ಸಮಸ್ಯೆಗಳಿಗೆ ಸಂದಿಸುವರೇ ರಾಜುಗೌಡ


Team Udayavani, May 25, 2018, 3:11 PM IST

yad-1.jpg

ಸುರಪುರ: ನೂತನ ಶಾಸಕರಾಗಿ ಆಯ್ಕೆಯಾದ ರಾಜುಗೌಡ ಅವರ ಎದುರು ಕ್ಷೇತ್ರದ ನೂರಾರು ಸಮಸ್ಯೆಗಳು ಸವಾಲಾಗಿವೆ. ಈ ಎಲ್ಲ ಸಮಸ್ಯೆಗಳಿಗೆ ರಾಜುಗೌಡ ಪರಿಹಾರ ಕಂಡುಕೊಂಡು ಜನರ ಆಶೋತ್ತರಕ್ಕೆ ಸ್ಪಂದಿಸುವವರೇ ಎಂಬುದು ಕ್ಷೇತ್ರದ ಮತದಾರರ ನಿರೀಕ್ಷೆಯಾಗಿದೆ.

ನಗರದ ಕುಡಿಯವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರ ಮತ್ತು ನಿರ್ಲಕ್ಷ್ಯಕ್ಕೆ ಒಳಗಾಗಿರುವ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆ. ಬೋನ್ಹಾಳ ಏತ ನೀರಾವರಿ ಪುನಃ ಆರಂಭ, ಬೂದಿಹಾಳ ಬಪ್ಪರಗಿ ಏತ ನೀರಾವರಿ ಯೋಜನೆಗೆ ಕಾಯಕಲ್ಪ, ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪಿಕಪ್‌ ಡ್ಯಾಮ್‌ ನಿರ್ಮಾಣ, ಕಾರ್ಮಿಕರ ಗುಳೆ ತಪ್ಪಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ತಾಂಡ ಆಡುತ್ತಿವೆ. ಈ ಎಲ್ಲಾ ಮಸ್ಯೆಗಳಿಗೆ ಶಾಸಕರು ಸ್ಪಂದಿಸುವರೆ ಎಂಬುದು ಜನರ ಯಕ್ಷ ಪ್ರಶ್ನೆ.

ತಮ್ಮದೆ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ಬಹು ಗ್ರಾಮಗಳ ಯೋಜನೆ ಅಡಿಯಲ್ಲಿ ಶುದ್ಧ ನೀರಿನ ಘಟಕಗಳು ದಶಕಗಳೆ ಕಳೆದರು ಇನ್ನೂ ಪೂರ್ಣಗೊಂಡಿಲ್ಲ. ಈಗಾಗಿ ಕ್ಷೇತ್ರದ ಜನತೆ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುವುದು ತಪ್ಪಿಲ್ಲ, ನಗರಕ್ಕೆ ನೀರು ಸರಬಾರುಜು ಮಾಡುವ ನೀರು ಶುದ್ಧೀಕರಣ ಘಟಕದಲ್ಲಿ ಯಂತ್ರಗಳು ಕೆಟ್ಟು ಹೋಗಿ ದಶಕವೇ ಕಳೆದಿದೆ. ಅದನ್ನು ದುರಸ್ಥಿಗೊಳಿಸುವ ಗೋಜಿಗೆ ಕೈ ಹಾಕಿಲ್ಲ. ಅಶುದ್ಧ ನೀರನ್ನೆ ಸರಬರಾಜು ಮಾಡಲಾಗುತ್ತಿದೆ. ಅದು 20-25 ದಿನಗಳಿಗೆ ಒಮ್ಮೆ ಮಾತ್ರ ಹೀಗಾಗಿ ನಗರದ ಜನತೆ ಜನಪ್ರತಿನಿಧಿಗಳು ಎಂದರೆ ಕೆಟ್ಟ ದೃಷ್ಟಿಯಿಂದ ನೋಡುವ ಪರಸ್ಥಿತಿ ನಿರ್ಮಾಣವಾಗಿದೆ.

ಬಹು ಗ್ರಾಮಗಳ ಯೋಜನೆ ಅಡಿಯಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಮಾವಿನ ಮಟ್ಟಿ, ಮಂಗಳೂರ, ಚಿಗಿರಿಹಾಳ, ವಾಗಣಗೇರಿ, ಬೋನ್ಹಾಳ, ಆಲ್ದಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿ ನಿರ್ಮಿಸಲಾಗಿದ್ದ ಶುದ್ಧ ನೀರಿನ ಘಟಕಗಳು ಆರಂಭದ ಹಂತದಲ್ಲಿಯೇ ಹಾಳಾಗಿ ಹೋಗಿವೆ. ಕೆಲ ಕಡೆ ಮಷಿನ ಕೂಡಿಸಲಾಗಿದ್ದು, ಬೋರ್‌ ಕೊರೆಸಿಲ್ಲ, ಕೆಲ ಕಡೆ ವಿದ್ಯುತ್‌ ಸಂಪರ್ಕ ನೀಡಿಲ್ಲ ನಾನಾ ಕಾರಣಗಳಿಂದ ಯೋಜನೆ ಹಳ್ಳ ಹಿಡಿದಿರುವುದು ಜನಪ್ರತಿನಿಧಿಗಳ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. 

