ಬಿತ್ತನೆ ಪೂರ್ವ ಚಟುವಟಿಕೆ ಆರಂಭ
Team Udayavani, May 25, 2018, 5:41 PM IST
ಬೆಳಗಾವಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಇದುವರೆಗೆ ಉತ್ತಮ ಮಳೆಯಾಗಿದ್ದು ರೈತರು ಹೊಲದಲ್ಲಿ ಬಿತ್ತನೆ ಪೂರ್ವ ಚಟುವಟಿಕೆಗಳನ್ನು ಪ್ರಾರಂಭಿಸಿದ್ದು, ಭೂಮಿ ಸಿದ್ಧತೆ ಕಾರ್ಯ, ಮಣ್ಣಿಗೆ ಸಾವಯವ ಗೊಬ್ಬರ ಕೂಡಿಸುವ ಕಾರ್ಯಗಳು ಭರದಿಂದ ಸಾಗಿವೆ.
ತಾಲೂಕಿನಲ್ಲಿ ಇದುವರೆಗೆ ವಾಡಿಕೆಯಂತೆ 112 ಮಿಮೀ ಮಳೆ ಆಗಬೇಕಾಗಿದ್ದು, ಇಲ್ಲಿಯವರೆಗೆ 101 ಮಿಮೀ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿಂದ ತಾಲೂಕಿನ ಕೃಷಿ ಇಲಾಖೆಯು ರೈತರಿಗೆ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ, ಲಘು ಪೋಷಕಾಂಶ, ಸಾವಯವ
ಗೊಬ್ಬರ, ಮುಂತಾದವುಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ವಿತರಿಸುತ್ತಿದೆ.
ಬೆಳಗಾವಿ ತಾಲೂಕಿನಲ್ಲಿ ರೈತರಿಗೆ ಬೀಜ ಖರೀದಿಸಲು ಅನುಕೂಲವಾಗುವಂತೆ ಒಟ್ಟು 12 ಬೀಜ ವಿತರಣಾ ಕೇಂದ್ರಗಳನ್ನು ತೆಗೆಯಲಾಗಿದೆ. ತಾಲೂಕಿನಲ್ಲಿ 48,050 ಹೆಕ್ಟೇರ್ ಮುಂಗಾರು ಬಿತ್ತನೆ ಗುರಿಯಿದ್ದು ಭತ್ತ, ಸೋಯಾಬೀನ್ ಪ್ರಮುಖ ಬೆಳೆಯಾಗಿದೆ. ರೈತರಿಗೆ ಅನುಕೂಲವಾಗುವಂತೆ ಸೋಯಾಬೀನ್ 4000 ಕ್ವಿಂ, ಭತ್ತ 350 ಕ್ವಿಂ, ಬೀಜಗಳನ್ನು 12 ವಿತರಣಾ ಕೇಂದ್ರಗಳ ಮೂಲಕ
ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ.
ಬೆಳಗಾವಿಯ ಶಿವಾಜಿ ನಗರದಲ್ಲಿ ರೈತ ಸಂಪರ್ಕ ಕೇಂದ್ರ, ಕಾಕತಿ ಪಿಕೆಪಿಎಸ್ ಸೊಸೈಟಿಯಲ್ಲಿ ರೈತ ಸಂಪರ್ಕ ಕೇಂದ್ರ-ಕಾಕತಿ, ಉಚಗಾಂವ ರೈತ ಸಂಪರ್ಕ ಕೇಂದ್ರ, ಬೆಳಗುಂದಿ ಹಾಗೂ ನಂದಿಹಳ್ಳಿ ಪಿ.ಕೆ.ಪಿ.ಎಸ್, ಹಿರೇಬಾಗೇವಾಡಿ ಪಿ.ಕೆ.ಪಿ.ಎಸ್, ಹಲಗಾ ಪಿ.ಕೆ.ಪಿ.ಎಸ್, ಬೆಂಡಿಗೇರಿ ಪಿ.ಕೆ.ಪಿ.ಎಸ್, ಬಡಾಲ ಅಂಕಲಗಿ, ಮಾರೀಹಾಳ ಪಿ.ಕೆ.ಪಿ.ಎಸ್ ಹಾಗೂ, ಮೋದಗಾ ಪಿ.ಕೆ.ಪಿ.ಎಸ್ ಕೇಂದ್ರಗಳಲ್ಲಿ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು ತಮ್ಮ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಉಪಯೋಗ ಮಾಡಿದ ರಸಗೊಬ್ಬರ ಬೆಳೆಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡಲು ಜೈವಿಕ ಗೊಬ್ಬರ ಹಾಗೂ ಲಘು ಪೋಷಕಾಂಶಗಳಾದ ಜಿಂಕ್, ಬೋರಾಕ್ಸ ಹುಡಿ ದ್ರವ ರೂಪದ ಗೊಬ್ಬರಗಳನ್ನು ತಪ್ಪದೇ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು