ರವಿಶಾಸ್ತ್ರೀ ಭೇಟಿ: ದೇವರಿಗೆ ವಿಶೇಷ ಪೂಜೆ, ಪಾರ್ಥನೆ ಸಲ್ಲಿಕೆ
Team Udayavani, May 24, 2018, 1:00 PM IST
ಪಾವಂಜೆ : ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್
ರವಿಶಾಸ್ತ್ರಿ ಅವರು ಮೇ 23ರಂದು ವಿಶೇಷ ಭೇಟಿ ನೀಡಿ ವಿವಿಧ ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷವಾದ ಅರ್ಚನೆ ಮತ್ತು ಪ್ರಾರ್ಥನೆ ನಡೆಸಿದ ರವಿಶಾಸ್ತ್ರಿ ಅನಂತರ ದೇವಸ್ಥಾನದ
ಸಾನ್ನಿಧ್ಯದಲ್ಲಿರುವ ನಾಗ ದೇವರ ಸನ್ನಿಧಾನದಲ್ಲಿ ಪಂಚಾಮೃತ ಅಭಿಷೇಕ ನಡೆಸಿದರು. ಈ ಸಂದರ್ಭದಲ್ಲಿ ದೇಗುಲದ ಅರ್ಚಕರೊಂದಿಗೆ ಹಾಗೂ ತಮ್ಮ ಕ್ರೀಡಾ ಪ್ರೇಮಿಗಳೊಂದಿಗೆ ಮೊಬೈಲ್ ಮೂಲಕ ಸೆಲ್ಫಿ ಮತ್ತು ಫೋಟೋಗೆ ಅವಕಾಶ ನೀಡಿದರು. ದೇಗುಲದ ತಂತ್ರಿ ದಿವಾಕರ ಭಟ್ ದೇಗುಲದ ವತಿಯಿಂದ ವಿಶೇಷವಾಗಿ ಸಮ್ಮಾನಿಸಿದರು.
ಲಯನ್ಸ್ ಕ್ಲಬ್ನ ಮಾಜಿ ಜಿಲ್ಲಾ ಗವರ್ನರ್ ಡಾ| ಸಂತೋಷ್ ಕುಮಾರ್ ಶಾಸ್ತ್ರಿ, ಕವಿತಾ ಶಾಸ್ತ್ರಿ, ಉಡುಪಿಯ ಲಾತವ್ಯಾ ಆಚಾರ್ಯ, ವಾದಿರಾಜ ಪೆಜತ್ತಾಯ ಹಾಗೂ ದೇಗುಲದ ಸಿಬಂದಿಗಳು, ಅರ್ಚಕ ವೃಂದದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್