ಜೀವ ಉಳಿಸಿಕೊಂಡವರ ಕಥೆ; ಆ ಬಂಗಲೆಯೊಳಗಿನ ರಹಸ್ಯ


Team Udayavani, May 25, 2018, 6:00 AM IST

c-20.jpg

ಅಲ್ಲಿದ್ದ ಅಷ್ಟೂ ಮಂದಿ ಏನು ಮಾತನಾಡಬೇಕು ಎಂಬ ಬಗ್ಗೆ ಪೂರ್ವತಯಾರಿ ಮಾಡಿಕೊಂಡಿರಲಿಲ್ಲ. ವೇದಿಕೆ ಮೇಲೆ ಕುಳಿತರಾಯಿತು ಎಂಬಂತೆ ಬಂದಿದ್ದರು. ಅದೇ ಕಾರಣದಿಂದ ಪತ್ರಿಕಾಗೋಷ್ಠಿ 10 ನಿಮಿಷದೊಳಗಡೆ ಮುಗಿದೇ ಹೋಯಿತು. ಅಂದಹಾಗೆ, ಇದು “ಆ ಜೀವ’ ಸಿನಿಮಾದ ಸುದ್ದಿ. “ಆ ಜೀವ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ತಯಾರಾಗಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. ಈ ಚಿತ್ರವನ್ನು ಕೆ.ಜಿ.ಎಮ್‌.ಮಹದೇವ್‌ ಎನ್ನುವವರು ನಿರ್ದೇಶಿಸಿದ್ದಾರೆ. ಈ ಹಿಂದೆ ಒಂದು ಸಿನಿಮಾ ಮಾಡಿದ್ದರಂತೆ ಮಹದೇವ್‌. “ಆ ಜೀವ’ ಅವರಿಗೆ ಎರಡನೇ ಸಿನಿಮಾ. ಸಿನಿಮಾ ಬಗ್ಗೆ ಏನು ಮಾತನಾಡಬೇಕೆಂಬ ಅರಿವು ಅವರಿಗಿರಲಿಲ್ಲ. ಕೊನೆಗೂ ಪತ್ರಕರ್ತರು ಸಿನಿಮಾ ಬಗ್ಗೆ ಪ್ರಶ್ನಿಸಿದಾಗ, ಕಥಾಸಾರಂಶವನ್ನು ಹೇಳಿಬಿಟ್ಟರು ಮಹದೇವ್‌. 

“ಜೀವ ಎಂಬ ವ್ಯಕ್ತಿ ಬಂಗಲೆಯೊಳಗಿನ ರಹಸ್ಯವನ್ನು ಬಯಲು ಮಾಡಲು ತನ್ನ ಸ್ನೇಹಿತರೊಂದಿಗೆ ಹೋಗುತ್ತಾನೆ. ಈ ವೇಳೆ ಬಂಗಲೆಯೊಳಗಿನ ದುಷ್ಟಶಕ್ತಿಗಳ ಕೈಗೆ ಸಿಲುಕಿ ಏನೆಲ್ಲಾ ಕಷ್ಟ ಅನುಭವಿಸುತ್ತಾನೆ ಮತ್ತು ಅವೆಲ್ಲದರಿಂದ ಪಾರಾಗಿ ಹೇಗೆ ಬರುತ್ತಾನೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ’ ಎಂದು ಸಿನಿಮಾ ಬಗ್ಗೆ ಹೇಳಿದರು ಮಹದೇವ್‌. ಇಷ್ಟು ಹೇಳಿದ ಮೇಲೆ ಇದೊಂದು ಹಾರರ್‌ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಬೆಂಗಳೂರು ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. 

ಚಿತ್ರದಲ್ಲಿ ಜಿ.ಎಮ್‌. ರಾಜು ಹೀರೋ ಆಗಿ ನಟಿಸಿದ್ದಾರೆ. ಕಥೆ ತುಂಬಾ ಚೆನ್ನಾಗಿದ್ದ ಕಾರಣ ಹೀರೋ ಆಗಿ ನಟಿಸಿದ್ದಾಗಿ ಹೇಳಿಕೊಂಡರು. ರಮ್ಯಾ ಗಾಯತ್ರಿ ಈ ಸಿನಿಮಾದ ನಾಯಕಿ. ಇನ್ನು ಚಿತ್ರದ ಹಾಡೊಂದರಲ್ಲಿ ಸೋನಮ್‌ ಕಾಣಿಸಿಕೊಂಡಿದ್ದಾರೆ. ಆ ಹಾಡಿನಲ್ಲಿ ಕಾಣಿಸಿಕೊಂಡ ಅನುಭವ ಹಂಚಿಕೊಂಡು ಖುಷಿಯಾದರು ಸೋನಮ್‌.

ಪರಮೇಶ್ವರಯ್ಯ ಈ ಸಿನಿಮಾದ ನಿರ್ಮಾಪಕರು. ಈ ಹಿಂದೆ “ಧನು’ ಎಂಬ ಸಿನಿಮಾ ನಿರ್ಮಾಣ ಮಾಡಿದ್ದ ಪರಮೇಶ್ವರಯ್ಯನವರಿಗೆ “ಆ ಜೀವ’ ಕಥೆ ಇಷ್ಟವಾಗಿ ನಿರ್ಮಿಸಲು ಮುಂದಾದರಂತೆ. ಚಿತ್ರಕ್ಕೆ ಶ್ರೀ ಹರ್ಷ ಸಂಗೀತ, ರಾಜು ಭಾಸ್ಕರ್‌ ಹಿನ್ನೆಲೆ ಸಂಗೀತವಿದೆ. ಚಿತ್ರದ ಹಾಡೊಂದಕ್ಕೆ ನೃತ್ಯ ನಿರ್ದೇಶನ ಮಾಡಿದ ಮುರುಗೇಶ್‌ ಕೂಡಾ ತಮ್ಮ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.