ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ


Team Udayavani, May 28, 2018, 7:00 AM IST

depression.jpg

ಬೆಂಗಳೂರು/ ಮಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರಾರಂಭಕ್ಕೆ ದಿನಗಣನೆ ಶುರುವಾಗಿರಬೇಕಾದರೆ, ಅರಬ್ಬಿ
ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ಒಂದು ವೇಳೆ ಅದರ ಸಾಂಧ್ರತೆ ಜಾಸ್ತಿಯಾದರೆ, ಒಂದೆರಡು
ದಿನದೊಳಗೆ ಕರಾವಳಿಯಲ್ಲಿ ಮತ್ತೂಂದು ಚಂಡಮಾರುತ ಸೃಷ್ಟಿಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ
ಇಲಾಖೆ ಹೇಳಿದೆ.

ಸದ್ಯದ ಮಾಹಿತಿ ಪ್ರಕಾರ, ಈ ಬಾರಿಯ ಮುಂಗಾರು ಮೇ 29ರಂದೇ ಕೇರಳ ಕರಾವಳಿ ತೀರವನ್ನು ಪ್ರವೇಶಿಸಲಿದೆ. ಅಷ್ಟೇ ಅಲ್ಲ, ಈ ಮುಂಗಾರು ಮಾರುತ ರಾಜ್ಯದ ಕರಾವಳಿ ಭಾಗವನ್ನು ಕೂಡ ಆದಷ್ಟು ಬೇಗ ಪ್ರವೇಶಿಸುವ ಮೂಲಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನಿರೀಕ್ಷೆಯಂತೆ ಮಳೆಗಾಲ ಪ್ರಾರಂಭವಾಗುವ ಮುನ್ಸೂಚನೆಯಿದೆ. 

ಬಂಗಾಳಕೊಲ್ಲಿಯಲ್ಲಿ ಈಗಾಗಲೇ ದಟ್ಟ ಮಾರುತ ಸೃಷ್ಟಿಯಾಗಿದ್ದು, ಮುಂಗಾರು ಪ್ರಾರಂಭದಲ್ಲೇ ಉತ್ತಮ ಮಳೆ ಬೀಳುವ ಸಾಧ್ಯತೆಯಿದೆ.

ಮುಂಗಾರು ಕಳೆದ ವರ್ಷ ಕೇರಳಕ್ಕೆ ಮೇ 30ರಂದು ಪ್ರವೇಶವಾಗಿತ್ತು. ಆದರೆ, ಕೇರಳ ತೀರ ಪ್ರವೇಶಿಸಿದ ನಂತರ ದುರ್ಬಲಗೊಂಡಿತ್ತು. ಇದರ ಪರಿಣಾಮ, ರಾಜ್ಯದಲ್ಲಿ ಒಂದು ವಾರದ ಬಳಿಕ ಅಂದರೆ ಜೂ.7ಕ್ಕೆ ಪ್ರವೇಶ ಪಡೆದು, ಜೂ.12ಕ್ಕೆ ರಾಜ್ಯಾದ್ಯಂತ ಮಳೆಗಾಲ ಆರಂಭವಾಗಿತ್ತು.ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮುಂಗಾರು ವಾಡಿಕೆಯಂತೆ ಮೇ 25ರಂದು ಅಂಡಮಾನ್‌ ದಕ್ಷಿಣ ಭಾಗಕ್ಕೆ ಅಪ್ಪಳಿಸಿದೆ.

6 ತಿಂಗಳಲ್ಲಿ ಮೂರು ಚಂಡಮಾರುತ: ಕಳೆದ ವರ್ಷದ ಡಿಸೆಂಬರ್‌ ತಿಂಗಳಿನಿಂದ ಮೇ ತಿಂಗಳವರೆಗೆ ರಾಜ್ಯದ
ಪಾಲಿಗೆ ಒಟ್ಟು ಮೂರು ಪ್ರಬಲ ಚಂಡಮಾರುತ ಪರಿಣಾಮ ಬೀರಿದೆ. ಡಿಸೆಂಬರ್‌ನಲ್ಲಿ “ಓಖೀ’ ಚಂಡಮಾರುತ
ದಕ್ಷಿಣ ಭಾರತದ ಕರಾವಳಿಯನ್ನು ಅಪ್ಪಳಿಸಿತ್ತು. ಇದಾದ ಬಳಿಕ ಮೇ ತಿಂಗಳಿನಲ್ಲಿ “ಸಾಗರ್‌’ ಚಂಡಮಾರುತದ
ಪರಿಣಾಮದಿಂದಾಗಿ ಕರಾವಳಿ ತೀರದಲ್ಲಿ ಗಾಳಿ, ಮಳೆಯಾಗಿತ್ತು. ಇದಾದ ಕೆಲವೇ ದಿನದಲ್ಲಿ “ಮೆಕು°’ ಹೆಸರಿನ
ಮತ್ತೂಂದು ಪ್ರಬಲ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿ ಈಗಾಗಲೇ ಒಮಾನ್‌ ದೇಶದಲ್ಲಿ ಸಾಕಷ್ಟು
ನಷ್ಟ-ಹಾನಿಯುಂಟು ಮಾಡಿದೆ.

ಸಿಡಿಲು ಬಡಿದು ವ್ಯಕ್ತಿ ಸಾವು
ರಾಜ್ಯದ ಕೆಲವೆಡೆ ಭಾನುವಾರವೂ ಮಳೆಯಾಗಿದೆ. ಧಾರವಾಡ ಸಮೀಪದ ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಶಿವಾಜಿ ನಾಗಪ್ಪ ಸಾಗ್ರೇಕರ (45) ಎಂಬುವರು ಮೃತಪಟ್ಟಿದ್ದಾರೆ.

ಮಂಗಳೂರಿನ ನೆಹರು ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಐಪಿಲ್‌ ಫೈನಲ್‌ ಪಂದ್ಯದ ನೇರ ಪ್ರಸಾರ ವೀಕ್ಷಿಸಲು ತೆರಳಿದ್ದ ಮಂಗಳೂರು ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಸಿಬ್ಬಂದಿ ಸಿದ್ದಪ್ಪಜಿ. (23) ಅವರು ಸಿಡಿಲು ಬಡಿದು ಗಾಯಗೊಂಡಿದ್ದಾರೆ.

ಮುಂಗಾರು ಆಗಮಿಸುವುದಕ್ಕೆ ಮುಂಚಿತವಾಗಿ ಅರಬ್ಬಿ ಸಮುದ್ರದಲ್ಲಿ ಸ್ವಲ್ಪ ಮಟ್ಟಿನ ವಾಯುಭಾರ ಕುಸಿತ 
ಉಂಟಾಗುತ್ತದೆ. ಇದರಿಂದಾಗಿ ಸದ್ಯ ಉತ್ತಮ ಮಳೆಯಾಗುತ್ತಿದೆ. ಇದು ತೀವ್ರಗತಿಯಲ್ಲಾದರೆ ಮುಂದಿನ ದಿನಗಳಲ್ಲಿ ಚಂಡ ಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆಯೂ ಇದೆ.

– ಗವಾಸ್ಕರ್‌ ಸಾಂಗ, ರಾಜ್ಯ
ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.