ಮೂರು ಶತಮಾನಗಳ ಹಿಂದೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಅಳವಡಿಸಿರುವ ಪೈಪ್‌ಗಳು ತುಕ್ಕ ಹಿಡಿದು ಎಲ್ಲೆಂದರಲ್ಲಿ ಒಡೆದು ಹೋಗಿವೆ. ಇದರಿಂದ ಪ್ರತಿ ಬಾರಿ ನೀರು ಸರಬರಾಜಿನಲ್ಲಿ ಸಮಸ್ಯೆ ಉಂಟಾಗಲಿದೆ. ನೀರಿನ ವ್ಯವಸ್ಥೆ ಸರಿಪಡಿಸಲು ಸರಕಾರ ಕೋಟ್ಯಂತರ ರೂ. ಅನುದಾನ ನೀಡಿದೆ. ಆದರೂ ಇದನ್ನು ಬದಲಿಸುವ ಗೋಜಿಗೆ ಹೋಗಿಲ್ಲ. ಹೊಸ ಪೈಪ್‌ ಲೈನ್‌ ಅವಳವಡಿಸಿ ನಗರದ ಲೆವಡಿ ಕೆರೆಗೆ ನೀರು ಸಂಗ್ರಹಿಸಿದರೆ ಪ್ರತಿ ದಿನವೂ ನೀರು ಸರಬರಾಜು ಮಾಡಬಹುದು. ಇದು ಜನರ ಸಂತಸಕ್ಕೂ ಕಾರಣ ಆಗುತ್ತದೆ. ಆದರೆ ಈ ಬಗ್ಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದವರು ನಂತರ ಬಹುಬೇಗ ಮರೆತು ಬಿಡುತ್ತಾರೆ. ಹೀಗಾಗಿ ಜನಪ್ರತಿನಿಧಿಗಳನ್ನು ನಂಬುವಂತ್ತಿಲ್ಲ ಎಂದು ಜನತೆ ನಿರಾಶೆ ವ್ಯಕ್ತ ಪಡಿಸುತ್ತಾರೆ.

ಕೆರೆ-ಬಾವಿ ತುಂಬಿಸುವುದು ಅಗತ್ಯ: ಅಂತರ್ಜಲಮಟ್ಟ ರಕ್ಷಣೆಗೆ ಜನಪ್ರತಿನಿಧಿಗಳು ಎಳ್ಳಷ್ಟು ಪ್ರಯತ್ನಿಸಿಲ್ಲ. ನಗರ ಸೇರಿದಂತೆ ಕ್ಷೇತ್ರದಲ್ಲಿ ಅನೇಕ ಕೆರೆ ಬಾವಿಗಳಿವೆ. ಪಕ್ಕದಲ್ಲಿಯೇ ಕೃಷ್ಣಾನದಿ ಹರಿಯುತ್ತದೆ. ಕಾಲುವೆ ನೀರು
ವ್ಯರ್ಥವಾಗಿ ಹಳ್ಳ ಸೇರುತ್ತಿದೆ. ಇದನ್ನು ಬಳಸಿಕೊಂಡು ಕರೆ, ಬಾವಿ ತುಂಬಿಸುವ ಗೋಜಿಗೆ ಹೋಗಲಿಲ್ಲ. ಕೆರಗಳ ಹೂಳೆತ್ತುವ ಕೆಲಸ ಮಾಡಲ್ಲಿಲ್ಲ. ಐತಿಹಾಸಿಕತೆ ಉಳ್ಳ ದೇವರಭಾವಿ. ನಾಯಕನ ಬಾವಿ, ದೊಡ್ಡ ಬಾವಿ, ಹೊಸ ಬಾವಿ, ಯಲ್ಲಪ್ಪನ ಬಾವಿ ಸೇರಿದಂತೆ ಅನೇಕ ಬಾವಿಗಳು ನಗದಲ್ಲಿವೆ. ಆದರೆ ಅವುಗಳ ರಕ್ಷಣೆಗೂ ಮುಂದಾಗಿಲ್ಲ.

