ಕಲ್ಮಶವೇ ಇಲ್ಲದ ಊರಿನಲ್ಲಿ ರಾದ್ಧಾಂತ ಆಗುವುದಾದರೂ ಹೇಗೆ?


Team Udayavani, May 24, 2018, 3:38 PM IST

24-may-13.jpg

ಕಲ್ಮಶವೇ ಇಲ್ಲದ ಒಂದು ಊರಿನಲ್ಲಿ ರಾಜಕೀಯದ ಚಹರೆಯಿಂದ ಹಾಗೂ ದನದ ವಿಚಾರದಲ್ಲಿ ಯಾವೆಲ್ಲ ರಾದ್ಧಾಂತ ನಡೆದುಹೋಗುತ್ತದೆ ಎಂಬ ಸಂಗತಿಯನ್ನೇ ಮುಂದಿಟ್ಟುಕೊಂಡು ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಸಿನೆಮಾವೊಂದು ಸೆಟ್ಟೇರಲು ರೆಡಿಯಾಗಿದೆ. ವಿಶೇಷವೆಂದರೆ 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ‘ಮದಿಪು’ ಸಿನೆಮಾ ಮಾಡಿದ ಚೇತನ್‌ ಮುಂಡಾಡಿ ಅವರ ನಿರ್ದೇಶನದಲ್ಲಿ ಈಗ ಎರಡನೇ ಸಿನೆಮಾ ಸಿದ್ಧವಾಗಲಿದೆ.

ದನದ ವಿಚಾರ ಕರಾವಳಿಯಲ್ಲಿ ಬಹುದೊಡ್ಡ ರೀತಿಯಲ್ಲಿ ಬೇರೆ ಬೇರೆ ರೀತಿಯ ಆಯಾಮಗಳನ್ನು ಪಡೆಯುತ್ತದೆ. ಇದೇ ಕಾರಣಕ್ಕಾಗಿ ಗ್ರಾಮದೊಳಗಿನ ಅನ್ಯೋನ್ಯ ಸಂಬಂಧಗಳು ಕೂಡ ವಿಪರೀತ ಹಂತ ತಲುಪಿ, ಮನುಷ್ಯತ್ವವನ್ನೇ ಮರೆಯುವ ಸಂದರ್ಭವೂ ಎದುರಾಗಿದ್ದುಂಟು. ಆದರೆ, ಮನುಷ್ಯ ಸಂಬಂಧ ಇಷ್ಟಕ್ಕೆ ಸೀಮಿತವೇ? ಇದರಿಂದ ಹೊರತಾದ ಒಡನಾಟವಿಲ್ಲವೇ? ಈ ಎಲ್ಲ ವಿಚಾರಗಳ ಅಂಶಗಳನ್ನು ಮುಖ್ಯನೆಲೆಯಲ್ಲಿಟ್ಟು ಸಿನೆಮಾ ಮಾಡಲು ಚೇತನ್‌ ಮುಂದಾಗಿದ್ದಾರೆ.

ರಾಜಕೀಯ ಹಾಗೂ ಧರ್ಮದ ವಿಚಾರದಲ್ಲಿ ಗ್ರಾಮವೊಂದು ಯಾವ ಮಟ್ಟಕ್ಕೆ ಬದಲಾಗುತ್ತದೆ ಹಾಗೂ ಹಾಗೆ ಬದಲಾಗುವುದರಿಂದ ಏನು ಸಮಸ್ಯೆ ಎಂಬ ತಾತ್ವಿಕ ನೆಲೆಯಲ್ಲಿಟ್ಟು ಸಿನೆಮಾ ಮಾಡಲಿದ್ದಾರೆ. ಸಮಾಜದ ತಪ್ಪನ್ನು ಸಮಾಜಕ್ಕೆ ಹೇಳುವ, ಆ ಮೂಲಕ ಸಮಾಜದಲ್ಲಿ ಬದಲಾವಣೆಯ ಆಶಯ ಕಾಣುವುದೇ ಈ ಸಿನೆಮಾದ ಉದ್ದೇಶ ಎನ್ನುತ್ತಾರೆ ಚೇತನ್‌.

ಅಂದಹಾಗೆ ಈ ಸಿನೆಮಾದಲ್ಲಿ ಹೊಸ ಮುಖಗಳಿಗೆ ವಿಶೇಷ ಒತ್ತು ನೀಡಲಾಗುತ್ತದೆ. ಹೆಚ್ಚಾ ಕಡಿಮೆ ಮುಂದಿನ ತಿಂಗಳು ಈ ಸಿನೆಮಾ ಶೂಟಿಂಗ್‌ ಆರಂಭಿಸಲಿದೆ. ಗ್ರಾಮಾಂತರ ಭಾಗದ ಶಿಶಿಲ ವ್ಯಾಪ್ತಿಯಲ್ಲಿ ಸುಮಾರು 15 ದಿನ ಶೂಟಿಂಗ್‌ ನಡೆಯಲಿದೆ. ನಿರ್ಮಾಪಕರು ಯಾರು ಎಂಬುದು ಇನ್ನೂ ಫಿಕ್ಸ್‌ ಆಗಿಲ್ಲ. ತಾಂತ್ರಿಕವಾಗಿ ಚಿತ್ರವನ್ನು ಶ್ರೀಮಂತಿಕೆಯಿಂದ ತರಲು ನಿರ್ಧರಿಸಲಾಗಿದೆ.

ಈ ಸಿನೆಮಾದ ಇನ್ನೊಂದು ವಿಶೇಷವೆಂಬಂತೆ, ಇಲ್ಲಿ ಎಲ್ಲ ಭಾಷೆಗಳು ಕೂಡ ಇವೆ. ಹವ್ಯಕ ಕನ್ನಡವಿದೆ. ಕೊರಗ ಸಮಾಜದ ಭಾಷೆಯಿದೆ. ಬ್ಯಾರಿ ಭಾಷೆಯಿದೆ. ನಾಡ ತುಳುವಿದೆ. ಕನ್ನಡವೂ ಇದೆ. ಹೀಗಾಗಿ ಎಲ್ಲ ಭಾಷಿಗರು ಒಪ್ಪುವ ರೀತಿಯ ಸಿನೆಮಾವಾಗಿ ಹೊಸ ಸಿನೆಮಾ ಮೂಡಿಬರಲಿದೆ. ಸದ್ಯಕ್ಕೆ ಸಿನೆಮಾಕ್ಕೆ ಟೈಟಲ್‌ ಫಿಕ್ಸ್‌ ಮಾಡಿಲ್ಲ. ಒಂದು ವಾರದ ಒಳಗೆ ಟೈಟಲ್‌ ಅಂತಿಮಗೊಳ್ಳಲಿದೆ. ರಿಯಾಲಿಟಿ ಕಥೆಯನ್ನೇ ಇಟ್ಟುಕೊಂಡಿರುವ ಕಾರಣದಿಂದ ಈ ಸಿನೆಮಾ ವಿಭಿನ್ನ ನೆಲೆಯಲ್ಲಿ ಮೂಡಿಬರುವ ಸಾಧ್ಯತೆ ಇದೆ.

 ದಿನೇಶ್‌ ಇರಾ

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.