ಬಿರುಗಾಳಿ ಸಹಿತ ಆಲಿಕಲ್ಲು
Team Udayavani, May 27, 2018, 1:17 PM IST
ಬೀದರ: ನಗರ ಸೇರಿದಂತೆ ತಾಲೂಕಿನಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ವಾರದಿಂದ ಉರಿ ಬಿಸಿಲಿನಿಂದ ಕಾದು ಬೆಂಡಾಗಿದ್ದ ಇಳೆ ತಂಪಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು ಸಹಿತ ಮಳೆಯಿಂದ ಮರಗಳು ಧರೆಗಿಳಿದಿದ್ದರೆ,
ಸಿಡಿಲಿಗೆ ಒಬ್ಬ ವ್ಯಕ್ತಿ ಹಾಗೂ ಎರಡು ಜಾನುವಾರುಗಳು ಮೃತಪಟ್ಟಿವೆ.
ಬೇಸಿಗೆ ಅವಧಿ ಮುಗಿಯುವ ಈ ದಿನಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿತ್ತು. ಮಳೆ ಆರ್ಭಟ ಭೂಮಿಯನ್ನು ತಂಪಾಗಿಸಿದೆ. ಮಧ್ಯಾಹ್ನ ಬೀದರ ಮತ್ತು ಔರಾದ ತಾಲೂಕಿನಲ್ಲಿ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ನಗರದ ನಂದಿ ಪೆಟ್ರೋಲ್ ಪಂಪ್, ಖಾದಿ ಭಂಡಾರ ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದಿದ್ದು, ಇದರಿಂದ ಬೈಕ್, ಆಟೋಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಔರಾದ ತಾಲೂಕಿನಲ್ಲಿ ಭಾರಿ ಗಾಳಿ ಬೀಸಿದ್ದು, ಮನೆಗಳ ಮೇಲಿನ ಪತ್ರಾಸ್ಗಳು ಹಾರಿ ಹೋಗಿದ್ದರೆ, ಸಿಂದೋಲ ಗ್ರಾಮದ ಹೊಲವೊಂದರಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಹಣಮಂರ ಶೇರಿಕಾರ (34) ಮೃತಪಟ್ಟ ವ್ಯಕ್ತಿ. ಮಾರಜೋಡಿ ಗ್ರಾಮದಲ್ಲಿ ರೈತ ಹೊಲದಲ್ಲಿ ಕಟ್ಟಿದ್ದ ಎರಡು ಆಕಳುಗಳು ಸಿಡಿಲಿಗೆ ಬಲಿಯಾಗಿವೆ. ಹುಮನಾಬಾದ ತಾಲೂಕಿನಲ್ಲಿ ಸಂಜೆ ಹೊತ್ತು ಬಿರುಗಾಳಿಯೊಂದಿಗೆ ತುಂತುರು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’