ನಿಫಾ ಆತಂಕ: ಮರದಡಿ ರಾಶಿ ಹಣ್ಣುಗಳಿದ್ದರೂ ಯಾರಿಗೂ ಬೇಡ!


Team Udayavani, May 27, 2018, 12:16 PM IST

27-may-8.jpg

ಪುತ್ತೂರು: ನೆರೆಯ ಕೇರಳ ರಾಜ್ಯದಲ್ಲಿ ಬಾವಲಿ ಜ್ವರದ (ನಿಫಾ ವೈರಸ್‌) ತೀವ್ರತೆ ನಮ್ಮ ರಾಜ್ಯದಲ್ಲೂ ಭಯ ಹುಟ್ಟಿಸಿದೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಜಾಗೃತಿ ಸಂದೇಶಗಳನ್ನು ನೋಡಿರುವ ಜನತೆ, ಬಾವಲಿ ತಿನ್ನಬಹುದಾದ ಹಣ್ಣುಗಳಿಂದಲೂ ದೂರ ಸರಿಯುತ್ತಿದ್ದಾರೆ.

ಒಂದೆಡೆ ಮಾವು, ಹಲಸು, ಚಿಕ್ಕು, ಬಾಳೆ ಹಣ್ಣು, ಗೇರುಹಣ್ಣುಗಳ ಫಲ ನೀಡುವ ಸಮಯವಾದರೆ ಮತ್ತೂಂದೆಡೆ ಶಾಲಾ – ಕಾಲೇಜು ಮಕ್ಕಳಿಗೆ ರಜೆಯ ಅವಧಿ. ಬೇಸಿಗೆ ರಜೆಯ ಅವಧಿಯಲ್ಲಿ ಮನೆಯಲ್ಲಿ ಉಳಿದಿರುವ ಮಕ್ಕಳು ಪ್ರಕೃತಿಯಲ್ಲಿ ಸಿಗುವ ಹಣ್ಣುಗಳನ್ನು ತಿನ್ನುತ್ತಾ ದಿನ ಕಳೆಯುವುದು ಮಾಮೂಲು. ಆದರೆ ಈ ಬಾರಿ ಆ ಖುಷಿ ಸಾಧ್ಯವಾಗುತ್ತಿಲ್ಲ. ಪೋಷಕರು ಮಕ್ಕಳಿಗೆ ಹಣ್ಣುಗಳನ್ನು ತಿನ್ನದಂತೆ ಕಡಿವಾಣ ಹಾಕಿದ್ದಾರೆ.

ಮರದ ಕೆಳಗೆ ರಾಶಿ
ಮೇ, ಜೂನ್‌ ತಿಂಗಳಲ್ಲಿ ಸಾಮಾನ್ಯವಾಗಿ ಮುಂಜಾನೆಯ ಹೊತ್ತು ಮಾವಿನ ಮರದ ಕೆಳಗೆ ಗಾಳಿಗೆ ಬಿದ್ದ ಮಾವುಗಳನ್ನು ಹೆಕ್ಕಲು ಜನರಲ್ಲಿ ಸ್ಪರ್ಧೆ ಇರುತ್ತಿತ್ತು. ಆದರೆ ಈ ಬಾರಿ ಮಾವಿನ ಮರದ ಕೆಳಗೆ ಹಣ್ಣುಗಳ ರಾಶಿಯೇ ಇದ್ದರೂ ಯಾರಿಗೂ ಬೇಡ. ಗಾಳಿಗಿಂತಲೂ ಬಾವಲಿ ಹಣ್ಣನ್ನು ಬೀಳಿಸಿದ್ದರೆ ಎಂಬ ಭಯ ಇದಕ್ಕೆ ಪ್ರಮುಖ ಕಾರಣ. ಹಲಸಿನ ಹಣ್ಣು, ಚಿಕ್ಕು, ಬಾಳೆಹಣ್ಣುಗಳ ಸ್ಥಿತಿಯೂ ಇದೇ ಆಗಿದೆ.

