ಮೋದಿ ಜೀ, 40 ರೂ.ಗೆ ಪೆಟ್ರೋಲ್ ಸಿಗೋದು ಯಾವಾಗ: ಚಾಂಡಿ ಪ್ರಶ್ನೆ
Team Udayavani, May 26, 2018, 3:43 PM IST
ತಿರುವನಂತಪುರ : ಪ್ರಧಾನಿ ನರೇಂದ್ರ ಮೋದಿ ಸರಕಾರ ನಾಲ್ಕು ವರ್ಷ ಪೂರೈಸಿರುವ ಸಂದರ್ಭದಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರು ಟ್ವಿಟರ್ ಮೂಲಕ ಪ್ರಶ್ನೆಗಳ ಸರಮಾಲೆಯನ್ನು ಪ್ರಧಾನಿಯವರ ಉತ್ತರಕ್ಕಾಗಿ ಎಸೆದಿದ್ದಾರೆ.
“ಪ್ರಧಾನಿ ಮೋದಿಯವರೇ, ಈ ದೇಶದ ಜನರಿಗೆ ನೀವು ಕೊಟ್ಟಿರುವ ಭರವಸೆ ಪ್ರಕಾರ ಲೀಟರ್ಗೆ 40 ರೂ. ದರದಲ್ಲಿ ಪೆಟ್ರೋಲ್ ಸಿಗೋದು ಯಾವಾಗ?’ ಎಂದು ಚಾಂಡಿ ಪ್ರಶ್ನಿಸಿದ್ದಾರೆ.
”ಹಾಗೆಯೇ, ವಿದೇಶದಲ್ಲಿ ಕಪ್ಪು ಹಣ ಕೂಡಿ ಹಾಕಿರುವವರ ಪಟ್ಟಿ ಬಿಡುಗಡೆಯಾಗುವುದು ಯಾವಾಗ ? ನಿಮ್ಮ ಸರಕಾರದ ಅತೀ ಮುಖ್ಯ ಯೋಜನೆಗಳಾಗಿರುವ ಮೇಕ್ ಇನ್ ಇಂಡಿಯಾ, ಸ್ವಚ್ಚ ಭಾರತ ಅಭಿಯಾನ, ಲೋಕಪಾಲ ಮಸೂದೆ, ಭ್ರಷ್ಟಾಚಾರ ವಿರೋಧಿ ಚಳವಳಿಯ ಗತಿ ಈಗೇನಾಗಿದೆ ? ಎಂದು ದಯವಿಟ್ಟು ತಿಳಿಸಿ” ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಚಾಂಡಿ ಪ್ರಧಾನಿ ಮೋದಿ ಅವರನ್ನು ಕೇಳಿದ್ದಾರೆ.
“ನಿಮ್ಮ ಸಂಸದೀಯ ಕ್ಷೇತ್ರವಾಗಿರುವ ವಾರಾಣಸಿ ದೇಶದ ಎರಡನೇ ಅತ್ಯಂತ ಮಾಲಿನ್ಯ ಪೀಡಿತ ನಗರವೆಂದು ಈಚಿನ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ; ಆ ಬಗ್ಗೆ ಏನಂತೀರಿ?’ ಎಂದು ಪ್ರಶ್ನಿಸಿರುವ ಚಾಂಡಿ, ನೋಟು ಅಮಾನ್ಯದಿಂದ ದೇಶಕ್ಕೆ ಏನಾದರೂ ಪ್ರಯೋಜನವಾಗಿದೆಯೇ ಎಂಬುದನ್ನು ತಿಳಿಸಿ” ಎಂದು ಆಗ್ರಹಿಸಿದ್ದಾರೆ.
ಕೇರಳದ ಎರಡು ಬಾರಿಯ ಮುಖ್ಯಮಂತ್ರಿ ಆಗಿದ್ದ ಚಾಂಡಿ ಅವರು ಆಧಾರ್ ಡೇಟಾಬೇಸ್ನಿಂದ ಮಾಹಿತಿ ಸೋರಿಕೆಯಾಗಿರುವುದು ಹೇಗೆ ? ಉತ್ತರಿಸಿ ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