ಬಾವಿ, ಅಂಗಳಕ್ಕೆ ನುಗ್ಗುತ್ತಿದೆ ಕಲುಷಿತ ನೀರು, ಮಣ್ಣು!


Team Udayavani, May 27, 2018, 6:00 AM IST

1805kpe5.jpg

ಕಾಪು: ಐದಾರು ವರ್ಷಗಳ ಹಿಂದೆ ಯಾವುದೇ ಮುಂದಾಲೋಚನೆ ಇಲ್ಲದೇ ನಿರ್ಮಾಣಗೊಂಡಿದ್ದ ಖಾಸಗಿ ವಸತಿ ಬಡಾವಣೆಯಿಂದಾಗಿ ಕುಂಜೂರಿನಲ್ಲಿ  ಮಳೆನೀರು ಹರಿಯಲು ವ್ಯವಸ್ಥೆಯಿಲ್ಲದೇ ಬಾವಿಗೆ ಸೇರುತ್ತಿದೆ.ಇದರಿಂದ ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ. 
 
ವರ್ಷಂಪ್ರತಿ ಸಮಸ್ಯೆ
ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಕುಂಜೂರು ದುರ್ಗಾ ನಗರಕ್ಕೆ ತಾಗಿ ಕೊಂಡಿರುವ ಸುಮಾರು 12 ಎಕರೆ ಪ್ರದೇಶ ದಲ್ಲಿ ಯಾವುದೇ ಚರಂಡಿ ವ್ಯವಸ್ಥೆಯಿಲ್ಲದೇ, ಸೆಟ್‌ ಬ್ಯಾಕ್‌ನ ವ್ಯವಸ್ಥೆಯಿಲ್ಲದೇ ಖಾಸಗಿ ಬಡಾವಣೆ ನಿರ್ಮಾಣಗೊಂಡಿದೆ. ಇದರಿಂದ ತಗ್ಗು ಪ್ರದೇಶದಲ್ಲಿರುವ ಮೂರ್‍ನಾಲ್ಕು ಮನೆಗಳ ನಿವಾಸಿಗಳು ಮಳೆಗಾಲದಲ್ಲಿ ವರ್ಷಂಪ್ರತಿ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಾರಿ ಮುಂಗಾರು ಮುನ್ನ ಉತ್ತಮ ಮಳೆಯಾಗುತ್ತಿರುವುದರಿಂದ ಸಮಸ್ಯೆ ಉಲ್ಬಣಿಸಿದೆ. 
 
ಅಂಗಳಕ್ಕೆ ಮಣ್ಣು 
ಕುಂಜೂರು ನಿವಾಸಿಗಳಾದ ಶ್ಯಾಮ ದೇವಾಡಿಗ, ಗೋಪಿ ಪೂಜಾರಿ¤, ವನಜ ಶೆಡ್ತಿ, ರಾಮ ದೇವಾಡಿಗ ಎಂಬವರ ಮನೆಯ ಸುತ್ತಲೂ ಖಾಸಗಿ ವಸತಿ ಬಡಾವಣೆಯ ನೀರು ನೇರವಾಗಿ ಹರಿದು ಬರುತ್ತಿದ್ದು, ಕೆಲವೊಮ್ಮೆ ಈ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಂತೆ ಭಾಸವಾಗುತ್ತವೆ. ಮಾತ್ರವಲ್ಲದೇ ಕೆಲವು ಬಾವಿಗಳಿಗೆ ಕೆಸರು ನೀರು ಹರಿದು ಬರುವುದು, ಕೆಲವು ಮನೆಗಳ ಅಂಗಳದಲ್ಲಿ ಕೆಸರು ಮಣ್ಣು ಶೇಖರಣೆ ಯಾಗುವುದು ಸಾಮಾನ್ಯವಾಗಿ ಬಿಟ್ಟಿದೆ.
 
