ಬೈಯ್ಯುವ ಹಬ್ಬ ಆಚರಿಸಿ ಸಂಭ್ರಮಿಸಿದ ಗಿರಿಜನರು


Team Udayavani, May 25, 2018, 2:45 PM IST

m6-biyuva.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಆದಿವಾಸಿಗಳ ಪ್ರಮುಖ ಕುಂಡೆ ಹಬ್ಬವನ್ನು ತಾಲೂಕಿನ ನೇರಳಕುಪ್ಪೆ, ಹೆಬ್ಬಳ್ಳ ಸೇರಿದಂತೆ ಹಾಡಿಗಳ ಕಾಡಕುಡಿಗಳು ವಿವಿಧ ವೇಷ ಭೂಷಣ ಧರಿಸಿ, ಕುಣಿದು-ಕುಪ್ಪಳಿಸಿ ದಾರಿಹೋಕರನ್ನು ಜೇನು ನುಡಿಯಲ್ಲಿ ಅಣಕಿಸುತ್ತಾ, ಕೀಟಲೆ ಮಾಡುವ ಮೂಲಕ ಹಬ್ಬಕ್ಕೆ ಕಿಚ್ಚು ಹಚ್ಚಿ, ದೇವಪುರಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಹಾಡಿಗೆ ವಾಪಾಸಾದರು.

ಬೈಯ್ಯುವುದೇ ವಿಶೇಷ: ಕೊಡಗಿನ ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುವ ಆದಿವಾಸಿಗಳು ಮಾಲಿಕರಿಂದ ಬೈಸಿಕೊಳ್ಳುವುದರ ವಿರುದ್ಧ ಆಚರಿಸುವುದೇ ಕುಂಡೆ ಹಬ್ಬ. ಹಬ್ಬದ ದಿನವಿಡೀ ದಾರಿಯಲ್ಲಿ ಸಿಕ್ಕವರಿಗೆ, ಮಾಲಿಕರಿಗೆ ಹೀಗೆ ಎಲ್ಲರನ್ನೂ ತಮ್ಮ ಭಾಷೆಯಲ್ಲೇ ಬೈಯುವುದು, ಹಣ ಪೀಕುವುದು, ಕೊಡದಿದ್ದಲ್ಲಿ ಮತ್ತಷ್ಟು ಬೈಯ್ಯುವುದು. ಆದರೆ, ಹಬ್ಬ ಆಚರಿಸುವ ವೇಳೆ ಬೈಯುವ ಆದಿವಾಸಿಗಳನ್ನು ಯಾರೂ ಪ್ರಶ್ನಿಸುವಂತಿಲ್ಲ.

ಕೊನೆಗೆ ಕ್ಷಮೆಯಾಚನೆ: ಗಿರಿಜನ ಸಮುದಾಯಕ್ಕೆ ಸೇರಿದ ಬೆಟ್ಟಕುರುಬ, ಜೇನುಕುರುಬ, ಬುಡಕಟ್ಟು ಸಮುದಾಯಕ್ಕೆ ಸೇರಿದವರು ಆಚರಿಸುವ ಹಬ್ಬವಿದು. ಕಾಡಿನೊಳಗೆ ಪೂಜೆ ಸಲ್ಲಿಸುವಾಗ ಇತರರಿಗೆ ಇಲ್ಲಿಗೆ ಪ್ರವೇಶವಿಲ್ಲ. ಹಬ್ಬದಂದು ಸಂಗ್ರಹವಾಗುವ ಹಣ ಮತ್ತಿತರ ವಸ್ತುಗಳಿಂದ ದೇವರಕಾಡಿನಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಭಿಕ್ಷೆ ಬೇಡಿದ್ದ ಹಣದಲ್ಲಿಯೇ ಅಡುಗೆ ತಯಾರಿಸಿ ಎಲ್ಲರಿಗೂ ಉಣಬಡಿಸಿ, ಕ್ಷಮೆ ಕೇಳಿ ಕೋಪ ತಣಿಸಿಕೊಳ್ಳುವುದೇ ಈ ಕುಂಡೆ ಹಬ್ಬದ ವಿಶೇಷ.

