ಕುಂದಾಪುರ ರಿಕ್ಷಾ ಚಾಲಕನಿಂದ 1 ರೂ.ಬಾಡಿಗೆ


Team Udayavani, May 27, 2018, 6:00 AM IST

2605kdpp6.jpg

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 4 ವರ್ಷ ಪೂರೈಸಿದ್ದು 5ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೋದಿ ಅಭಿಮಾನಿ ರಿಕ್ಷಾಚಾಲಕರೊಬ್ಬರು ವರ್ಷಾಚರಣೆಯನ್ನು ಕೇವಲ 1 ರೂ. ಬಾಡಿಗೆ ಪಡೆಯುವ ಮೂಲಕ ಆಚರಿಸಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಕುಂದಾಪುರ ವಿನಾಯಕ ಚಿತ್ರಮಂದಿರ ಬಳಿಯ ರಿಕ್ಷಾ ನಿಲ್ದಾಣದಲ್ಲಿರುವ ಅಂಕದಕಟ್ಟೆಯ ನಿವಾಸಿ ಸತೀಶ್‌ ಪ್ರಭು ಅವರು 5 ಕಿ.ಮೀ. ವರೆಗೆ ಗ್ರಾಹಕರಿಂದ ಕೇವಲ 1 ರೂ. ಮಾತ್ರ ಬಾಡಿಗೆ ಪಡೆಯುತ್ತಿದ್ದಾರೆ. ಅವರ ಈ ಸೇವೆ ಐದು ದಿನಗಳ ಕಾಲ ಇರಲಿದೆ.

ಸತತ 4ನೇ ವರ್ಷ 
ಪ್ರಧಾನಿಯಾಗಿ ಮೋದಿ ಅವರು ಒಂದು ವರ್ಷ ಪೂರೈಸಿದಾಗ 2 ದಿನ ಮಾತ್ರ ಈ ಸೇವೆ ನೀಡಿದರೆ, 2ನೇ ವರ್ಷ 3 ದಿನ, 3ನೇ ವರ್ಷ 4, 4ನೇ ವರ್ಷಕ್ಕೆ 1 ರೂ. ಬಾಡಿಗೆ ಸೇವೆಯನ್ನು 5 ದಿನಗಳ ಕಾಲ ನೀಡಲಿದ್ದಾರೆ. ಪ್ರತಿ ವರ್ಷದಂತೆ ಈವರೆಗೆ ಸುಮಾರು 500 ಕ್ಕೂ ಹೆಚ್ಚು ಮಂದಿಗೆ ಇದೇ ರೀತಿ 1 ರೂ. ಮಾತ್ರ ಬಾಡಿಗೆ ಪಡೆದಿದ್ದೇನೆ. 4ನೇ ವರ್ಷಾಚರಣೆ ಹಿನ್ನೆಲೆಯಲ್ಲಿ  ಈವರೆಗೆ 15 ಮಂದಿಗೆ 5 ಕಿ.ಮೀ. ವರೆಗೆ 1 ರೂ. ಬಾಡಿಗೆ ಪಡೆದಿದ್ದೇನೆ ಎಂದಿದ್ದಾರೆ.  

ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಿ
ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿದಂತೆ, 60 ವರ್ಷ ದಾಟಿದ ರಿಕ್ಷಾ ಚಾಲಕರಿಗೂ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿದರೆ ಸಾಕಷ್ಟು ಅನುಕೂಲವಾಗಲಿದೆ. ಅದಲ್ಲದೆ ಹಿಂದಿನವರಿಗೆ ವಿದ್ಯಾಭ್ಯಾಸವಿಲ್ಲದ್ದರೂ, ರಿಕ್ಷಾ ಚಾಲನೆ, ಚಾಲನಾ ನಿಯಮ ಎಲ್ಲ ಗೊತ್ತಿದ್ದರೂ, 10ನೇ ತರಗತಿ ಪಾಸ್‌ ಆಗಿಲ್ಲವೆಂದು ಪರವಾನಿಗೆ ನೀಡದಿರುವುದು ಸರಿಯಲ್ಲ ಎಂದವರು ಹೇಳಿದರು.

ಒಳ್ಳೆಯ ಕಾರ್ಯಆಗಲಿ
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿ, ಜನರಿಗೆ ಈ ಸೇವೆ ನೀಡುತ್ತಿದ್ದೇನೆ. ಅವರು ನನಗೆ ಮಾತ್ರವಲ್ಲ, ದೇಶದ ಹೆಚ್ಚಿನ ಜನರಿಗೆ ಇಷ್ಟವಾಗಿದ್ದಾರೆ. ಅವರಂತಹ ನಾಯಕರ ಅಗತ್ಯತೆ ನಮ್ಮ ದೇಶಕ್ಕಿದೆ. ಇನ್ನು ಒಂದು ವರ್ಷ ಅವರ ಆಡಳಿತಾವಧಿಯಿದ್ದು, ದೇಶಕ್ಕೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವಂತಾಗಲಿ.
– ಸತೀಶ್‌ ಪ್ರಭು, ರಿಕ್ಷಾ ಚಾಲಕ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.