ಈಗ ಲೋಕ ಚುನಾವಣೆ ನಡೆದರೆ ಬಿಜೆಪಿಗೆ ಲಾಭ


Team Udayavani, May 25, 2018, 6:00 AM IST

bjp.jpg

ನವದೆಹಲಿ: ದೇಶದಲ್ಲಿ ಕೂಡಲೇ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಉಳಿಸಿಕೊಳ್ಳಲಿದೆ. 2014ರ ಚುನಾವಣೆಗೆ ಹೋಲಿಕೆ ಮಾಡಿದರೆ ಎನ್‌ಡಿಎಗೆ ಕೊಂಚ ಸ್ಥಾನಗಳು ನಷ್ಟವಾಗಲಿವೆ ಎಂದು ಲೋಕನೀತಿ- ಸಿಎಸ್‌ಡಿಎಸ್‌- ಎಬಿಪಿ ನ್ಯೂಸ್‌ ನಡೆಸಿದ “ಮೂಡ್‌ ಆಫ್ ದ ನೇಶನ್‌’ ಸಮೀಕ್ಷೆ ಹೇಳಿದೆ.

2018ರ ಜನವರಿಯಿಂದ ದೇಶದ 19 ರಾಜ್ಯಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ಪೂರ್ವ ಭಾರತದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಅನುಕೂಲಕರ ವಾತಾವರಣವಿದೆ. ಇಲ್ಲಿನ ಒಟ್ಟು 142 ಸ್ಥಾನಗಳ ಪೈಕಿ ಎನ್‌ಡಿಎಗೆ 86-94, ಯುಪಿಎಗೆ 22-26, ಇತರರಿಗೆ 26-30 ಸ್ಥಾನ ಲಭಿಸಲಿವೆ. ಪಶ್ಚಿಮ ಮತ್ತು ಕೇಂದ್ರ ಭಾಗದಲ್ಲಿಯೂ ಮೋದಿ ಹವಾ ಮಾಸಿಲ್ಲ. ಅಲ್ಲಿನ  118 ಸ್ಥಾನಗಳ ಪೈಕಿ ಎನ್‌ಡಿಎ 74, ಯುಪಿಎ 44 ಸ್ಥಾನಗಳಲ್ಲಿ ಜಯ ಸಾಧಿಸಲಿವೆ.

ಗುಜರಾತ್‌ನಲ್ಲಿ ಎನ್‌ಡಿಎಗೆ ಶೇ.54 ರಷ್ಟು, ಯುಪಿಎಗೆ ಶೇ.42, ಇತರರಿಗೆ ಶೇ.4ರಷ್ಟು ಮತಗಳು ಸಿಗಲಿವೆ. ಮಹಾರಾಷ್ಟ್ರದಲ್ಲಿ  ಎನ್‌ಡಿಎ ಮೇಲುಗೈ ಸಾಧಿಸಲಿದೆ. ಆಡಳಿತಾರೂಢ ಮೈತ್ರಿ ಕೂಟಕ್ಕೆ ಶೇ.48, ಯುಪಿಎಗೆ ಶೇ.40ರಷ್ಟು ಮತ ದೊರಕಲಿವೆ. ಬಿಜೆಪಿ-ಶಿವಸೇನೆ ಭಿನ್ನಾಭಿಪ್ರಾಯ ಇರುವುದರಿಂದ ಮೈತ್ರಿ ಕಾಪಿಡಲು ಸಿಎಂ ಫ‌ಡ್ನವೀಸ್‌ ಇನ್ನಿಲ್ಲದ ಪ್ರಯತ್ನ ನಡೆಸಬೇಕಾದೀತು. ಹಿಂದಿನ ಚುನಾವಣೆಯಲ್ಲಿ ಎನ್‌ಡಿಎ ಬುಟ್ಟಿಗೆ ಶೇ.51ರಷ್ಟು ಮತಗಳು ಬಿದ್ದಿದ್ದವು. ಕಾಂಗ್ರೆಸ್‌-ಆರ್‌ಜೆಡಿ ಮಹಾ ಮೈತ್ರಿ ಯಿಂದ ಹೊರ ಬಂದು ಸರಕಾರ ರಚಿಸಿರು ವುದಕ್ಕೆ ಬಿಹಾರ ಮತದಾರರು ಸಂತುಷ್ಟರಾ ಗಿದ್ದಾರೆ. ಬಿಜೆಪಿ-ಜೆಡಿಯು ಹೆಚ್ಚಿನ ಸ್ಥಾನ ಗೆಲ್ಲಲಿವೆ. ಇದು ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿಕೂಟಕ್ಕೆ ಆಘಾತ ತಂದೊಡ್ಡಲಿದೆ.

ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟಕ್ಕೆ ಶೇ.46ರಷ್ಟು ಮತಗಳು ಸಿಗಲಿವೆ. ಕಳೆದ ಚುನಾವಣೆಗೆ ಹೋಲಿಸಿ ದರೆ ಶೇ.4ರಷ್ಟು ವೃದ್ಧಿಯಾಗಲಿದೆ. ಎನ್‌ಡಿಎಗೆ ಶೇ.35ರಷ್ಟು ಮತಗಳು ಬರಲಿವೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿಗೆ ಸವಾಲಿನ ಪರಿಸ್ಥಿತಿ ಇರುವ ಸಾಧ್ಯತೆಗಳಿವೆ. ದಕ್ಷಿಣ ಭಾರತದಲ್ಲಿನ 132 ಸ್ಥಾನಗಳ ಪೈಕಿ ಎನ್‌ಡಿಎಗೆ 18-22, ಯುಪಿಎಗೆ 67- 75, ಇತರರಿಗೆ 38-44 ಸ್ಥಾನ ಲಭಿಸಲಿವೆ.

ಶೇ.49 ಅಂಕ
“ಟೈಮ್ಸ್‌ ನೌ’ ಆಂಗ್ಲ ಸುದ್ದಿವಾಹಿನಿ 4 ವರ್ಷಗಳ ಮೋದಿ ನೇತೃತ್ವದ ಸರಕಾರದ ಸಾಧನೆ ಬಗ್ಗೆ ಸಮೀಕ್ಷೆ ನಡೆಸಿದೆ. ಅದರಲ್ಲಿ ಶೇ.49 ಮಂದಿ ಉತ್ತಮ ಎಂದು ಅಭಿ ಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಾಲಿ ಪ್ರಧಾನಿಯೇ ಗೆದ್ದು ಮುಂದುವರಿಯಬೇಕು ಎಂದು ಶೇ.53 ಮಂದಿ ಅಭಿಪ್ರಾಯ ಹೊಂದಿ ದ್ದರೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗೆ ಶೇ.23ರಷ್ಟು ಬೆಂಬಲ ವ್ಯಕ್ತವಾಗಿದೆ. ಧಾರ್ಮಿಕ ಸಾಮರಸ್ಯ ಸುಧಾರಿಸಿದೆ ಎಂದು ಶೇ.30ರಷ್ಟು ಮಂದಿ ಹೇಳಿದರೆ, ಶೇ.32ರಷ್ಟು ಮಂದಿ ಸ್ಥಿರವಾಗಿದೆ ಎಂದೂ, ಶೇ.23 ಮಂದಿ ಕೆಟ್ಟುಹೋಗಿದೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.