ಚೆನ್ನೈ: ಪ್ರಾಣ ಪಣಕ್ಕಿಟ್ಟು ರೇಪ್ ತಪ್ಪಿಸಿದ ಆರ್ಪಿಎಫ್ ಸಿಬಂದಿ
Team Udayavani, May 25, 2018, 4:48 PM IST
ಚೆನ್ನೈ : ಕಾಮಾಂಧ ಯುವಕನೊಬ್ಬ ಮಹಿಳಾ ಬೋಗಿಗೆ ನುಗ್ಗಿ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಯತ್ನಿಸಿದ್ದು, ಆರ್ಪಿಎಫ್ ಪೊಲೀಸ್ ಓರ್ವರ ಸಮಯ ಪ್ರಜ್ಞೆ ಮತ್ತು ಸಾಹಸದಿಂದ ಯುವತಿಯ ಪ್ರಾಣ ಮತ್ತು ಮಾನ ಉಳಿದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಚಿಂತಾದ್ರಿ ಪೇಟ್ ಮತ್ತು ಪಾರ್ಕ್ ನಡುವೆ ಚಲಿಸುತ್ತಿದ್ದ ರೈಲಿನ ಮಹಿಳಾ ಬೋಗಿಯಲ್ಲಿ ರಾತ್ರಿ 11
.45 ರ ವೇಳೆ ಸತ್ಯರಾಜ್ ಎಂಬ 26 ರ ಹರೆಯದ ಕಾಮಾಂಧ ಯುವಕ ಯುವತಿಯ ಮೇಲೆ ಎರಗಿ ಹೇಯ ಕೃತ್ಯಕ್ಕೆ ಮುಂದಾಗಿದ್ದ, ಈ ವೇಳೆ ಯುವತಿ ಕಿರುಚಿಕೊಂಡಿದ್ದಾರೆ.
ಪಕ್ಕದ ಬೋಗಿಯಲ್ಲಿ ಆರ್ಪಿಎಫ್ ಪೊಲೀಸ್ ಕೆ.ಶಿವಾಜಿ ಅವರು ಕೂಗು ಕೇಳಿಸಿಕೊಂಡಿದ್ದಾರೆ. ಅದಾಗಲೇ ರೈಲು ಚಲಿಸುತ್ತಿತ್ತು. ಕಂಪಾರ್ಟ್ ಮೆಂಟ್ ದಾಟುವುದು ಅಸಾಧ್ಯವಾಗಿತ್ತು. ಆದರೂ ಪ್ರಾಣ ಪಣಕ್ಕಿಟ್ಟು ಕೆಳಗೆ ಜಿಗಿದ ಶಿವಾಜಿ ಅವರು ಪಕ್ಕದ ಬೋಗಿಗೆ ನುಗ್ಗಿ ಹೇಯ ಕೃತ್ಯ ತಡೆದಿದ್ದಾರೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿವಾಜಿ ಅವರು ಸಮಯಪ್ರಜ್ಞೆ ಮೆರೆಯದಿದ್ದರೆ ಯುವತಿಯ ಮೇಲೆ ಹೇಯ ಕೃತ್ಯ ನಡೆದೇ ಹೋಗುತ್ತಿತ್ತು.
ಯುವತಿಯ ತುಟಿಗಳಲ್ಲಿ ರಕ್ತ ಸೋರುತ್ತಿತ್ತು ಮತ್ತು ಬಟ್ಟೆಗಳು ಹರಿದ ಸ್ಥಿತಿಯಲ್ಲಿದ್ದವು . ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಬಂಧಿತ ಸತ್ಯರಾಜ್ನ ವಿಚಾರಣೆ ನಡೆಸುತ್ತಿದ್ದಾರೆ.
ಸತ್ಯರಾಜ್ ಕೃತ್ಯ ಎಸಗುವ ವೇಳೆ ಮದ್ಯ ಸೇವನೆ ಮಾಡಿದ್ದ ಎಂದು ಪೊಲೀಸರು ತಿಳಸಿದ್ದು, ಆತ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
25 ರ ಹರೆಯದ ಯುವತಿ ರಾತ್ರಿ ಕೆಲಸ ಮುಗಿಸಿ ಮನೆಗೆ ರೈಲಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸಾಹಸ ತೋರಿದ ಆರ್ಪಿಎಫ್ ಸಿಬಂದಿ ಶಿವಾಜಿ ಅವರಿಗೆ ಇಲಾಖೆ 5 ಸಾವಿರ ರೂಪಾಯಿ ಬಹುಮಾನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