ಕ್ಷೇತ್ರಗಳತ್ತ ಮುಖ ಮಾಡಿದ ಜೆಡಿಎಸ್‌-ಕಾಂಗ್ರೆಸ್‌ ಶಾಸಕರು


Team Udayavani, May 26, 2018, 6:25 AM IST

180525kpn98.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರ “ಆಪರೇಷನ್‌ ಕಮಲ’ ಕಾರ್ಯಾಚರಣೆ ಭೀತಿಯಿಂದ ಹೋಟೆಲ್‌ ಹಾಗೂ ರೆಸಾರ್ಟ್‌ಗಳಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಶುಕ್ರವಾರ ವಿಶ್ವಾಸಮತಯಾಚನೆ ನಂತರ ಕ್ಷೇತ್ರಗಳತ್ತ  ಮುಖ ಮಾಡಿದರು.

ಮೇ 15 ರಂದು ಫ‌ಲಿತಾಂಶ ಪ್ರಕಟಗೊಂಡ ರಾತ್ರಿಯೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಬೆಂಗಳೂರಿಗೆ ಕರೆಸಲಾಗಿತ್ತು. ನಂತರ ಹತ್ತು ದಿನಗಳ ಕಾಲ ನಗರದ ವಿವಿಧ ಹೋಟೆಲ್‌, ಹೊರ ವಲಯದ ರೆಸಾರ್ಟ್‌ಗಳಲ್ಲಿ ವಾಸ್ತವ್ಯ ಇರಿಸಲಾಗಿತ್ತು.

ಕುಟುಂಬ ಸದಸ್ಯರು ಬಂದು ಶಾಸಕರನ್ನು ಕಾಣಲು ಮಾತ್ರ ಅವಕಾಶ ಕಲ್ಪಿಸಿ ಉಳಿದಂತೆ ಬೆಂಬಲಿಗರು-ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರಿಗೆ ಸಂಪರ್ಕ ಇರಲಿಲ್ಲ. ಹತ್ತು ದಿನ ಬಹುತೇಕ ಹೋಟೆಲ್‌ ಹಾಗೂ ರೆಸಾರ್ಟ್‌ಗಳಲ್ಲಿ ಬಂಧಿಯಾಗಿದ್ದರು.

ಶುಕ್ರವಾರ ವಿಧಾನಸಭೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಪಡೆಯುತ್ತಲೇ ಅವರಿಗೆ ಶುಭ ಕೋರಿದ  ಎರಡೂ ಪಕ್ಷಗಳ ಶಾಸಕರು ತಮ್ಮ ತಮ್ಮ ಕ್ಷೇತ್ರಗಳತ್ತ ತೆರಳಿದರು.ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಶುಕ್ರವಾರ ವಿಧಾನಸೌಧದಲ್ಲಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ಕಚೇರಿಯಲ್ಲೇ ಜೆಡಿಎಸ್‌ ಶಾಸಕರ ಜತೆ  ಊಟ ಮಾಡಿದ್ದು ವಿಶೇಷ.

ಮೊಕ್ಕಾಂ
ಈ ಮಧ್ಯೆ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಸಚಿವಾಕಾಂಕ್ಷಿಗಳು ಬೆಂಗಳೂರಿನಲ್ಲೇ ಉಳಿದಿದ್ದು ನಾಯಕರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕಾಂಗ್ರೆಸ್‌ ಸಚಿವಾಕಾಂಕ್ಷಿಗಳು ದೆಹಲಿಗೂ ತೆರಳಿದ್ದಾರೆ ಎನ್ನಲಾಗಿದೆ.

ಬಿಗಿ ಭದ್ರತೆ
ಎಚ್‌.ಡಿ.ಕುಮಾರಸ್ವಾಮಿಯವರ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಶುಕ್ರವಾರವೂ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆ ಆಯೋಜಿಸಲಾಗಿತ್ತು. ಹೋಟೆಲ್‌ ಹಾಗೂ ರೆಸಾರ್ಟ್‌ನಲ್ಲಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಖಾಸಗಿ ಬಸ್‌ಗಳಲ್ಲಿ ಬೆಳಗ್ಗೆ 11.30 ರ ವೇಳೆಗೆ ವಿಧಾನಸೌಧಕ್ಕೆ ಕರೆತರಲಾಯಿತು. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಯುವವರೆಗೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರ ಮೇಲೆ ಆಯಾ ಪಕ್ಷದ ನಾಯಕರು ನಿಗಾ ವಹಿಸಿದ್ದರು. ವಿಶ್ವಾಸಮತ ಮುಗಿಯುತ್ತಿದ್ದಂತೆ ಎರಡೂ ಪಕ್ಷದ ನಾಯಕರು ನಿಟ್ಟುಸಿರು ಬಿಟ್ಟರು.

ಸಂಭ್ರಮ
ವಿಧಾನಸಭೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸಮತ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಸಂಭ್ರಮಿಸಿದರು.  ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಜತೆಗೂಡಿ ಮಾಧ್ಯಮಗಳತ್ತ ವಿಜಯದ ಸಂಕೇತ ಪ್ರದರ್ಶಿಸಿದರು. ಆ ನಂತರ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ಸಿದ್ದರಾಮಯ್ಯ,ಆರ್‌.ವಿ.ದೇಶಪಾಂಡೆ, ಎಚ್‌.ಕೆ.ಪಾಟೀಲ್‌, ರೋಷನ್‌ಬೇಗ್‌, ಜಮೀರ್‌ ಅಹಮದ್‌, ಶ್ಯಾಮನೂರು ಶಿವಶಂಕರಪ್ಪ, ಎಂ.ಕೃಷ್ಣಪ್ಪ, ಎಚ್‌.ವಿಶ್ವನಾಥ್‌, ಜಿ.ಟಿ.ದೇವೇಗೌಡ, ಬಸವರಾಜ್‌ ಪಾಟೀಲ್‌ ಹುಮ್ನಾಬಾದ್‌ ಸೇರಿದಂತೆ ಉಭಯ ಪಕ್ಷಗಳ ಶಾಸಕರು ಅಭಿನಂದನೆ ಸಲ್ಲಿಸಿದರು.

ನಾಯಕರ ಉಪಸ್ಥಿತಿ
ಅಧಿಕಾರಿಗಳ ಗ್ಯಾಲರಿಯಲ್ಲಿ ರಾಜ್ಯ  ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ರಾಜ್ಯಸಭೆ ಸದಸ್ಯ ಎಲ್‌.ಹನುಮಂತಯ್ಯ, ಸಂಸದ ಧ್ರುವನಾರಾಯಣ ಕುಳಿತು ವಿಶ್ವಾಸಮತ ಯಾಚನೆ ಮುಗಿಯುವರೆಗೂ ಅಲ್ಲೇ ಇದ್ದು ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಮಾಜಿ ಸಚಿವ ಎಚ್‌.ಆಂಜನೇಯ, ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಮೋಟಮ್ಮ, ಜಯಮ್ಮ, ಮುಖಂಡರಾದ ಸಲೀಂ ಅಹಮದ್‌, ಪ್ರಕಾಶ್‌ ರಾಥೋಡ್‌ ಸೇರಿದಂತೆ ಹಲವಾರು ನಾಯಕರು ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ವಿಶ್ವಾಸಮತ ಕಲಾಪ ವೀಕ್ಷಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.