73ರಲ್ಲಿ ಗೆಜ್ಜೆಕಟ್ಟಿದ ಸಾವಿತ್ರಿ 


Team Udayavani, May 25, 2018, 6:00 AM IST

c-9.jpg

ಸಾವಿತ್ರಿ ಎಸ್‌ . ರಾವ್‌ ಇವರು ಸುರತ್ಕಲ್‌ನಲ್ಲಿ ಜನಿಸಿ, ಕೂಡು ಕುಟುಂಬದಲ್ಲಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರೊಡನಾಡಿ ಬೆಳೆದು, ಮಂಗಳೂರಿನ ಉರ್ವದ ಕಲ್ಲಾವು ಕುಟುಂಬಕ್ಕೆ ಸೊಸೆಯಾಗಿ, ಶ್ರೀನಿವಾಸ ರಾವ್‌ ಅವರ ಮಡದಿಯಾಗಿ ಬಂದು ಮೇ 13ಕ್ಕೆ 50 ವರ್ಷ ತುಂಬಿತು. ಈ ಅವಧಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ದುಡಿದು, ಮಕ್ಕಳ ಅಪಾರ ಪ್ರೀತಿಯನ್ನು ಗಳಿಸಿದ ಅವರು ರಾಜ್ಯ ಪ್ರಶಸ್ತಿಯನ್ನು ಪಡೆದರು. ಮಕ್ಕಳ ಸಾಹಿತಿಯಾಗಿ ಹಲವಾರು ಕಥೆ ಕವನಗಳನ್ನು ಬರೆದರು. ತೋಟದ ಆರೈಕೆ, ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸುವುದು, ಕಥಾ,ಕವನದ ಕಮ್ಮಟಗಳನ್ನು ನಡೆಸುವುದೇ ಮುಂತಾದ ಹಲವಾರು ಚಟುವಟಿಕೆಗಳಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡವರು. ಸ್ವಯಂ ನಿವೃತ್ತಿಯನ್ನು ಪಡೆದು ಇಂತಹ ಹಲವಾರು ಪ್ರವೃತ್ತಿಗಳಿಗೆ ಸಮಯವನ್ನು ಮುಡಿಪಾಗಿಟ್ಟರು. ತನ್ನ 66ನೇ ವಯಸ್ಸಿನಲ್ಲಿ ಇವೆಲ್ಲವನ್ನು ಮೀರಿಸಿದ ಹೊಸ ಪ್ರಯೋಗವೊಂದನ್ನು ಮಾಡಿದರು ಹಾಗು ಯಶಸ್ವಿಯೂ ಆದರು. ಅದೇ ಯಕ್ಷಲೋಕಕ್ಕೆ ಪದಾರ್ಪಣೆ. 

ಇಂದು ಅವರಿಗೆ 73ರ ಹರೆಯ. ನವತರುಣ-ತರುಣಿಯರು ನಾಚುವಂತೆ ಅವರು ಯಕ್ಷಗಾನದಲ್ಲಿ ಗೆಜ್ಜೆ ಕಟ್ಟಿ ಕುಣಿದು ಕಲಾಭಿಮಾನಿಗಳನ್ನು ಮಂತ್ರ ಮುಗ್ಧಗೊಳಿಸಬಲ್ಲರು. ಇಳಿ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಮಿಂಚುವ ಕನಸು ಕೂಡಾ ಕಂಡವರಲ್ಲ. ಆದರೆ ಅವರ ಉತ್ಸಾಹ, ಕಲಿಯುವ ಮನಸ್ಸು, ಉತ್ತಮ ಆರೋಗ್ಯ ಸಾಧನೆಯ ಗುಟ್ಟು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೂ ಆದ ಪತಿಯ ನಿರಂತರ ಸಹಕಾರ ಮತ್ತು ಬೆಂಬಲ, ಯಕ್ಷಗುರು ಸುಮಂಗಲ ರತ್ನಾಕರ ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅವರ ಸಾಧನೆಯ ಹಾದಿಯ ಮೆಟ್ಟಿಲುಗಳಾದವು. 

50ನೇ ವಿವಾಹ ವಾರ್ಷಿಕೋತ್ಸವದಂದು ಯಕ್ಷಗಾನದ 100ನೇ ಪ್ರದರ್ಶನವನ್ನು ನಗರದ ಪುರಭವನದಲ್ಲಿ ಏರ್ಪಡಿಸಿದ್ದರು. ಸುಮಂಗಲ ರತ್ನಾಕರ ಅವರ ನೇತೃತ್ವದಲ್ಲಿ ದಂಪತಿಯನ್ನು ಸಮ್ಮಾನಿಸಲಾಯಿತು.ಅನಂತರ ನಡೆದ “ನರಕಾಸುರ ವಧೆ’ ಪ್ರದರ್ಶನದಲ್ಲಿ ಸಾವಿತ್ರಿಯವರು ದೇವೇಂದ್ರನ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದರು. ಇವರ ಈ ಜೀವನೋತ್ಸಾಹ ಸರ್ವರಿಗೂ ಆದರ್ಶ. ಮಧ್ಯ ವಯಸ್ಸಿನಲ್ಲೇ ಎಲ್ಲ ಮುಗಿಯಿತೆಂದುಕೊಂಡು ನೀರಸ ಬಾಳು ಬಾಳುವವರಿಗೊಂದು ದಾರಿದೀಪ, ಸ್ಫೂರ್ತಿ. 

ಯಕ್ಷಪ್ರಿಯ 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.