ಗ್ರಾಪಂ ಚುನಾವಣೆಗೂ ಇವಿಎಂ ಯಂತ್ರ


Team Udayavani, May 24, 2018, 12:04 PM IST

blore-9.jpg

ಕಲಬುರಗಿ: ಇನ್ಮುಂದೆ ಗ್ರಾಮ ಪಂಚಾಯಿತಿ ಚುನಾವಣೆಗೂ ಇವಿಎಂ ಯಂತ್ರಗಳನ್ನು ಬಳಕೆ ಮಾಡಲು ಚುನಾವಣೆ ಆಯೋಗ ಉದ್ದೇಶಿಸಿದೆ. ಮೊದಲ ಹಂತವಾಗಿ ಕಲಬುರಗಿ ಜಿಲ್ಲೆಯಿಂದಲೇ ಕಾರ್ಯರೂಪಕ್ಕೆ ತರಲು ಮುಂದಾಗಿದೆ.
ಜೂ.14ರಂದು ನಡೆಯುವ ಜಿಲ್ಲೆಯ 15 ಗ್ರಾಪಂ ಚುನಾವಣೆಗೆ ಇವಿಎಂ (ವಿದ್ಯುನ್ಮಾನ ಮತ ಪೆಟ್ಟಿಗೆ) ಯಂತ್ರ ಬಳಸಲು ನಿರ್ಧರಿಸಲಾಗಿದೆ. 

ಅಲ್ಲದೇ ಈ ಕುರಿತು ಯಂತ್ರಗಳನ್ನು ರೂಪಿಸಲು ಕಾರ್ಯಪ್ರವೃತ್ತಗೊಳ್ಳಲಾಗಿದೆ. ಇವಿಎಂ ಯಂತ್ರಗಳ ಪೂರೈಕೆ ಸಂಬಂಧವಾಗಿ ನೆರೆ ಜಿಲ್ಲೆಗಳಿಗೆ ಕಲಬುರಗಿ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಎರಡೂವರೆ ವರ್ಷದ ಹಿಂದೆ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ ಗ್ರಾಪಂನ ನಾವದಗಿ ಮತಗಟ್ಟೆಯಲ್ಲಿ ಪ್ರಾಯೋಗಿಕವಾಗಿ ಇವಿಎಂ ಯಂತ್ರಗಳ ಮೂಲಕ ಚುನಾವಣೆ ನಡೆಸಲಾಗಿತ್ತು. ಈಗ ಪೂರ್ಣ ಪ್ರಮಾಣದೊಂದಿಗೆ ಇವಿಎಂ ಯಂತ್ರ ಬಳಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಸಂಪೂರ್ಣ ಗ್ರಾಪಂ ಚುನಾವಣೆಯನ್ನು ಇವಿಎಂ ಯಂತ್ರದಿಂದಲೇ ನಿರ್ವಹಿಸಲು ಚುನಾವಣೆ ಆಯೋಗ ಯೋಜನೆ ಹೊಂದಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಕಲಬುರಗಿ ಮೂಲಕ
ಇಡಲಾಗುತ್ತಿದೆ.

ಇವಿಎಂ ಮೂಲಕ ಗ್ರಾಪಂ ಚುನಾವಣೆ ನಡೆಯುತ್ತಿರುವುದರಿಂದ ಸಾರ್ವತ್ರಿಕ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಂತೆ ನುರಿತ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗುವುದಲ್ಲದೇ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಮತದಾರರಿಗೆ ಇವಿಎಂ ಮಾದರಿ ಯಂತ್ರಗಳ ಮೂಲಕ ಮಾಹಿತಿ ನೀಡಲಾಗುವುದು ಎಂದು ಕಲಬುರಗಿ
ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ “ಉದಯವಾಣಿ’ಗೆ ತಿಳಿಸಿದ್ದಾರೆ.

