ಹಬ್ಬದ ವಾತಾವರಣದಲ್ಲಿ ಶಾಲೆ ಆರಂಭೋತ್ಸವ
Team Udayavani, May 26, 2018, 4:44 PM IST
ಕಲಘಟಗಿ: ಹೊಸ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವ ಮೇ 29ರಂದು ನಡೆಯಲಿದ್ದು, ಶಿಕ್ಷಕರು ಹಾಗೂ ಶಾಲಾ ಸಮಿತಿಯವರು ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅದ್ಧೂರಿಯಾಗಿ ಹಬ್ಬದ ವಾತಾವರಣದಲ್ಲಿ ಶಾಲೆಗಳನ್ನು ಪ್ರಾರಂಭಿಸಬೇಕೆಂದು ಡಿಡಿಪಿಐ ಎನ್. ಎಚ್. ನಾಗೂರ ಹೇಳಿದರು.
ಪಟ್ಟಣದ ಜನತಾ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ಜರುಗಿದ ತಾಲೂಕಿನ ಪ್ರಾಥಮಿಕ ಶಾಲಾ ಮುಖ್ಯಾಧ್ಯಾಪಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಶಾಲೆಗಳು ಮೇ 28ರಂದು ಪ್ರಾರಂಭವಾಗಲಿದ್ದು, ಶಾಲಾ ಸ್ವತ್ಛತೆ ಕಾರ್ಯವನ್ನು ಕೈಗೊಂಡು ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಮರುದಿನವೇ ಶಾಲೆಗೆ ಹೊಸದಾಗಿ ದಾಖಲಾಗುವ ಒಂದನೇ ತರಗತಿ ಮಕ್ಕಳನ್ನು ಪ್ರೀತಿ ಪೂರ್ವಕವಾಗಿ ಬರಮಾಡಿಕೊಳ್ಳಬೇಕು ಎಂದರು.
ಗ್ರಾಮದ ಪ್ರಸಿದ್ಧ ದೇವಸ್ಥಾನದಿಂದ ಹೂಮಾಲೆಗಳು, ಅಕ್ಷರ ಹಾಗೂ ಪದಗಳಿಂದ ಸಿಂಗರಿಸಿದ ಚಕ್ಕಡಿಯಲ್ಲಿ ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಕೂಡ್ರಿಸಿ ಊರಿನಲ್ಲಿ ಮೆರವಣಿಗೆ ಮಾಡುವುದು ಅಕ್ಷರಬಂಡಿಯ ಪರಿಕಲ್ಪನೆಯಾಗಿದೆ ಎಂದು ವಿವರಿಸಿದರು.
ಶಿಕ್ಷಣ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿ ಎಸ್.ಎಮ್.ಹುಡೇದಮನಿ ಮಾತನಾಡಿ, ಈಗಾಗಲೇ ಪ್ರಕಟಗೊಂಡ ಹತ್ತನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಕಲಘಟಗಿ ತಾಲೂಕು ರಾಜ್ಯಕ್ಕೆ ಎಂಟನೇ ಸ್ಥಾನ ಹಾಗೂ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿರುವುದಕ್ಕೆ ತಾಲೂಕಿನ ಎಲ್ಲ ಶಿಕ್ಷಕ ವೃಂದ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.
ಕೆ.ಯು. ಶೇಖ್ ಮಾತನಾಡಿ, ಮೇ 16ರಿಂದಲೇ ವಿಶೇಷ ದಾಖಲಾತಿ ಆಂದೋಲನ ಜಾರಿಯಲ್ಲಿದ್ದು ಪ್ರವೇಶಗಳು ಪ್ರಾರಂಭಗೊಂಡಿವೆ. ಶಿಕ್ಷಕ ವೃಂದ ಸರ್ಕಾರಿ ಶಾಲಾ ಸಬಲೀಕರಣಕ್ಕಾಗಿ ಶ್ರಮಿಸಬೇಕೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ. ಮರಿಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾ ಧಿಕಾರಿ ಮಹಾವೀರ ಹಂಚಿನಾಳ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈಶ್ವರ ಜವಳಿ, ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಸಿ. ಹೊಸಮನಿ, ಕಾರ್ಯದರ್ಶಿ ಎಲ್.ಎಫ್. ಪಾಟೀಲ, ಶಿಕ್ಷಣ ಸಂಯೋಜಕ ಚಂದ್ರಶೇಖರ ಅಳಗೋಡಿ ಉಪಸ್ಥಿತರಿದ್ದರು. ಶಿಕ್ಷಕಿ ಅನಿತಾ ಹತ್ತಿ ಪ್ರಾರ್ಥಿಸಿದರು. ಎಮ್.ಪಿ. ದೊಡಮನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