ವಾಜಪೇಯಿಯೇ ಬೆಂಬಲ ಕೊಟ್ಟರೂ ಅಪ್ಪ ನಿರಾಕರಿಸಿದರು


Team Udayavani, May 26, 2018, 6:15 AM IST

180525kpn93.jpg

ಬೆಂಗಳೂರು: 40 ವರ್ಷಕ್ಕೂ ಹೆಚ್ಚು ವರ್ಷ ರಾಜಕೀಯ ಮಾಡಿದ ದೇವೇಗೌಡರು ಅಧಿಕಾರ ನೋಡಿದ್ದು ನಾಲ್ಕೈದು
ವರ್ಷ ಮಾತ್ರ. ಕಾಂಗ್ರೆಸ್‌ ಬೆಂಬಲ ಪಡೆದು ಅವರು ಪ್ರಧಾನಿಯಾದರು. ನಂತರ, ಕಾಂಗ್ರೆಸ್‌ನವರು ಬೆಂಬಲ ವಾಪಸ್‌ ಪಡೆದರು. ಆ ಸಂದರ್ಭದಲ್ಲಿ ವಾಜಪೇಯಿಯವರು ಚೀಟಿ ಕಳುಹಿಸಿ ಸರ್ಕಾರಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ ಎಂದು ಹೇಳಿದ್ದರು.

ಆದರೆ, ದೇವೇಗೌಡರು ಅದನ್ನು ನಿರಾಕರಿಸಿ ಜಾತ್ಯತೀತ ಸಿದ್ಧಾಂತ ಎತ್ತಿ ಹಿಡಿದರು. ಅಧಿಕಾರದ ಆಸೆಗಾಗಿ ನಾನು ಈ ಮೈತ್ರಿಯನ್ನು ಒಪ್ಪಿಕೊಂಡಿದ್ದಲ್ಲ. ನನ್ನ ಪಕ್ಷ, ರಾಜಕೀಯ ಭವಿಷ್ಯ ಯೋಚಿಸಿ ಈ ನಿರ್ಧಾರ ಕೈಗೊಳ್ಳಬೇಕಾಯಿತು.

ಅದಕ್ಕೆ ಮುಂಚೆ ದೇವೇಗೌಡರು, ನಾನು ಬಿಜೆಪಿ ಜತೆ ಹೋದರೆ ಕುಟುಂಬದಿಂದ ಬಹಿಷ್ಕಾರ ಹಾಕುವುದಾಗಿ
ಹೇಳಿದ್ದರು. ಹಿಂದೆ ಬಿಜೆಪಿ ಜತೆ ಸೇರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಏನೆಲ್ಲಾ ನೋವು ಅನುಭವಿಸಿದ್ದೇನೆ ಎಂಬುದು ನನಗೊಬ್ಬನಿಗೇ ಗೊತ್ತು. ಎರಡೇ ತಿಂಗಳಲ್ಲಿ ವಿಧಾನ ಪರಿಷತ್‌ ಸದಸ್ಯರೊಬ್ಬರು ನಾನು 150 ಕೋಟಿ ರೂ. ಗಣಿ ಇಲಾಖೆ ಹಣ ನುಂಗಿಹಾಕಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಯಾಗಿ ಸಚಿವರೊಬ್ಬರನ್ನು ಸಾಯಿಸಲು ಸುಪಾರಿ ಕೊಟ್ಟೆ ಎಂದು ನನ್ನ ವಿರುದ್ಧ ಎಫ್ಐಆರ್‌ ದಾಖಲಿಸಿದರು. ನಂತರ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲಿಲ್ಲ ಎಂದು ನನ್ನ ಮೇಲೆ ವಚನಭ್ರಷ್ಟ, ನಂಬಿಕೆ ದ್ರೋಹಿ ಎಂಬ ಆಪಾದನೆ ಹೊರಿಸಿದರು.

ಆದರೆ, ಅದು ನಾನು ಮಾಡಿದ ತಪ್ಪಲ್ಲ. 2006ರಲ್ಲಿ ಮೈತ್ರಿ ಮಾಡಿಕೊಳ್ಳುವಾಗ ನನಗೂ, ಯಡಿಯೂರಪ್ಪ
ಅವರಿಗೂ ಒಪ್ಪಂದ ಆಗಿತ್ತೇ ಹೊರತು ಬಿಜೆಪಿ ಜತೆ ಒಪ್ಪಂದ ಆಗಿರಲಿಲ್ಲ. ಹೇಳಿದ ಮಾತಿನಂತೆ ಯಡಿಯೂರಪ್ಪಗೆ ಅಧಿಕಾರ ಬಿಟ್ಟುಕೊಟ್ಟೆ. ಒಂಬತ್ತು ದಿನ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದರು. ಅದರ ಮಧ್ಯೆ ಕೇಂದ್ರದ ಬಿಜೆಪಿ ನಾಯಕರು ಬಂದು ದೇವೇಗೌಡರ ಜತೆ ಕುಳಿತು ಚರ್ಚಿಸಿದರು. 

ಒಪ್ಪಂದ ಮಾಡಿಕೊಳ್ಳಬೇಕು ಎಂದಾಗ ದೇವೇಗೌಡರು ಷರತ್ತುಗಳನ್ನು ಮುಂದಿಟ್ಟು ಸಹಿ ಹಾಕುವಂತೆ ಹೇಳಿದರು. ಆಗ ನಾನು, ನೀವೀಗ ಸಹಿ ಹಾಕಿ. ಸರ್ಕಾರ ರಚನೆ ನಂತರ ಅದನ್ನು ಕಸದ ಬುಟ್ಟಿಗೆ ಎಸೆದರೆ ಆಯಿತು ಎಂದು ಯಡಿಯೂರಪ್ಪಗೆ ಹೇಳಿದೆ. ಆದರೆ, ನಂತರ ನಡೆದದ್ದೇ ಬೇರೆ. ಅಂದು ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡದೇ ಇದ್ದರೆ, ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ತೆರೆಯುತ್ತಿತ್ತೇ? 2008ರಲ್ಲಿ ಬಿಜೆಪಿ ಸರ್ಕಾರ ರಚಿಸುತ್ತಿತ್ತೇ?
ರೈತರು, ಕೊಳಗೇರಿ ನಿವಾಸಿಗಳು, ದೀನ ದಲಿತರಿಗೆ ನ್ಯಾಯ ಒದಗಿಸಲು, ರೈತರ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಅವಕಾಶ ಸಿಕ್ಕಿದರೂ ಜೆಡಿಎಸ್‌-ಕಾಂಗ್ರೆಸ್‌ನವರು ಬಿಡಲಿಲ್ಲ ಎಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಂದರ್ಭದಲ್ಲಿ ಹೇಳಿದ್ದರು. ಯಡಿಯೂರಪ್ಪ ನವರೇ, 2008ರಲ್ಲಿ
ಜನ ಅಧಿಕಾರ ಕೊಟ್ಟರಲ್ಲಾ, ಆಗೇನು ಮಾಡಿದಿರಿ? 2006ರಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು
ಹೇಳಿದಾಗ ಅದು ಆಗುವುದಿಲ್ಲ ಎಂದಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.