ಏತ ನೀರಾವರಿ ಪುನಃ ಆರಂಭಕ್ಕೆ ಕಾಯಕಲ್ಪ: 2011-12ರಲ್ಲಿ ಆರಂಭಗೊಂಡಿದ್ದ ಬೋನ್ಹಾಳ ಏತ ನೀರಾವರಿಯನ್ನು ಟಿಸಿ ನೆಪದಿಂದ ಕಳೆದ 5 ವರ್ಷಗಳಿಂದ ಯೋಜನೆಯನ್ನೆ ಸ್ಥಗಿತಗೊಳಿಸಲಾಗಿದೆ. ಇದರಿಂದ ಸುಮಾರು 15 ಸಾವಿರ ಹೆಕ್ಟೇರ್‌ ಭೂಮಿ ನೀರಾವರಿಯಿಂದ ವಂಚಿತ ಗೊಂಡಿತ್ತು. ಈಗ ಪುನಃ ಅದಕ್ಕೆ ಕಾಯಕಲ್ಪ ನೀಡಿ ಯೋಜನೆಯನ್ನು ಪುನರಾರಂಭಿಸದಲ್ಲಿ 20 ಗ್ರಾಮಗಳ ನೀರಾವರಿ ವಂಚಿತ ರೈತರ ಭಾಗ್ಯದ ಬಾಗಿಲು ತೆರೆಯಲಿದೆ ಎಂಬುದು ನೀರಾವರಿ ವಂಚಿತ ರೈತರ ನಿರೀಕ್ಷೆಯಾಗಿದೆ.

ಬೂದಿಹಾಳ ಬೊಪ್ಪರಗಿ ಏತ ನೀರಾವರಿ ಅನುಷ್ಠಾನಕ್ಕೆ ಆದ್ಯತೆ ನೀಡಿದಲ್ಲಿ, ಸುಮಾರು 42 ಗ್ರಾಮಗಳ ಅಂದಾಜು 25 ಸಾವಿರ ಹೆಕ್ಟೇರ್‌ ಜಮೀನು ನೀರಾವರಿಗೆ ಒಳಪಡಲಿದೆ. ಇದರಿಂದ ಆ ಭಾಗದ ರೈತರ ಬದುಕು ಹಸನಾಗಲಿದೆ. ಇದಕ್ಕೆ ಶಾಸಕರು ಮುಂದಾಗುವರೆ ಎಂಬುದು ಅಲ್ಲಿಯ ರೈತರ ಆಶೋತ್ತರವಾಗಿದೆ. 

ಭರವಸೆ ಈಡೇರಿಸಲಿ ಉದ್ಯೋಗ ಖಾತ್ರಿ ಆರಂಭಿಸಿ ಕಾರ್ಮಿಕರಿಗೆ ಕೆಲಸ ನೀಡಿದಲ್ಲಿ ಕಾರ್ಮಿಕರು ಕೆಲಸ ಹರಸಿ
ಗುಳೆ ಹೋಗುವುದು ಸ್ವಲ್ಪ ಮಟ್ಟಿಗಾದರು ತಪ್ಪಿಸಿದಂತ್ತಾಗುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಪ್ರಯತ್ನಿಸುವರೆ ಎಂದು ಕಾರ್ಮಿಕರು ಎದುರು ನೋಡುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಜನರಿಗೆ ಭರವಸೆ ನೀಡಿದಂತೆ ಈ ಎಲ್ಲಾ ಸಮಸ್ಯೆಗಳಿಗೆ ಶಾಸಕರು ಸ್ಪಂದಿಸಿ ಜನಪರವಾದ ಆಡಳಿತ ನೀಡುವವರೇ ಎಂಬುದು ಕ್ಷೇತ್ರದ
ಜನತೆಯ ಆಶಯವಾಗಿದೆ.

ನಗರದ ನೀರು ಸರಬರಾಜು ಸಮಸ್ಯೆಗೆ ಶಾಶ್ವತ ಪರಿಹಾರ ಮತ್ತು ಬಹುಗ್ರಾಮ ಯೋಜನೆ ಅಡಿಯಲ್ಲಿ ಕುಡಿಯವ ನೀರು ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಪ್ರತಿ ಗ್ರಾಮಕ್ಕೂ ಮಹಿಳಾ ಹೈಟೆಕ್‌ ಶೌಚಾಲಯ, ಬೋನ್ಹಾಳ ಏತ ನೀರಾವರಿ ಪುನಃ ಆರಂಭ, ಬಪ್ಪರಗಿ ಬೂದಿಹಾಳ ಏತ ನೀರಾವರಿ ಅನುಷ್ಠಾನ, ದೇವಾಪುರ, ಲಕ್ಷ್ಮೀಪುರ ಸೇರಿದಂತೆ ಇತರೆ ಹಳ್ಳಗಳಿಗೆ ಪಿಕಪ್‌ ಡ್ಯಾಂ ನಿರ್ಮಿಸಿ ಸಮಗ್ರ ನೀರಾವರಿ ಕಲ್ಪಿಸುವುದು ನನ್ನ ಮುಖ್ಯ ಗುರಿಯಾಗಿದೆ. ಒಟ್ಟಾರೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಜನರ ಆಶೋತ್ತರಗಳಿಗೆ ಸ್ಪಂದಿಸಿ ಕ್ಷೇತ್ರದ ಸಮಗ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಜನಪರ ಆಡಳಿತ ನೀಡುತ್ತೇನೆ.  ನರಸಿಂಹ ನಾಯಕ (ರಾಜುಗೌಡ), ಶಾಸಕ

ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.