ಶಿರೂರು ಸಂತೆಯಲ್ಲಿ ಮಕ್ಕಳಿಂದ ತರಕಾರಿ ಮಾರಾಟ! 


Team Udayavani, May 27, 2018, 6:00 AM IST

2405bdre4a.jpg

ಬೈಂದೂರು:  ಪ್ರತೀ  ಗುರುವಾರ ಶಿರೂರು ಮಾರ್ಕೆಟ್‌ ವಠಾರದಲ್ಲಿ ವಾರದ ಸಂತೆ ನಡೆಯುತ್ತಿದೆ.  ಉ.ಕ.  ಹಾಗೂ ಮಲೆನಾಡು ಭಾಗದ ವ್ಯಾಪಾರಿಗಳು ಹೆಚ್ಚಾಗಿ ಆಗಮಿಸುವ ಈ ವಾರದ ಸಂತೆ ಈ ಬಾರಿ ಮಾತ್ರ ಭಿನ್ನವಾಗಿತ್ತು. ಕಾರಣವೆಂದರೆ ವ್ಯಾಪಾರಿಗಳ ಸಾಲಿನಲ್ಲಿ  ಪುಟಾಣಿ ಮಕ್ಕಳು ಸಹ ತರಕಾರಿ, ಇತರ ವಸ್ತುಗಳನ್ನು ಮಾರುತ್ತಿದ್ದರು. ಆಗಷ್ಟೆ ಪ್ರಾಥಮಿಕ ಹಂತದಲ್ಲಿರುವ ವಿದ್ಯಾರ್ಥಿಗಳ ವ್ಯಾವಹಾರಿಕ ಕೌಶಲವನ್ನು ನೋಡಿ ಪಾಲಕರು ಮನಸ್ಸಿನಲ್ಲಿ ನಗುತ್ತಿದ್ದರೆ ಸಾರ್ವಜನಿಕರು ಭೇಷ್‌ ಎನ್ನುತ್ತಿದ್ದರು.

ಜೇಸಿಐ ಶಿರೂರು ವತಿಯಿಂದ ಈ ಕಾರ್ಯಕ್ರಮ ನಡೆಸಲಾಗಿತ್ತು. ಮುಂಗಾರು ಸಂಭ್ರಮ ಹೆಸರಿನ ಈ ಪ್ರಾಯೋಗಿಕ ಕಾರ್ಯಕ್ರಮದಲ್ಲಿ  ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ತರಕಾರಿ, ಸೊಪ್ಪು, ಒಣಮೀನು, ಹಣ್ಣು, ಗೃಹೋಪಯೋಗಿ ವಸ್ತುಗಳು ಗ್ರಾಮೀಣ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಕೆಲವು ಮಕ್ಕಳು ವಿಶೇಷ ಆಫರ್‌ಗಳಿಂದ ನಿತ್ಯ ವ್ಯಾಪಾರಿಗಳಿಗೆ ಪೈಪೋಟಿ ನೀಡಿದ್ದರು. ವಿಶೇಷವಾಗಿ ಆರ್ಯುರ್ವೇದ ಹಾಗೂ ಗಿಡಮೂಲಿಕೆ ಸೇರಿದಂತೆ ಹಳ್ಳಿ ತಿನಿಸು ಹಾಗೂ ಗ್ರಾಮೀಣ ಭಾಗದ ವಸ್ತುಗಳ ಮಾರಾಟ ಆಕರ್ಷಣೆಯಾಗಿತ್ತು. ಅತೀ ಹೆಚ್ಚು ಮಾರಾಟ ಮಾಡಿ ಆದಾಯ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಸಹ ಘೋಷಿಸಲಾಗಿತ್ತು. 

ಹೊರಜಗತ್ತಿನ ಅರಿವು ಅಗತ್ಯ
ಶಾಲೆಯಲ್ಲಿ ಪಠ್ಯಕ್ಕೆ ಪೂರಕ ಶಿಕ್ಷಣ ನೀಡಲಾಗುತ್ತಿದೆ. ಹೊರಜಗತ್ತಿನ ಅರಿವು ಮಕ್ಕಳಿಗೆ ಅಗತ್ಯ. ವ್ಯಾವಹಾರಿಕ ಕೌಶಲ ಮತ್ತು ಸಾರ್ವಜನಿಕ ಸಂಪರ್ಕವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
– ಪಾಂಡುರಂಗ ಅಳ್ವೆಗದ್ದೆ,
ಶಿರೂರು ಜೇಸಿಐ ಅಧ್ಯಕ್ಷರು 

ವ್ಯವಹಾರ ಕೌಶಲ ಜ್ಞಾನ ಹೆಚ್ಚಳ
ಇಂತಹ ಕಾರ್ಯಕ್ರಮಗಳಿಂದ ಮಕ್ಕಳಿಗೆ ಸಾಕಷ್ಟು ಹೊರ ಪ್ರಪಂಚದ ಅನುಭವವಾಗುತ್ತದೆ. ಜನರೊಂದಿಗೆ ಹೇಗೆ ಬೆರೆಯಬೇಕೆಂಬ ಜ್ಞಾನ ಸಿಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವ್ಯವಹಾರ ಕೌಶಲ ಜ್ಞಾನ ದೊರೆತಂತಾಗುತ್ತದೆ. 
– ನಾಗರತ್ನಾ ರಾಜೇಶ್‌ ಆಚಾರಿ, ಹೆತ್ತವರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.