ಕೊನೆಗೂ ಪೂರ್ಣಗೊಳ್ಳುತ್ತಿದೆ ಕೋರ್ಟ್‌ರಸ್ತೆ ಕಾಮಗಾರಿ


Team Udayavani, May 27, 2018, 10:49 AM IST

27-may-3.jpg

ಮಹಾನಗರ: ಕಾಮಗಾರಿ ನನೆಗುದಿಗೆ ಬಿದ್ದು ನಿಧಾನಗತಿಯಲ್ಲಿ ಸಾಗಿದ ಒಟ್ಟು 11 ಕೋ.ರೂ. ಅನುದಾನದ ನಗರದ ಕೋರ್ಟ್‌ ರಸ್ತೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿಸಿದ್ದು, ಮುಂದಿನ 20 ದಿನಗಳೊಳಗೆ ರಸ್ತೆಯು ಸಂಚಾರಕ್ಕೆ ಮುಕ್ತ ಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡ ಬಳಿಕ ಬಾಕಿ ಉಳಿದಿರುವ ಒಳ ಚರಂಡಿ ಹಾಗೂ ತಡೆಗೋಡೆ ಕಾಮಗಾರಿ ಮುಂದುವರಿಯಲಿದೆ.

2015ರ ಜೂನ್‌ 6ರಂದು ಕಾಮಗಾರಿಗೆ ಶಿಲಾನ್ಯಾಸ ನಡೆದಿದ್ದರೂ ತಡೆಗೋಡೆ, ಹೊಸ ವಿಧಾನದ ಸಾಯಿಲ್‌ ನೈಲಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಿದ್ದವು. ಜತೆಗೆ ಸಾಯಿಲ್‌ ನೈಲಿಂಗ್‌ ತಂತ್ರಜ್ಞರಾದ ಐಐಟಿಯ ನಿವೃತ್ತ ವಿಜ್ಞಾನಿ ಪ್ರೊ| ಬಿ.ಆರ್‌. ಶ್ರೀನಿವಾಸ ಮೂರ್ತಿ ಅವರು ಕಾಮಗಾರಿಯ ವಿನ್ಯಾಸ ಬದಲಾಯಿಸಿದ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು ಎಂದು
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಭಿಪ್ರಾಯಿಸುತ್ತಾರೆ.

ಹೊಸ ವಿಧಾನದ ಸಾಯಿಲ್‌ ನೈಲಿಂಗ್‌ ಕಾಮಗಾರಿ ನಡೆಸುವವರು ಸ್ಥಳೀಯವಾಗಿ ಯಾರಿಲ್ಲ. ಹೀಗಾಗಿ ಆಂಧ್ರದ ಗುತ್ತಿಗೆ ಸಂಸ್ಥೆಯೊಂದು ಈ ಕಾಮಗಾರಿ ನಡೆಸಿದೆ. ಟೆಂಡರ್‌ ಅವಧಿಯ ಪ್ರಕಾರ ಕಾಮಗಾರಿ ಕಳೆದ ಫೆಬ್ರವರಿಯಲ್ಲಿ ಮುಗಿಯಬೇಕಿತ್ತು. ಆದರೆ ಇದು ಅತ್ಯಂತ ಕ್ಲಿಷ್ಟವಾದ ಕಾಮಗಾರಿಯಾದ ಹಿನ್ನೆಲೆಯಲ್ಲಿ ಕೊಂಚ ವಿಳಂಬವಾಗಿದೆ.

310 ಮೀ.ಉದ್ದದ ರಸ್ತೆ
ನಗರದ ಕರಂಗಲ್ಪಾಡಿಯಿಂದ ನ್ಯಾಯಾಲಯ ಸಂಕೀರ್ಣದವರೆಗಿನ 310 ಮೀ. ಉದ್ದದ ಕಾಂಕ್ರೀಟ್‌ ರಸ್ತೆಯ ಕಾಮಗಾರಿ ಇದೀಗ ಬಹುತೇಕ ಪೂರ್ಣಗೊಂಡಿದ್ದು, ಕರಂಗಲ್ಪಾಡಿ ಬಳಿ ಮೋರಿ ನಿರ್ಮಿಸಿ ಮುಖ್ಯರಸ್ತೆಗೆ ಜೋಡಿಸುವ ಕಾಮಗಾರಿ ನಡೆಯುತ್ತಿದೆ. ನ್ಯಾಯಾಲಯದ ಬಳಿ ತಿರುವಿನಲ್ಲಿ ಸುಮಾರು 5 ಮೀ.ನಷ್ಟು ರಸ್ತೆಗೆ ಕಾಂಕ್ರೀಟ್‌ ಹಾಕಲು ಬಾಕಿಯಿದ್ದು, ಅಲ್ಲಿ ರಸ್ತೆಯನ್ನು ತಗ್ಗುಗೊಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲಿ ಅಲ್ಲಿಗೆ ಕಾಂಕ್ರೀಟ್‌ ಹಾಕಿ ಕ್ಯೂರಿಂಗ್‌ ಕಾರ್ಯ ಪೂರ್ಣಗೊಳ್ಳಲು ಸುಮಾರು 15ರಿಂದ 20 ದಿನಗಳು ಬೇಕಾಗಬಹುದು. ಆದಾದ ಬಳಿಕ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು
ಎಂಜಿನಿಯರ್‌ ವಿವರಿಸುತ್ತಾರೆ.

