ನಿಫಾ ಆತಂಕವಿಲ್ಲ : ಉಡುಪಿ ಜಿಲ್ಲಾಧಿಕಾರಿ
Team Udayavani, May 24, 2018, 9:35 AM IST
ಉಡುಪಿ: ನಿಫಾ ವೈರಸ್ ಸೋಂಕಿನ ಆತಂಕ ಉಡುಪಿ ಜಿಲ್ಲೆಯಲ್ಲಿ ಇಲ್ಲ. ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಿಯೂ ಶಂಕಾಸ್ಪದ ಪ್ರಕರಣಗಳ ಬಗ್ಗೆ ವರದಿಯಾಗಿಲ್ಲ. ವೈರಸ್ ಸೋಂಕಿನ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡ ಲಾಗಿದೆ. ಹೊರ ರಾಜ್ಯಗಳಿಂದ ಬರುವ ರೋಗಿ ಗಳ ಬಗ್ಗೆ ವಿಶೇಷ ನಿಗಾ ಇಟ್ಟಿಲ್ಲ. ಈ ಹಿಂದಿ ನಂತೆಯೇ ತಪಾಸಣೆ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.
ಹಣ್ಣು ಬಳಕೆ ಭೀತಿ ಇಲ್ಲ
ನಿಫಾ ವೈರಸ್ ಹೊಂದಿರುವ ಬಾವಲಿ ಗಳು ಹಣ್ಣುಗಳನ್ನು ಕಚ್ಚಿದ್ದರೆ ಅವು ಗಳನ್ನು ಸೇವಿಸಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿರುವುದರಿಂದ ಜನರಲ್ಲಿ ಜಾಗೃತಿ ಮೂಡಿದೆ. ಹಣ್ಣುಗಳ ಮಾರಾಟದಲ್ಲಿ ಇಳಿಕೆಯಾಗಿಲ್ಲ ಎಂದು ಉಡುಪಿಯ ಹಣ್ಣು ಹಂಪಲುಗಳ ಅಂಗಡಿ ಮಾಲಕರು ತಿಳಿಸಿದ್ದಾರೆ.
ಕೊಲ್ಲೂರಿನಲ್ಲಿ ಮುನ್ನೆಚ್ಚರಿಕೆ ಕ್ರಮ
ಕುಂದಾಪುರ: ಅತಿಹೆಚ್ಚು ಕೇರಳೀಯ ಭಕ್ತರು ಆಗಮಿಸುವ ಕೊಲ್ಲೂರಿನಲ್ಲಿಯೂ ನಿಫಾ ವೈರಸ್ ಸೋಂಕಿನ ಕುರಿತು ನಿಗಾ ಹರಿಸುವ ಅಗತ್ಯವಿದೆ. ಆದರೆ ಪ್ರಯಾಣ ಕಷ್ಟವಿರುವ, ತೀವ್ರ ಪ್ರಮಾಣದ ಜ್ವರ ಪೀಡಿತರಲ್ಲಿ ಮಾತ್ರ ನಿಫಾ ಸೋಂಕು ಇರುವ ಕಾರಣ ಸಾಮಾನ್ಯರು ಭೀತಿ ಪಡುವ ಅಗತ್ಯವಿಲ್ಲ. ಆದರೂ ಜ್ವರ ಪೀಡಿತರ ಕುರಿತು ನಿಗಾ ವಹಿಸುವಂತೆ ಸೂಚಿಸಲಾಗುವುದು ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರೋಹಿಣಿ ಹೇಳಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕದ ನಾನಾ ಭಾಗವಷ್ಟೇ ಅಲ್ಲದೆ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯ ಗಳಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಕೊಲ್ಲೂರಿಗೆ ಆಗಮಿಸುವ ಕೇರಳ ರಾಜ್ಯವಾಸಿಗಳು ಕೊಂಕಣ ರೈಲ್ವೇ ಯನ್ನು ಆಶ್ರಯಿಸಿದ್ದು ಮಂಗಳೂರಿ ನಿಂದ ಬೈಂದೂರು ರೈಲು ನಿಲ್ದಾಣಕ್ಕೆ ಬರುತ್ತಾರೆ. ಆದ್ದರಿಂದ ಬೈಂದೂರು ನಿಲ್ದಾಣದಲ್ಲಿ ಕೂಡ ಕಟ್ಟೆಚ್ಚರ ವಹಿಸುವ ಅಗತ್ಯವಿದೆ ಎಂದು ಡಾ| ರೋಹಿಣಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್