ಮಕ್ಕಳ ಪೀಡನೆ ತಡೆಗೆ ಕೈ ಜೋಡಿಸಿ: ಅರುಣ್‌ಕುಮಾರ್‌


Team Udayavani, May 25, 2018, 3:38 PM IST

dvg-2.jpg

ದಾವಣಗೆರೆ: ಮಕ್ಕಳ ಹಕ್ಕುಗಳ ರಕ್ಷಣೆ, ದೌರ್ಜನ್ಯ ತಡೆಗೆ ಸರ್ಕಾರದ ಜೊತೆಗೆ ಇಡೀ ಸಮಾಜ ಕೈ ಜೋಡಿಸಬೇಕಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ, ವಕೀಲ ಎಲ್‌.ಎಚ್‌. ಅರುಣಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ, ಬೆಂಗಳೂರಿನ 15 ವರ್ಷದ ಬಾಲಕ ಮಹರ್ಷಿ ಸಂಕೇತ್‌ರ ಧ್ವನಿ ಎತ್ತಿ ಹೆಸರಿನಲ್ಲಿ ಹಮ್ಮಿಕೊಂಡಿರುವ ಸೈಕಲ್‌ ಜಾಥಾವನ್ನು ಜಯದೇವ ವೃತ್ತದಲ್ಲಿ ಸ್ವಾಗತಿಸಿ, ಮಾತನಾಡಿದ ಅವರು, ದಿನೇ ದಿನೇ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ. ಇವುಗಳ ತಡಗೆ ಎಲ್ಲರೂ ದನಿ ಎತ್ತಬೇಕು ಜೊತೆಗೆ ಜಾಗೃತಿ ಮೂಡಿಸಬೇಕೆಂದರು.

ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಪೀಡನೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ 2012ರಲ್ಲಿ ಪ್ರಬಲವಾದ ಕಾಯ್ದೆ ಜಾರಿಮಾಡಿದೆ. ಕಾಯ್ದೆ ಅನ್ವಯ ಆರೋಪಿಗಳಿಗೆ ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬಹುದಾಗಿದೆ. ಜೊತೆಗೆ ಸಂತ್ರಸ್ತರಿಗೆ ಸೂಕ್ತ ಕಾನೂನು, ವೈದ್ಯಕೀಯ ಸವಲತ್ತು ನೀಡಲಾಗುತ್ತಿದೆ. ಇದರ ಕುರಿತು ಸಹ ನಾವು ಜಾಗೃತಿ ಮೂಡಿಸಬೇಕು. ಆಗ ದೌರ್ಜನ್ಯ ಪ್ರಮಾಣ ಕಡಿಮೆ ಆಗಲಿದೆ ಎಂದು ಅವರು ಹೇಳಿದರು.

ಬಾಲಕ ಮಹರ್ಷಿ ಸಂಕೇತ್‌ ಜಾಗೃತಿಗಾಗಿ ಬೆಂಗಳೂರಿನಿಂದ ಸೈಕಲ್‌ ಜಾಥಾ ಆರಂಭಿಸಿದ್ದು, ಮುಂಬೈವರೆಗೆ ಸಾಗಲಿದ್ದಾರೆ. ಮಾರ್ಗದಲ್ಲಿ ಬರುವ ಪಟ್ಟಣ, ಹಳ್ಳಿಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಕಾನೂನು ಕುರಿತು ಅರಿವು ಮೂಡಿಸಲಿದ್ದಾರೆ. ಅವರ ಈ ಕಾರ್ಯ ಶ್ಲಾಘನೀಯ ಎಂದರು.

ರೈತ ಮುಖಂಡ ಅರುಣಕುಮಾರ ಕುರುಡಿ ಮಾತನಾಡಿ, ಇಂದು ತಪ್ಪುಗಳು ಆದ ಮೇಲೆ ಟೀಕೆ ಮಾಡುತ್ತಾರೆ. ಹಾಗೆ, ಹೀಗೆ ಮಾಡಲು ಸಲಹೆ ನೀಡುತ್ತಾರೆ. ಆದರೆ, ಸ್ವತಃ ಯಾರೂ ಸಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯತ್ನ ಮಾಡುವುದಿಲ್ಲ. ಇದಕ್ಕೆ ಅಪವಾದ ಎಂಬಂತೆ ಮಹರ್ಷಿ ಸಂಕೇತ್‌ ತಾವೇ ಖುದ್ದು ಸೈಕಲ್‌ ಜಾಥದ ಮೂಲಕ ಅರಿವು ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆಂದರು.

ಜಾಥಾ ಕೈಗೊಂಡಿರುವ ಮಹರ್ಷಿ ಸಂಕೇತ್‌ ಮಾತನಾಡಿ, ನಾನು ಬೆಂಗಳೂರಿನಿಂದ ಜಾಥಾ ಆರಂಭಿಸಿದ್ದೇನೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮಕ್ಕಳ ಹಿತ ಕಾಯುವಲ್ಲಿ ಎಲ್ಲರೂ ಕೆಲಸ ಮಾಡಬೇಕು. ನಾನೂ ಸಹ ಏನಾದರೂ ಮಾಡಬೇಕೆಂಬ ಉದ್ದೇಶದಿಂದ ಜಾಥಾ ಆರಂಭಿಸಿದ್ದೇನೆ ಎಂದರು. ಚಕ್‌ದೇ ಇಂಡಿಯಾ, ಗಂಗಾಜಲ್‌ ಹಿಂದಿ ಚಲನಚಿತ್ರಗಳ ಕಲಾ ನಿರ್ದೇಶಕ ಸುಕಾಂತ್‌, ನೆರಳು ಬೀಡಿ ಕಾರ್ಮಿಕರ ಸಂಘದ ಜಬೀನಾ ಖಾನಂ, ಕರಿಬಸವರಾಜ ಇತರರು ಜಾಥಾ ಸ್ವಾಗತಿಸಿದರು. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.