ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕಾದುದು ಕರ್ತವ್ಯ: ಕೃಷ್ಣ ಭಟ್‌


Team Udayavani, May 28, 2018, 6:00 AM IST

26bdk04.jpg

ಬದಿಯಡ್ಕ:ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಪ್ರಾರಂಭವಾಗುವುದರಿಂದ ಅವುಗಳನ್ನು ತಡೆಗಟ್ಟಲು ಬೇಕಾದ ಅಗತ್ಯದ ಸ್ವತ್ಛತಾ ಕಾರ್ಯವನ್ನು ಕೈಗೊಳ್ಳಬೇಕಾದುದು ಕರ್ತವ್ಯವಾಗಿದೆ. ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆಯ ಪ್ರಜ್ಞೆಯನ್ನು ಜನರಿಗೆ ನೀಡಿ ಎದುರಾಗಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಯುವಂತೆ ಮಾಡಬಹುದು ಎಂದು ಬದಿಯಡ್ಕ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೆ.ಎನ್‌ ಕೃಷ್ಣ ಭಟ್‌ ಅವರು ಹೇಳಿದರು.

ಈ ಸಂದರ್ಭದಲ್ಲಿ ಅವರು ಬಸ್ಸು ನಿಲ್ದಾಣದಲ್ಲಿ ಮಲಗಿ ವಿಶ್ರಾಂತಿ ಪಡೆಯುತ್ತಿ ದ್ದವರನ್ನು ಎಚ್ಚರಿಸಿ ಪ್ರಯಾಣಿಕರಿಗೆ ತೊಂದರೆ ಉಂಟುಮಾಡಬಾರದೆಂದು ಎಚ್ಚರಿಕೆ ನೀಡಿದರು.

ಬದಿಯಡ್ಕ ಗ್ರಾಮ ಪಂಚಾಯತ್‌,ಆರೋಗ್ಯ ಇಲಾಖೆ, ಕುಟುಂಬಶ್ರೀ ವತಿಯಿಂದ ಬದಿಯಡ್ಕ ಬಸ್‌ ನಿಲ್ದಾಣದ ಪರಿಸರವನ್ನು ಶುಚಿಗೊಳಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾ ಡಿದರು.ಪ್ರತಿಯೊಬ್ಬರೂ ಶುಚಿತ್ವಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡಿದರೆ ರೋಗ ಬಾರದಂತೆ ತಡೆಗಟ್ಟಬಹುದು. ಎಂದು ಅವರು ಅಭಿಪ್ರಾಯಪಟ್ಟರು.  ಪಂಚಾಯತ್‌ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ವಿಶ್ವನಾಥ ಪ್ರಭು,ಸಿರಾಜ್‌ ಮುಹಮ್ಮದ್‌, ರಾಜೇಶ್ವರಿ,ಆರೋಗ್ಯ ಇಲಾಖೆಯ ಅಧಿಕಾರಿ ದೇವಿ ಜಾಕ್ಷನ್‌, ಪಂಚಾಯತ್‌ ಸಿಡಿ.ಎಸ್‌ ಅಧ್ಯಕ್ಷೆ ಸುಧಾ ಜಯರಾಂ, ಕುಟುಂಬಶ್ರೀ ಸದಸ್ಯೆಯರು,ಆರೋಗ್ಯ ಇಲಾಖೆಯ ಅಧಿಕಾರಿಗಳು ಜೊತೆಗಿದ್ದರು.

ಅನೇಕ ವರ್ಷಗಳಿಂದ ಬದಿಯಡ್ಕ ಬಸ್‌ ನಿಲ್ದಾಣದಲ್ಲಿ ಪತ್ರಿಕೆ ವಿತರಿಸುತ್ತಿರುವ ಬಾಲಕೃಷ್ಣ ಪೊಯ್ಯಕಂಡ ಬಸ್‌ ನಿಲ್ದಾಣವನ್ನು ಶುಚಿಗೊಳಿಸುತ್ತಿದ್ದು ಅವರ ನಿಸ್ವಾರ್ಥ ಸೇವೆ ಹಾಗೂ ಕಾಳಜಿ ಶ್ಲಾಘನೀಯ. ಎಲ್ಲರಿಗೂ ಪರಿಚಿರಾಗಿರುವ ಬಾಲಕೃಷ್ಣ ಅವರು ಪ್ರತೀ ದಿನ ಬೆಳಗ್ಗೆ ಜಾವ 4.30ಕ್ಕೆ ಬದಿಯಡ್ಕ ಬಸ್‌ ನಿಲ್ದಾಣಕ್ಕೆ ಆಗಮಿಸಿ ಪತ್ರಿಕೆಯನ್ನು ಓದುಗರಿಗೆ ನೀಡಲು ಸರಿಯಾಗಿ ಜೋಡಿಸಿಡುತ್ತಾರೆ. ಮತ್ತೆ ಮೊದಲ ಬಸ್‌ ಬರುವುದರೊಳಗೆ ಬಸ್‌ ನಿಲ್ದಾಣದ ಒಳಭಾಗ,ಪ್ರಯಾಣಿಕರು ನಿಲ್ಲುವ ರಸ್ತೆಯ ಬದಿಯಲ್ಲಿದ್ದ ಕಸವನ್ನು ಗುಡಿಸಿ ಸ್ವತ್ಛಗೊಳಿಸುತ್ತಾರೆ. ನಿಸ್ವಾರ್ಥ ಮನೋಭಾವದಿಂದ ತನ್ನ ಕಾಯಕದಲ್ಲಿ ಅವರು ಮಗ್ನನಾಗಿರುತ್ತಾರೆ.ಜನರು ಬಸ್‌ ನಿಲ್ದಾಣಕ್ಕೆ ಆಗಮಿಸುವ ಮೊದಲೇ ಅವರ ಕೆಲಸವನ್ನು ಮುಗಿಸಿ ಪತ್ರಿಕೆಯನ್ನು ವಿತರಿಸುವ ಕಾಯಕದಲ್ಲಿ ತೊಡಗುತ್ತಾರೆ.