ಕೋಳಿಗೆ ವೈರಸ್‌ ಬಂದಿಲ್ಲ ಬಾವಲಿ ಮೂಲಕ ವೈರಸ್‌ ಹರಡಿ ಸಾವು ನೋವಿನ ಜ್ವರ ಬರುತ್ತಿದೆ ಎನ್ನುವ ಸಂದೇಶಗಳು ಒಂದು ಹಂತಕ್ಕೆ ಹರಡಿ ತಣ್ಣಗಾಗುತ್ತಿದ್ದಂತೆ ಫಾರಂ ಕೋಳಿಗಳ ಮೂಲಕವೂ ಜ್ವರ ಹರಡುತ್ತದೆ ಎನ್ನುವ ಸಾಮಾಜಿಕ ಜಾಲತಾಣದ ಸಂದೇಶ ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕವನ್ನು ಮೂಡಿಸಿದೆ. ಆದರೆ ಇಂತಹ ಯಾವುದೇ ಸಾಧ್ಯತೆಗಳು ಸಂಶೋಧನೆಯ ಸಂದರ್ಭದಲ್ಲಿ ಕಂಡುಬಂದಿಲ್ಲ ಎನ್ನುತ್ತಾರೆ ತಜ್ಞರು.

‘ಬಾವೊಲಿ ಈ ಆವೊಲಿ..!’
ತನ್ನ ಪಾಡಿಗೆ ತಾನಿದ್ದ ಹಾರುವ ಸಸ್ತನಿ ಬಾವಲಿ ಕುರಿತಾಗಿ ಕೆಲವೇ ದಿನಗಳ ಅವಧಿಯಲ್ಲಿ ಜನರ ದೃಷ್ಟಿಕೋನವೇ ಬದಲಾಗಿದೆ. ಬಾವಲಿಯ  ಕುರಿತು ಸಿಟ್ಟಿನ, ಸ್ವಾರಸ್ಯದ ಬರಹಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಬಾವೊಲಿ ಈ ಆವೊಲಿ..!’, ‘ತಲೆ ಕೆಳಗೆ ನೇತಾಡುವ ಬಾವಲಿ ಕೂಡ ಎಲ್ಲರನ್ನೂ ಒಮ್ಮೆ ಮೇಲೆ ಕೆಳಗೆ ಮಾಡಬಲ್ಲದು’ ಎನ್ನುವಂತಹ ಬರಹಗಳು ಮನರಂಜನೆಯ ಜತೆಗೆ ಜಾಗೃತಿಯನ್ನೂ ಮೂಡಿಸುತ್ತವೆ.

ಕೊಯ್ದು ಹಣ್ಣು ಮಾಡಿ ತಿನ್ನಬಹುದು
ನಿಫಾ ವೈರಸ್‌ ಜ್ವರ ಕೇರಳ ರಾಜ್ಯದ ಒಂದು ಪ್ರದೇಶಕ್ಕೆ ಸಂಬಂಧಪಟ್ಟಂತೆ ಮಾತ್ರ ಬಾಧಿಸಿದೆ. ಈ ಕುರಿತು ಹೆಚ್ಚು ಭಯ ಬೇಡ. ಇದು ನಿಫಾ ವೈರಸ್‌ ಅಥವಾ ಬಾವಲಿಯಿಂದ ಬರುವುದು ಅಲ್ಲ ಎನ್ನುವ ಸಂಶೋಧನ ಹೇಳಿಕೆಗಳೂ ಬರುತ್ತಿವೆ. ಆದರೆ ಮಕ್ಕಳು ಬಿದ್ದ ಹಣ್ಣುಗಳನ್ನು ತಿನ್ನದೇ ಇರುವುದು ಉತ್ತಮ. ಮರದಿಂದ ಕೊಯ್ದು ಹಣ್ಣು ಮಾಡಿ ತಿನ್ನಬಹುದು ಅಥವಾ ಅಂಗಡಿಯಿಂದ ಪಡೆದುಕೊಳ್ಳಬಹುದು. ಮಳೆ ಬಂದಾಗ ಹಣ್ಣುಗಳಲ್ಲಿ ಬೇರೆ ರೀತಿಯ ಕ್ರಿಮಿಗಳೂ ಇರುವ ಸಾಧ್ಯತೆ ಇರುವುದರಿಂದ ಮರದಿಂದ ಬಿದ್ದ ಹಣ್ಣುಗಳನ್ನು ತಿನ್ನುವುದುಬೇಡ.
– ಡಾ| ಶ್ರೀಕಾಂತ್‌ ರಾವ್‌,
ಮಕ್ಕಳ ತಜ್ಞರು, ಪುತ್ತೂರು

 ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.