗಿ ತೊಳೆದು ತಿನ್ನಬೇಕು. 

ನಿರ್ದಿಷ್ಟ ಔಷಧ ಇಲ್ಲ
ಸಾಕುಪ್ರಾಣಿಗಳ ಮೂಲಕ ಹರಡುವ ಈ ರೋಗಕ್ಕೆ ಇಲ್ಲಿವರೆಗೆ ನಿರ್ದಿಷ್ಟ ಔಷಧ ಇಲ್ಲ, ಲಸಿಕೆಯೂ ಇಲ್ಲ. ಸದ್ಯಕ್ಕೆ ಎಚ್‌1ಎನ್‌1ನಂತಹ ಸಾಂಕ್ರಾಮಿಕ ರೋಗಗಳಿಗೆ ಕೊಡುವ ಆ್ಯಂಟಿ ವೈರಸ್‌ ಔಷಧಿಯನ್ನೇ ಇದಕ್ಕೂ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ 
ಡಾ| ರಾಜೇಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ. 

ಉಡುಪಿಯಲ್ಲಿ ಇಂದು ಸಭೆ
ಉಡುಪಿ ಜಿಲ್ಲೆಯಲ್ಲಿ ನಿಫಾ ಜ್ವರ ಕಂಡುಬಂದಿಲ್ಲವಾದರೂ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಎಚ್ಚರಿಕೆಯಿಂದ ಇರುವಂತೆ ಸರಕಾರದಿಂದ ಸೂಚನೆ ಬಂದಿದೆ. ಮೇ 22ರಂದು ಆರೋಗ್ಯ ಇಲಾಖೆಯ ಸಭೆ ನಡೆಯ ಲಿದ್ದು ಈ ಜ್ವರದ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.

ಕೇರಳಕ್ಕೆ ಕೇಂದ್ರ ತಜ್ಞರ ತಂಡ
ಕಾಸರಗೋಡು: ರಾಜ್ಯದಲ್ಲಿ ಮಾರಕವಾದ “ನಿಫಾ’ ವೈರಸ್‌ ಸೋಂಕು ಹರಡತೊಡಗಿದ್ದು, ಕಲ್ಲಿಕೋಟೆ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಒಟ್ಟು 9 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯ ಸರಕಾರ ಕಟ್ಟೆಚ್ಚರ ಘೋಷಿಸಿದ್ದು, ಅದರ ಮನವಿ ಮೇರೆಗೆ ಕೇಂದ್ರದ ತಜ್ಞರ ತಂಡ ಕಲ್ಲಿಕೋಟೆಗೆ ಆಗಮಿಸಿದ್ದು ವೈರಸ್‌ ಹುಟ್ಟಲು ಕಾರಣವೇನು ಎಂಬುದನ್ನು ಪರಿಶೀಲಿಸುತ್ತಿದೆ.

ಕಲ್ಲಿಕೋಟೆ ಜಿಲ್ಲೆಯ ಪೆರುಂಬಾದ ಒಂದೇ ಕುಟುಂಬದ ಮೊಹಮ್ಮದ್‌ ಸಾದಿಕ್‌ (26), ಮೊಹಮ್ಮದ್‌ ಸಾಲಿಯಾ (28), ಮರಿಯಮ್ಮ (50) ಸಾವಿಗೀಡಾಗಿದ್ದಾರೆ. ತಿರುಂಬಾಟಿಯ ಇಸ್ಮಾಯಿಲ್‌ (50) ಸಿಂಧು (36), ಪೊನ್ಮಲದ ಮೊಹಮ್ಮದ್‌ ಶಿಬಿಲಿ (14), ಕಲ್ಲಿಕೋಟೆ ಕಿಳತ್ತೂರಿನ ವೇಲಾಯುಧನ್‌ (48), ಪೆರುಂಬಾದಲಿನಿ (31) ಸಾವಿಗೀಡಾದರು. ರೋಗಿಗಳ ಆರೈಕೆ ಮಾಡಿದ ಕಲ್ಲಿಕೋಟೆ ಚೀಲತ್ತೂರಿನ ಬಾಬು ಸೆಬಾಸ್ಟಿನ್‌ ಅವರ ಪತ್ನಿ ಹೆಡ್‌ ನರ್ಸ್‌ ಟಿಸಿ ಜಾರ್ಜ್‌ (50) ಕೂಡ ಮೃತಪಟ್ಟಿದ್ದಾರೆ. 