ನೌಕರರಿಲಲ್ಲ 
ಬದಿಯಡ್ಕ ಗ್ರಾಮ ಪಂಚಾಯತ್‌ನಲ್ಲಿ ಪೇಟೆ ಶುಚಿತ್ವಕ್ಕೆ ನೌಕರರಿಲ್ಲದಿರುವುದೂ ತ್ಯಾಜ್ಯ ಹೆಚ್ಚಾಗಲು ಪ್ರಧಾನ ಕಾರಣವಾಗಿದೆ. ಪೇಟೆಯ ವಿವಿಧೆಡೆ ತ್ಯಾಜ್ಯದ ರಾಶಿ ತುಂಬಿದ್ದು ಮಳೆಗಾಲದಲ್ಲಿ ಇವುಗಳಲ್ಲಿ ನೀರುನಿಂತು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಬದಲಾಗುವುದು ನಿಸ್ಸಂಶಯ. ಎಲ್ಲೆಂದರಲ್ಲಿ ಪ್ಲಾಸ್ಟಿಕ್‌ ಚೀಲಗಳು ಹಾಗೂ ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿಸಿಟ್ಟ ತ್ಯಾಜ್ಯಗಳು ಮಾತ್ರವಲ್ಲದೆ ಕೊಳೆತ ಮಾಂಸದ ತ್ಯಾಜ್ಯಗಳನ್ನೂ ರಸ್ತೆಬದಿಯಲ್ಲಿ ಎಸೆಯುತ್ತಿರುವುದು ಸಾಂಕ್ರಾಮಿಕ ರೋಗಗಳನ್ನು ಆಹ್ವಾನಿಸಿದಂತೆಯೇ ಸರಿ.
– ಬಾಲಕೃಷ್ಣ
ನಿಲ್ದಾಣ ಶುಚಿಗೊಳಿಸುವ ಪತ್ರಿಕಾ ವಿತರಕ 

ಸ್ವಚ್ಛತೆ ಕೊರತೆ ಸಮಸ್ಯೆಗಕಾರಣ
ಮಾರಕ ರೋಗಗಳು ಸಾಮಾನ್ಯ ಜನರನ್ನು ಬಲಿತೆಗೆಯುತ್ತಿರುವುದು ಪ್ರತಿದಿನ ಕಂಡುಬರುತ್ತದೆ. ಶಿಸ್ತಿಲ್ಲದ ಆಹಾರ ಪದ್ಧತಿ ಹಾಗೂ ಜೀವನ ಕ್ರಮ ಹಾಗೂ ಸ್ವತ್ಛತೆಯ ಕೊರತೆ ಈ ಸಮಸ್ಯೆಗೆ ಮುಖ್ಯ ಕಾರಣ. ಪ್ರತಿಯೊಬ್ಬರೂ ಮನೆ ಹಾಗೂ ಪರಿಸರವದ ಶುಚಿತ್ವಕ್ಕೆ ಆದ್ಯತೆ ನೀಡಿ ಜಾಗ್ರತೆವಹಿಸಬೇಕು. 
– ಶ್ಯಾಮ್‌ಪ್ರಸಾದ್‌ಮಾನ್ಯ (ಆರೋಗ್ಯ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ)ಸದಸ್ಯರು, ವಳಕಾಡು ವಾರ್ಡ್‌

ಸ್ವಚ್ಛತೆ ಕಾಪಾಡುವುದ  ನಮ್ಮೆಲ್ಲರ ಕರ್ತವ್ಯ
ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡುವುದು ಕರ್ತವ್ಯ. ಉಪಯೋಗ ಶೂನ್ಯ ವಸ್ತುಗಳಾದ ಪ್ಲಾಸ್ಟಿಕ್‌ ಚೀಲಗಳು, ಮಕ್ಕಳ ಆಟಿಕೆಗಳೂ ಸೇರಿದಂತೆ ಮಣ್ಣಿನಲ್ಲಿ ಸೇರದೆ ನೀರು ಕಟ್ಟಿನಿಂತು ರೋಗಾಣುಗಳ ಹುಟ್ಟಿಗೆ ಕಾರಣವಾಗುವ ವಸುಗಳ ಬಗ್ಗೆ ಜಾಗ್ರತೆವಹಿಸಬೇಕು. ಕಂಡಕಂಡಲ್ಲಿ ಎಸೆಯದೆ ಸೂಕ್ತವಾದ ರೀತಿಯಲ್ಲಿ ಮಾಲಿನ್ಯ ಸಂಸ್ಕರಣೆ ಮಾಡಬೇಕು. 
– ಕೆ.ಎನ್‌. ಕೃಷ್ಣ ಭಟ್‌
ಅಧ್ಯಕ್ಷರು  ಬದಿಯಡ್ಕ ಗ್ರಾ.ಪಂ.

– ಅಖೀಲೇಶ್‌ ನಗುಮುಗಂ 

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.