ಉಪ ಕದನಕ್ಕೆ ಇವಿಎಂ ಯಂತ್ರವಿಲ್ಲ ಜಿಲ್ಲೆಯ 15 ಗ್ರಾಪಂಗಳ ಜತೆಗೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ತೆರವು ಆಗಿರುವ 13 ಸದಸ್ಯ ಸ್ಥಾನಗಳಿಗೂ ಜೂ.14ರಂದೇ ಉಪ ಚುನಾವಣೆ ನಡೆಯುತ್ತಿದೆ.  ಆದರೆ ಈ ಚುನಾವಣೆಗೆ ಇವಿಎಂ ಯಂತ್ರ ಬಳಕೆ ಮಾಡುತ್ತಿಲ್ಲ. 

ಯಾವ ಗ್ರಾಪಂಗಳಿಗೆ ಚುನಾವಣೆ?: ಕಲಬುರಗಿ ತಾಲೂಕಿನ ಮರಗುತ್ತಿ ಗ್ರಾಪಂ, ಆಳಂದ ತಾಲೂಕಿನ
ಮಡಕಿ, ದಣ್ಣೂರ, ನಿರಗುಡಿ, ಭೂಸನೂರ, ಹಿತ್ತಲಶಿರೂರ, ಧುತ್ತರಗಾಂವ, ಚಿಂಚೋಳಿ ತಾಲೂಕಿನ ಕರ್ಚಖೇಡ,
ಗರಗಪಳ್ಳಿ, ಚಿತ್ತಾಪುರ ತಾಲೂಕಿನ ಕೊಳ್ಳುರ, ರಾಂಪೂರಹಳ್ಳಿ, ಜೇವರ್ಗಿ ತಾಲೂಕಿನ ಮದರಿ, ಕರಕಿಹಳ್ಳಿ, ರಂಜಣಗಿ ಗ್ರಾಪಂಗೆ ಜೂ.14ರಂದು ಇವಿಎಂ ಯಂತ್ರದಿಂದ ಚುನಾವಣೆ ನಡೆಯಲಿದೆ

ಈಗೇಕೆ ಚುನಾವಣೆ?
ಎರಡೂವರೆ ವರ್ಷದ ಹಿಂದೆ ಗ್ರಾಪಂ ವಿಂಗಡಣೆ ಆದಾಗ ಕೇಂದ್ರ ಸ್ಥಾನ ತಮಗೆ ಬೇಕೆಂದು ಹಲವು ಗ್ರಾಮಗಳ ಗ್ರಾಮಸ್ಥರು ನ್ಯಾಯಾಲಯದ ಮೋರೆ ಹೋಗಿದ್ದರಿಂದ ಜಿಲ್ಲೆಯ 15 ಗ್ರಾಪಂಗಳಿಗೆ ಚುನಾವಣೆ ನಡೆದಿರಲಿಲ್ಲ. ಈಗ ನ್ಯಾಯಾಲಯದಿಂದ ಪ್ರಕರಣ ಇತ್ಯರ್ಥಗೊಂಡಿದ್ದರಿಂದ ಚುನಾವಣೆ ನಡೆಸಲು ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಹೊರಡಿಸಿದೆ. ಚುನಾವಣೆಗೆ ಮೇ 30ರಂದು ಜಿಲ್ಲಾ ಚುನಾವಣಾ ಅಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಜೂ.2ರವರೆಗೆ ನಾಮಪತ್ರಗಳನ್ನು ಸಲ್ಲಿಸಬಹುದು. ನಾಮಪತ್ರ ವಾಪಸ್‌ ಪಡೆಯಲು ಜೂ.6 ಕೊನೆ ದಿನ. ಜೂ.14ರಂದು 15 ಗ್ರಾಪಂಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದೆ.

ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಜೂ.14ರಂದು ಕಲಬುರಗಿ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ
ನಡೆಯುವ ಚುನಾವಣೆಯಲ್ಲಿ ಇವಿಎಂ ಯಂತ್ರ ಬಳಕೆ ಮಾಡಲಾಗುತ್ತಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. 
 ಆರ್‌. ವೆಂಕಟೇಶಕುಮಾರ ಜಿಲ್ಲಾಧಿಕಾರಿ ಕಲಬುರಗಿ 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.