ತೊಡಿಕಾನ: ಗಡಿ ಭಾಗದಲ್ಲಿ ಹೆಚ್ಚಿದ ಕಾಡಾನೆ ಸಂಚಾರ


Team Udayavani, May 27, 2018, 12:45 PM IST

27-may-9.jpg

ತೊಡಿಕಾನ: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗಡಿಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು, ಗಡಿಭಾಗದ ಜನರು ಆತಂಕಗೊಂಡಿದ್ದಾರೆ.

ಕಾಡಾನೆ ದಾಳಿಯಿಂದ ಸುಳ್ಯ ತಾಲೂಕಿನ ರೈತರು ಸಂಕಷ್ಟಗೊಳಗಾಗಿದ್ದಾರೆ. ಆನೆ ದಾಳಿಯಿಂದ ಹೈರಾಣಾಗಿರುವ ತಾಲೂಕಿನ ಅಜ್ಜಾವರ, ಮಂಡೆಕೋಲು, ತೊಡಿಕಾನ, ಕೊಲ್ಲಮೊಗ್ರ ಗ್ರಾಮದ ರೈತರಿಗೆ ಸಂಕಟದಿಂದ ಪಾರಾಗುವ ಯಾವುದೇ ದಾರಿ ಕಾಣುತ್ತಿಲ್ಲ. ಕಾಡಾನೆ ದಾಳಿ ರೈತರ ಬದುಕನ್ನೆ ಕಸಿದುಕೊಳ್ಳುತ್ತಿರುವ ಸಂದರ್ಭದಲ್ಲಿ ಇಲ್ಲಿಯವರೆಗೆ ಅರಣ್ಯ ಇಲಾಖೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂಬುದು ಕೃಷಿಕರ ಅಳಲು.

ಪ್ರತಿ ವರ್ಷ ಅಜ್ಜಾವರ, ಮಂಡೆಕೋಲು, ತೊಡಿಕಾನ ಗ್ರಾಮಗಳ ರೈತರ ಕೃಷಿ ತೋಟಗಳಿಗೆ ಕಾಡಾನೆಗಳು ನಿರಂತರ ದಾಳಿ ಇಡುತ್ತಿದ್ದು, ತೆಂಗಿನ ಮರ, ಅಡಿಕೆ ಮರ ಹಾಗೂ ಬಾಳೆ ಕೃಷಿಗಳನ್ನು ನಾಶ ಮಾಡುತ್ತಿವೆ.

ಓಡಿಸಲು ಪ್ರಯತ್ನ
ಮೂರು – ನಾಲ್ಕು ವರ್ಷಗಳಿಂದ ಈ ಭಾಗಗಳಲ್ಲಿ ಕಾಡಾನೆಗಳು ನಿರಂತರವಾಗಿ ದಾಳಿ ಇಡುತ್ತಿವೆ. ಪರಿಣಾಮವಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಆಗಮಿಸಿ, ಆನೆಗಳನ್ನು ಕಾಡಿಗೆ ಓಡಿಸಲು ಪ್ರಯತ್ನ ಮಾಡುತ್ತಾರೆ. ಅವರ ಸಾಂಪ್ರದಾಯಿಕ ವಿಧಾನಗಳಿಗೆ ಆನೆಗಳೂ ಸುಲಭವಾಗಿ ಜಗ್ಗುವುದಿಲ್ಲ. ಆನೆ ದಾಳಿ ಯಿಂದ ಬೆಳೆಹಾನಿ ಅನುಭವಿಸಿದ ರೈತರ ನಷ್ಟಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ಶಾಶ್ವತ ಪರಿಹಾರ ಸಿಗಲಿ
ಈ ಭಾಗದಲ್ಲಿ ನಿರಂತರ ಆನೆ ದಾಳಿಯಿಂದ ಕೃಷಿ ನಾಶಗೊಂಡಿದ್ದು, ಇಲ್ಲಿನ ಜನ ಬೇಸತ್ತಿದ್ದಾರೆ. ಆನೆಗಳನ್ನು ಓಡಿಸುವ ಯಾವ ಪ್ರಯತ್ನವೂ ಕೈಗೂಡುತ್ತಿಲ್ಲ. ಅರಣ್ಯ ಇಲಾಖೆಯೂ ಆನೆಗಳನ್ನು ಓಡಿಸಲು ಆಗದೆ ಅಸಹಾಯಕವಾಗಿದೆ. ಕೃಷಿ ತೋಟ ಗಳಿಗೆ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಇಂದು ನಿನ್ನೆಯ ಸಮಸ್ಯೆ ಯಲ್ಲ. ಈ ಭಾಗದ ಗ್ರಾಮಗಳ ಜನರಿಗೆ ಇದು ಶಾಶ್ವತ ಸಮಸ್ಯೆಯಾಗಿ ಉಳಿದುಕೊಂಡಿದೆ. ರಾತ್ರಿ ಸಮಯದಲ್ಲಿ ಗ್ರಾಮಸ್ಥರು ನೆಮ್ಮದಿಯಿಂದ ನಿದ್ದೆ ಮಾಡಲೂ ಆಗದ ಸ್ಥಿತಿ.  

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.