8 ಪ್ಲಸ್‌ 3 ಕೋ.ರೂ.ಅನುದಾನ
ಇಲ್ಲಿನ ಒಟ್ಟು ಕಾಮಗಾರಿಗಳಿಗೆ 11 ಕೋ. ರೂ.ಮಂಜೂರುಗೊಂಡಿದ್ದು, 8 ಕೋ.ರೂ. ಲೋಕೋಪಯೋಗಿ ಇಲಾಖೆ ಹಾಗೂ 3 ಕೋ.ರೂ.ಸ್ಥಳೀಯ ಶಾಸಕರ ನಿಧಿಯಿಂದ ಬಿಡುಗಡೆಗೊಂಡಿತ್ತು. ಇದರಲ್ಲಿ 310 ಮೀ.ಉದ್ದದ ರಸ್ತೆ, 190 ಮೀ.ಉದ್ದದ ತಡೆಗೋಡೆ ಹಾಗೂ ಸಾಯಿಲ್‌ ನೈಲಿಂಗ್‌ ಕಾಮಗಾರಿಗಳು ನಡೆದಿವೆ. ಜತೆಗೆ ಮುಂದೆ ಒಳಚರಂಡಿ, ಫ‌ುಟ್‌ಪಾತ್‌ ಕಾಮಗಾರಿಗಳು ನಡೆಯಬೇಕಿದೆ. ಇದರಲ್ಲಿ ಕಾಂಕ್ರೀಟ್‌ ಕಾಮಗಾರಿ ಕೇವಲ 4 ಕೋ.ರೂ.ಗಳಲ್ಲಿ ನಡೆದಿದೆ. ಹಿಂ ದೆ ಕೋರ್ಟ್‌ ರಸ್ತೆಯು 4.5 ಮೀ. ಅಗಲ ಹೊಂದಿತ್ತು. ಆದರೆ ಈಗ 9 ಮೀ.ಅಗಲದ ರಸ್ತೆ ಹಾಗೂ ಇಕ್ಕೆಲಗಳಲ್ಲಿ 3 ಮೀ.ಅಗಲದ ಫ‌ುಟ್‌ಪಾತ್‌ ಸೇರಿ ರಸ್ತೆಯ ಒಟ್ಟು ಅಗಲ 12 ಮೀ.ನಷ್ಟಾಗಿದೆ. 

ಶಾಸಕರ ತರಾಟೆ!
2015ರ ಜೂನ್‌ 6ರಂದು ಅಂದಿನ ಲೋಕೋಪಯೋಗಿ ಇಲಾಖಾ ಸಚಿವರ ನೇತೃತ್ವದಲ್ಲಿ ಕಾಮಗಾರಿಗೆ ಶಿಲಾನ್ಯಾಸ
ನಡೆದಿದ್ದರೂ ಕಾಮಗಾರಿ ವೇಗ ಪಡೆದುಕೊಂಡಿರಲಿಲ್ಲ. ಜತೆಗೆ ಸಾರ್ವಜನಿಕರಿಂದಲೂ ಅನೇಕ ದೂರುಗಳು ಬಂದಿದ್ದವು. ಹೀಗಾಗಿ ಹಿಂದೊಮ್ಮೆ ನಿಕಟಪೂರ್ವ ಶಾಸಕ ಜೆ.ಆರ್‌.ಲೋಬೊ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿತ್ತು.  

ಶೀಘ್ರ ಸಂಚಾರಕ್ಕೆ ಮುಕ್ತ
ಕೋರ್ಟ್‌ ರಸ್ತೆಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ನ್ಯಾಯಾಲಯದ ಬಳಿಯ ತಿರುವಿನಲ್ಲಿ 5 ಮೀ.ನಷ್ಟು ಕಾಂಕ್ರೀಟ್‌ ಹಾಕಲು ಬಾಕಿ ಇದೆ. ಮುಂದಿನ 20 ದಿನಗಳಲ್ಲಿ ಈ ಕಾಮಗಾರಿ ಮುಗಿದ ಬಳಿಕ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಬಳಿಕ ಡ್ರೈನೇಜ್‌ ಕಾಮಗಾರಿ ನಡೆಯಲಿದೆ. ಇಲ್ಲಿ ಹೊಸ ವಿಧಾನದ ಸಾಯಿಲ್‌ ನೈಲಿಂಗ್‌ ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲಸಗಳು ಕೊಂಚ ನಿಧಾನಗತಿಯಲ್ಲಿ ಸಾಗಿದ್ದವು. ಟೆಂಡರ್‌ ಪ್ರಕಾರ ಫೆಬ್ರವರಿ-ಮಾರ್ಚ್‌ಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು.
ರವಿಕುಮಾರ್‌
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌,
ಲೋಕೋಪಯೋಗಿ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.