ಆಚರಣೆ ಹೇಗೆ: ಗಿರಿಜನರು ತಮ್ಮ ಆರಾಧ್ಯದೈವ ಭದ್ರಕಾಳಿ, ಅಯ್ಯಪ್ಪದೇವರ ಹೆಸರಿನಲ್ಲಿ ನಡೆಯುವ ಈ ಹಬ್ಬಕ್ಕೆ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿರುವ 35ಕ್ಕೂ ಹೆಚ್ಚು ಹಾಡಿಯ ಗಿರಿಜನರು ಕಾಡಿನಲ್ಲಿ ಸಿಗುವ  ಸೊಪ್ಪು, ಹರಿದ ಬಟ್ಟೆ ಹಾಗೂ ಗೋಣಿ ಚೀಲಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೇಕಾಯಿ ಬುರುಡೆ, ಪ್ಲಾಸ್ಟಿಕ್‌ ಡಬ್ಬಿ ಹಾಗೂ ಟಿನ್‌ಗಳನ್ನು ಡೋಲಿನಂತ ತಯಾರಿಸಿ ಆಕರ್ಷಕವಾಗಿ ಕುಣಿಯುತ್ತಾ, ಸಿಕ್ಕ ಸಿಕ್ಕವರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಾ ಬಿûಾಟನೆ ಮಾಡುತ್ತಾ ಸಂಭ್ರಮಿಸುತ್ತಾರೆ.

ಪ್ರತಿ ವರ್ಷದ ಮೇ ತಿಂಗಳ ಕೊನೆಯ ಬುಧವಾರದಂದು ಈ ಹಬ್ಬ ಆಚರಿಸಲಾಗುವುದು. ದೇವರ ಮೇಲೆ ಭಕ್ತಿ, ಗೌರವದಿಂದ ಪ್ರಾರ್ಥನೆ ಮಾಡಿ ವೇಷ ಹಾಕುತ್ತಾರೆ. ಬಳಿಕ ಕಾಲ್ನಡಿಗೆಯಲ್ಲೇ ಸುತ್ತ-ಮುತ್ತಲ ಹಳ್ಳಿಗಳಿಗೆ ಸುತ್ತಾಡಿ ಹಾಗೂ ಮೈಸೂರು-ಕೇರಳ ರಾಜ್ಯ ಹೆದ್ದಾರಿಯಲ್ಲಿ ಬರುವ ವಾಹನ ಸವಾರರಿಂದ ಭಿಕ್ಷೆ ಬೇಡುತ್ತಾರೆ.

ದೇವರಪುರದಲ್ಲಿ ಪೂಜೆ: ಹನಗೋಡು ಭಾಗದಿಂದ  ಕಾಡಿನ ದಾರಿಯಲ್ಲೇ ಬರಿಗಾಲಿನಲ್ಲಿ ತೆರಳಿ ಹಣ ಮತ್ತು ದವಸ-ಧಾನ್ಯ ತಂದು, ತಿತಿಮತಿ ಬಳಿಯ ದೇವರಪುರದಲ್ಲಿರುವ ಅಯ್ಯಪ್ಪಹಾಗೂ ಭದ್ರಕಾಳಿ ದೇವಾಲಯಗಳಲ್ಲಿ ಅರ್ಪಿಸಿ ದೇವರ ಉತ್ಸವದಲ್ಲಿ ಪಾಲ್ಗೊಂಡು ತಾವು ಮಾಡಿದ ತಪ್ಪಿಗಾಗಿ ದೇವರಲ್ಲಿ ಕ್ಷಮೆಯಾಚಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಕುಟುಂಬ ಸಮೇತರಾಗಿ ಊಟ ಮಾಡಿ ಹಾಡಿಗಳಿಗೆ ವಾಪಾಸಾಗುವ ಮೂಲಕ ಹಬ್ಬ ಸಮಾರೋಪಗೊಳ್ಳುತ್ತದೆ.

* ಸಂಪತ್‌ಕುಮಾರ್‌ ಹುಣಸೂರು

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.