ಅಂಚೆ ನೌಕರರ ಅನಿರ್ದಿಷ್ಟಾವಧಿ ಧರಣಿ
Team Udayavani, May 24, 2018, 11:32 AM IST
ಯಲಹಂಕ: 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ಯಲಹಂಕದ ಸಂತೆ ವೃತ್ತದ ಬಳಿ ಇರುವ ಅಂಚೆ ಕಚೇರಿ ಎದುರು ಬುಧವಾರದಿಂದ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು.
ಕೇಂದ್ರ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವರದಿಯಂತೆ ವೇತನ ಹೆಚ್ಚಳ ಸೇರಿ ಇತರೆ ಭತ್ಯೆ ನೀಡಲಾಗುತ್ತಿದೆ. ಆದರೆ ಅಂಚೆ ನೌಕರರನ್ನು ಇದರಿಂದ ಹೊರಗಿಟ್ಟಿರುವುದು ಸರಿಯಲ್ಲ.
ಗ್ರಾಮೀಣ ಅಂಚೆ ನೌಕರರಿಗೆ ನ್ಯಾಯಮೂರ್ತಿ ತಲ್ವಾರ್ ಸಮಿತಿ ವರದಿಯನ್ವಯ ಅಂಚೆ (5ಗಂಟೆಗಿಂತಲೂ ಅಧಿಕ ಸೇವೆ ಸಲ್ಲಿಸುವ) ಸೇವಕರ ಸೇವೆ ಕಾಯಂಗೊಳಿಸಬೇಕು. ಕಮಲೇಶಚಂದ್ರ ಸಮಿತಿ ಶಿಫಾರಸು ಅನುಮೋದಿಸಬೇಕು
ಎಂಬ ಬೇಡಿಕೆಗಳನ್ನು ಕೇಂದ್ರ ಸರಕಾರ ಇದುವರೆಗೂ ಈಡೇರಿಸಿಲ್ಲ ಎಂದು ಸಂಘಟನೆ ಪದಾಧಿಕಾರಿ ಪ್ರಸನ್ನಕುಮಾರ್ ದೂರಿದರು.
ಈ ಅನ್ಯಾಯ ವಿರೋಧಿಸಿ ಕೇಂದ್ರ ಮತ್ತು ವಲಯ ಸಂಘಟನೆಗಳು ಕೊಟ್ಟಿರುವ ಕರೆ ಬೆಂಬಲಿಸಿ ಅನಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ಉದಯಕುಮಾರ್ ಉಪಾದ್ಯಾಯ ಮಾಹಿತಿ ನೀಡಿದರು. ರುದ್ರೇಶ್, ತಿಲಕ್, ಮನೋಹರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