ತಾತ್ಕಾಲಿಕ ವ್ಯವಸ್ಥೆಯೂ ಕೊಚ್ಚಿ ಹೋಯಿತು!:
ಕೆಸರು ನೀರು ಮತ್ತು ಕೆಸರು ಮಣ್ಣು ಬಾವಿ ಮತ್ತು ಅಂಗಳಕ್ಕೆ ಬಂದು ಶೇಖರಣೆಯಾದ ಹಿನ್ನೆಲೆಯಲ್ಲಿ  ಎಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಮತಾ ಶೆಟ್ಟಿ ಅವರು ಸಿಬಂದಿಗಳ ಜೊತೆ ಸೇರಿ ಮೇ 10ರಂದು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಅಂದು ನೀಡಿದ್ದ ಭರವಸೆಯಂತೆ ಗ್ರಾಮ ಪಂಚಾಯತ್‌ ವತಿಯಿಂದ ಲೇಔಟ್‌ ವ್ಯಾಪ್ತಿಯಲ್ಲಿ ತೋಡು ತೆಗೆದು ನೀರು ಹರಿಯುವಂತೆ ಮಾಡಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಿದ್ದಾರಾದರೂ ಮೇ 17ರಂದು ಸುರಿದ ಭಾರೀ ಮಳೆಗೆ ಮತ್ತದೇ ಪರಿಸ್ಥಿತಿ ನಿರ್ಮಾಣವಾಗಿದೆ. 

ತೋಡು ನಿರ್ಮಿಸಿ ನೀರು ಹರಿಯಲು ವ್ಯವಸ್ಥೆ
ಕಲುಷಿತ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹಿಂದೆ ಖಾಸಗಿ ಲೇಔಟ್‌ ನಿರ್ಮಾಣವಾಗುವ ಸಂದರ್ಭ ಮುನ್ನೆಚ್ಚರಿಕೆ ವಹಿಸದ ಕಾರಣ ಹೀಗಾಗಿದೆ. ಜನರ ಬೇಡಿಕೆಗೆ ಅನುಸಾರವಾಗಿ ತೋಡು ನಿರ್ಮಿಸಿ  ನೀರು ಹರಿಯಲು ವ್ಯವಸ್ಥೆ ಮಾಡಲಾಗುವುದು. 
– ಮಮತಾ ಶೆಟ್ಟಿ ,ಎಲ್ಲೂರು ಗ್ರಾ.ಪಂ. ಪಿಡಿಒ

ಕ್ರಿಯಾ ಯೋಜನೆಗೆ ನೀತಿ ಸಂಹಿತೆ ಅಡ್ಡಿ
ಖಾಸಗಿ ಬಡಾವಣೆಯಿಂದ ಹರಿದು ಬರುವ ಮಳೆ ನೀರು ಸರಾಗವಾಗಿ ಹರಿದು ಹೋಗಲೆಂದು ಕಳೆದ ವರ್ಷ ಕಾಂಕ್ರೀಟ್‌ ತೋಡು ನಿರ್ಮಿಸಲಾಗಿದೆ. ಆದರೆ ಅದು ಕೂಡ  ಮಳೆಗೆ ಕೊಚ್ಚಿ ಹೋಗುವ ಭೀತಿ ಎದುರಾಗಿದೆ. ಲೇಔಟ್‌ನ ಮಧ್ಯದಲ್ಲಿ ಕಾಂಕ್ರೀಟ್‌ ಚರಂಡಿ ನಿರ್ಮಿಸಬೇಕಿದೆ. ಆದರೆ ಅದಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆ ಸಿದ್ಧ ಪಡಿಸಲು ನೀತಿ ಸಂಹಿತೆ ಅಡ್ಡಿಯಾಗಿದೆ. ಮೇಲಧಿಕಾರಿಗಳ ಗಮನಕ್ಕೆ ತಂದು ತುರ್ತಾಗಿ ಸಮಸ್ಯೆ ಬಗೆ ಹರಿಸಲಿದ್ದೇವೆ. 
– ಸತೀಶ್‌ ಶೆಟ್ಟಿ ಗುಡ್ಡೆಚ್ಚಿ ,ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.