ಎಲ್ಲ  ವೈದ್ಯರಿಗೂ ಸೂಚನೆ
ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ನಿಫಾ ಚಿಕಿತ್ಸೆಗೆ ಈವರೆಗೆ ರೋಗಿಗಳು ದಾಖಲಾಗಿಲ್ಲ. ಆದಾಗ್ಯೂ ನಮ್ಮ ಎಲ್ಲ ವೈದ್ಯರಿಗೆ ಈ ಸಂಬಂಧ ಸೂಚನೆ ನೀಡ ಲಾಗಿದೆ. ರೋಗಿಗಳು ಬಂದಲ್ಲಿ ಅವರನ್ನು ಪ್ರತ್ಯೇಕ ನಿಗಾ ಕೊಠಡಿ ಯಲ್ಲಿರಿಸಿ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗುವುದು. ನಿಫಾ ಬಾಧಿತ ರೋಗಿಗಳು ಅಲ್ಲಲ್ಲಿ ಕಫ, ಎಂಜಲು ಉಗುಳು ವುದು, ಸೇವಿಸಿದ ನೀರು, ಆಹಾರವನ್ನು ಇನ್ನೊಬ್ಬ ರಿಗೆ ನೀಡದಂತೆ ನೋಡಿಕೊಳ್ಳಲಾಗುವುದು. ಅಲ್ಲದೆ ಹೊರಗಿ ನಿಂದ ತಂದ ಹಣ್ಣುಗಳನ್ನು ತೆಗೆದುಕೊಳ್ಳದಂತೆ ಜಾಗ್ರತೆ ವಹಿಸ ಲಾಗುವುದು ಎಂದು ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ನಿಫಾ ವೈರಸ್‌ ಕಾಯಿಲೆ 
ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ.
ಲಸಿಕೆ ಇಲ್ಲ. ನಿರ್ದಿಷ್ಟ ಚಿಕಿತ್ಸೆಯೂ ಇಲ್ಲ. ತೀವ್ರ ನಿಗಾ ಘಟಕದಲ್ಲಿ ಲಕ್ಷಣಾಧಾರಿತ ಚಿಕಿತ್ಸೆ ಮಾತ್ರ ಒದಗಿಸಬಹುದು.
ವಿಶ್ವ ಆರೋಗ್ಯ ಸಂಸ್ಥೆಯ ಟಾಪ್‌ ಟೆನ್‌ “ತೀವ್ರ ಅಪಾಯದ ಸೋಂಕು ರೋಗ’ ಯಾದಿಯಲ್ಲಿ ನಿಫಾ ಸೋಂಕು ಒಂದು.
ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದಂತೆ ನಿಫಾ ಸೋಂಕಿನಿಂದ ಮರಣ ಸಾಧ್ಯತೆ ಶೇ. 70.
ಹಣ್ಣು ತಿನ್ನುವ ಬಾವಲಿಗಳು ಈ ವೈರಸ್‌ ಹರಡುತ್ತವೆ. ಇತರ ಪ್ರಾಣಿಗಳಿಂದಲೂ ಸಾಧ್ಯ.
1999ರಲ್ಲಿ ಮಲೇಶ್ಯಾ, ಸಿಂಗಾಪುರಗಳಲ್ಲಿ ಮೊದಲಿಗೆ ಪತ್ತೆ.

ಭಾರತದಲ್ಲಿ  ನಿಫಾ ಸೋಂಕು
2001ರ ಜನವರಿ-ಫೆಬ್ರವರಿ: ಪ. ಬಂಗಾಲದ ಸಿಲಿಗುರಿ
66 ಪ್ರಕರಣ- 45 ಸಾವು; ಮರಣ ಪ್ರಮಾಣ 68%
2007ರ ಎಪ್ರಿಲ್‌ ಪ. ಬಂಗಾಲದ ನಾಡಿಯಾ
5 ಪ್ರಕರಣ- 5 ಸಾವು; ಮರಣ ಪ್ರಮಾಣ 100%

ತೀವ್ರ ನಿಗಾ
ದ.ಕ. ಜಿಲ್ಲೆಯಲ್ಲಿ ಇದುವರೆಗೆ ನಿಫಾ ಪ್ರಕರಣ ವರದಿಯಾಗಿಲ್ಲ. ಆದರೂ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಜನ ಬಿದ್ದ ಹಣ್ಣು ತಿನ್ನುವುದು, ಸಾಕುಪ್ರಾಣಿಗಳ ಒಡನಾಟದಿಂದ ದೂರವಿರಬೇಕು. 
-ಡಾ| ರಾಮಕೃಷ್ಣ  ರಾವ್‌ ದ.ಕ. ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.