ಚರಂಡಿ ಸರಿಪಡಿಸಿ, ತಡೆಗೋಡೆ ನಿರ್ಮಿಸಲು ಮನವಿ


Team Udayavani, May 26, 2018, 11:18 AM IST

26-may-6.jpg

ಪುತ್ತೂರು : ಕೋರ್ಟ್‌ ಹಿಲ್‌ನ ಶಿವರಾವ್‌ ಸರ್ಕಲ್‌ ಬಳಿಯ ಅಪಾಯಕಾರಿ ಸ್ಥಿತಿಯ ಚರಂಡಿಯನ್ನು ಸರಿಪಡಿಸಲು
ಹಾಗೂ ಪೊಲೀಸ್‌ ವಸತಿ ಬಳಿಯ ರಸ್ತೆಯ ಅಂಚಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ನಗರಸಭೆ ಪೌರಾಯುಕ್ತರಿಗೆ ಮನವಿ ನೀಡಲಾಗಿದೆ.

ಕೋರ್ಟ್‌ ಹಿಲ್‌ನ ಶಿವರಾವ್‌ ಸರ್ಕಲ್‌ ಬಳಿಯ ಚರಂಡಿ ಮೇಲೆ ಪಾದಚಾರಿಗಳು ನಡೆದಾಡಲು ಹಾಕಿರುವ ಕಾಂಕ್ರೀಟ್‌ ಹಲಗೆಗಳ ಹಾಸು ಎರಡು ವರ್ಷಗಳಿಂದ ಅಪೂರ್ಣವಾಗಿದೆ. ಇದನ್ನು ಸರಿಪಡಿಸುವ ಅಥವಾ ಪೂರ್ಣಗೊಳಿಸುವ ತುರ್ತು ಅಗತ್ಯವಿದೆ. ಚರಂಡಿಯ ನೀರು ಮೇಲಿನಿಂದ ಕೆಳಕ್ಕೆ ಧುಮುಕುವ ಪ್ರದೇಶ. ಇಲ್ಲಿ ಚರಂಡಿ ಅಪೂರ್ಣ ಕಾಮಗಾರಿಯಿಂದ ಪಾದಚಾರಿಗಳು, ಮಕ್ಕಳಿಗೆ ಮರಣಗುಂಡಿಯಂತಾಗಿದೆ. ತತ್‌ಕ್ಷಣಕ್ಕೆ ಈ ಹೊಂಡ ಗಮನಕ್ಕೆ ಬಾರದೇ ಇರುವುದರಿಂದ, ಪಾದಚಾರಿಗಳು ಹೊಂಡಕ್ಕೆ ಬೀಳುವ ಸಾಧ್ಯತೆ ಅಧಿಕ. ಇದು ತುಂಬಾ ಆಳವಾಗಿ ಇರುವುದರಿಂದ ಅಪಾಯ ಹೆಚ್ಚು. ಆದ್ದರಿಂದ ಚರಂಡಿಗೆ ಕಾಂಕ್ರೀಟ್‌ ಹಲಗೆ ಹಾಕುವಂತೆ ಒತ್ತಾಯಿಸಿದ್ದಾರೆ.

ಇದೇ ರಸ್ತೆಯ ಇನ್ನೊಂದು ಬದಿಯಲ್ಲಿರುವ ಪೊಲೀಸ್‌ ವಸತಿ ಬಳಿಯ ರಸ್ತೆ ಸುಮಾರು 15 ಅಡಿ ಎತ್ತರದಲ್ಲಿದೆ. ಈ ಫುಟ್‌ಪಾತ್‌ನಲ್ಲಿ ನಡೆಯುವ ಪಾದಚಾರಿಗಳಿಗೂ ಇದು ಅಪಾಯ. ರಸ್ತೆಯ ಕೆಳಭಾಗ ಆಳವಾಗಿದ್ದು, ಆಯ ತಪ್ಪಿದರೆ 15 ಅಡಿ ಕೆಳಗೆ ಬೀಳುವ ಅಪಾಯವಿದೆ. ಆದ್ದರಿಂದ ಇಲ್ಲಿ ತಡೆಗೋಡೆ ನಿರ್ಮಿಸುವಂತೆ ವಕೀಲ ಸುಧೀರ್‌ ಒತ್ತಾಯಿಸಿದ್ದಾರೆ.

ಈ ಹಿಂದೆಯೂ ಮನವಿ ಮಾಡಲಾಗಿತ್ತು. ಆದರೆ ಪೂರಕ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಮತ್ತೂಮ್ಮೆ ಮನವಿ ನೀಡಲಾಗಿದೆ. ಈ ಎರಡು ಕಾಮಗಾರಿಗಳ ಬಗ್ಗೆ ನಗರಸಭೆ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲು ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಇದರ ನಡುವೆ ಎದುರಾಗುವ ಎಲ್ಲ ಕಷ್ಟ-ನಷ್ಟಗಳಿಗೆ ನಗರಸಭೆ ಪೌರಾಯುಕ್ತರೇ ಜವಾಬ್ದಾರರು ಎಂದು ಎಚ್ಚರಿಸಲಾಗಿದೆ. ಇದನ್ನು ಸಿವಿಲ್‌ ಪ್ರಕ್ರಿಯಾ ಸಂಹಿತೆ 1908ರ ಕಲಂ 80ರ ಅಡಿಯಲ್ಲಿ ನೋಟಿಸ್‌ ಎಂದು ಪರಿಗಣಿಸಬೇಕು ಎಂದು ವಕೀಲ ಸುಧೀರ್‌ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.