ಸರಿದಾರಿಗೆ ಬಾರದ ಪಾಕನ್ನು ಅರ್ಥಮಾಡಿಕೊಳ್ಳುವುದೇ ಕಷ್ಟ : ರಾಜನಾಥ್
Team Udayavani, May 22, 2018, 3:37 PM IST
ಹೊಸದಿಲ್ಲಿ : ‘ಎಂದೂ ಸರಿದಾರಿಗೆ ಬಾರದ ಪಾಕಿಸ್ಥಾನವನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟ’ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ‘ಪಾಕ್ ಸೈನಿಕರು ನಿರಂತರವಾಗಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಯಾವ ರೀತಿಯ ಪ್ರತೀಕಾರದ ಉತ್ತರವನ್ನು ನೀಡುತ್ತಿವೆ ಎಂಬ ಬಗ್ಗೆ ಸರಕಾರ ಇನ್ನು ಸೇನೆಯನ್ನು ಕೇಳುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು.
ಗಡಿ ರಕ್ಷಣಾ ಪಡೆಯ 16ನೇ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಆಶಯ ಭಾಷಣ ಮಾಡುತ್ತಿದ್ದ ಅವರು, ಪಾಕಿಸ್ಥಾನವನ್ನು ನೇರವಾಗಿ ಹೆಸರಿಸದೆ, “ಭಾರತ ಶಾಂತಿ ಬಯಿಸಿದರೂ ನಮ್ಮ ನೆರೆಯ ದೇಶವೊಂದು ಸರ್ವಥಾ ಸರಿದಾರಿಗೆ ಬಾರದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ’ ಎಂದು ಹೇಳಿದರು.
“ನೆರೆಯ ದೇಶದ (ಪಾಕಿಸ್ಥಾನದ) ಈ ರೀತಿಯ ಕೃತ್ಯ ಸಂಶೋಧನೆಯ ವಿಷಯವಾಗಿದ್ದು ಅದರ ಚಟುವಟಿಕೆಗಳನ್ನು ಅರ್ಥಮಾಡಿಕೊಳ್ಳುವುದೇ ಕಷ್ಟವಾಗಿದೆ’ ಎಂದು ಸಿಂಗ್ ವ್ಯಂಗ್ಯದಿಂದ ಹೇಳಿದರು.
“ಶತ್ರುಗಳತ್ತ ಮೊದಲ ಗುಂಡನ್ನು ನಾವು ಎಂದಿಗೂ ಎಸೆಯಬಾರದು ಎಂದು ಬಿಎಸ್ಎಫ್ ಮತ್ತು ಇತರಗಡಿ ರಕ್ಷಣಾ ಪಡೆಗಳಿಗೆ ನಾವು ಹೇಳಿದ್ದೇವೆ; ಹಾಗಿದ್ದರೂ ಶತ್ರುಗಳು ಎಸೆಯುವ ಗುಂಡಿಗೆ ನೀವು ಯಾವ ರೀತಿಯ ಉತ್ತರ ನೀಡುವಿರಿ ಎಂಬ ಪ್ರಶ್ನೆಯನ್ನು ಸೇನೆಗೆ ಯಾರೂ ಎಂದೂ ಕೇಳಲಾರರು’ ಎಂದು ರಾಜನಾಥ್ ಸಿಂಗ್ ಹೇಳಿದರು.
ಕಳೆದ ಕೆಲವು ದಿನಗಳಿಂದ ಜಮ್ಮು ವಲಯದಲ್ಲಿ ಪಾಕ್ ಸೈನಿಕರು ಅಪ್ರಚೋದಿತವಾಗಿ ನಡೆಸುತ್ತಿರುವ ನಿರಂತರ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಅತ್ಯಂತ ಪರಿಣಾಮಕಾರಿ ರೀತಿಯಲ್ಲಿ ತಕ್ಕುದಾದ ಉತ್ತರ ನೀಡುತ್ತಿವೆ ಎಂದು ರಾಜನಾಥ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