ತಾಲೂಕು ಕೇಂದ್ರ ಬೆಳ್ತಂಗಡಿಯಲ್ಲಿ ಚರಂಡಿ ಅವ್ಯವಸ್ಥೆ


Team Udayavani, May 28, 2018, 5:45 AM IST

drainage-27-5.jpg

ಬೆಳ್ತಂಗಡಿ: ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮುನ್ನವೇ ಉತ್ತಮ ಮಳೆಯಾಗುತ್ತಿದೆ. ಆದರೆ ತಾಲೂಕು ಕೇಂದ್ರ ಬೆಳ್ತಂಗಡಿ ಸಹಿತ ಎಲ್ಲೂ ಚರಂಡಿ ನಿರ್ವಹಣೆ ಸಮರ್ಪಕವಾಗಿ ಮಾಡದಿರುವುದರಿಂದ ಮಳೆ ನೀರು ರಸ್ತೆಯಲ್ಲಿ ಹರಿದು ಸಮಸ್ಯೆ ಉಂಟು ಮಾಡುತ್ತಿದೆ. ತಾಲೂಕಿನಾದ್ಯಂತ ಪ್ರತಿದಿನ ಉತ್ತಮ ಮಳೆಯಾಗುತ್ತಿದೆ. ಹತ್ತು ದಿನಗಳೊಳಗಾಗಿ ಮುಂಗಾರು ಪ್ರವೇಶಿಸುವ ಮುನ್ಸೂಚನೆಯನ್ನೂ ಮೊದಲೇ ನೀಡಲಾಗಿದೆ. ಆದರೆ ತಾಲೂಕಿನ ಚರಂಡಿಗಳ ನಿರ್ವಹಣೆ ಇನ್ನೂ ನಡೆದಿಲ್ಲ. ಹೆದ್ದಾರಿಯಲ್ಲೇ ನೀರು ಹರಿಯುವುದನ್ನು ಜನಪ್ರತಿನಿಧಿಗಳು ಗಮನಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೆಸರಿನಿಂದ ಪಾದಚಾರಿಗಳು ಸಮರ್ಪಕವಾಗಿ ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.


ರಸ್ತೆಯಲ್ಲೇ ಮಳೆ ನೀರು

ರಾ.ಹೆ. ತಾಲೂಕಿನ ಕೇಂದ್ರಭಾಗದಲ್ಲಿ ಹಾದುಹೋಗಿದ್ದರೂ ಯಾವುದೇ ನಿರ್ವಹಣೆ ಕಾರ್ಯ ಮಾಡಿಲ್ಲ. ಮುಖ್ಯವಾಗಿ ಈ ರಸ್ತೆಗೆ ಸಮರ್ಪಕ ರಸ್ತೆ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ರಸ್ತೆಯಲ್ಲೇ ಮಳೆನೀರು ಹರಿದು ಹೋಗುತ್ತಿದೆ. ಚರಂಡಿ ನೆಪ ಮಾತ್ರಕ್ಕೆ ಇದ್ದು, ಮಳೆನೀರು ಮಾತ್ರ ರಸ್ತೆಯ ಮೇಲೆ ಹರಿದು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರ ಗಮನ ಸೆಳೆದಿದ್ದರೂ ಪರಿಣಾಮ ಮಾತ್ರ ಶೂನ್ಯ ಎಂಬಂತಾಗಿದೆ. ಕೆಲವೆಡೆ ಹೊಂಡಗಳಲ್ಲಿ ಮಳೆನೀರು ನಿಂತು ಸಾಂಕ್ರಾಮಿಕ ರೋಗಗಳ ಮೂಲವಾಗಿ ಪರಿಣಮಿಸುತ್ತಿದೆ. ಗುರುವಾಯನಕೆರೆಯಿಂದ ಆರಂಭವಾಗಿ ಉಜಿರೆವರೆಗೂ ಇಂತಹ ಸಮಸ್ಯೆ ಸಾಮಾನ್ಯವಾಗಿದೆ. ಇದರಿಂದ ಜನತೆಗೆ ಮುಕ್ತಿ ದೊರೆಯಬೇಕಾದ ಅಗತ್ಯತೆ ಇದೆ.

ವಾಹನ ಸವಾರರಿಗೆ ಅಪಾಯ
ರಸ್ತೆ ಬದಿಗಳಲ್ಲಿ ಕೆಸರು ನೀರು ನಿಲ್ಲುವುದರಿಂದ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.  ಪಟ್ಟಣದ ಕೆಲವು ಪ್ರದೇಶಗಳಲ್ಲಿ ಹೊಂಡ/ಅಂಚುಗಳು ಸೃಷ್ಟಿಯಾಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ನಿರ್ವಹಣೆಯಾಗಬೇಕಿದೆ
ಹೆದ್ದಾರಿಯ ಇಕ್ಕೆಲಗಳಲ್ಲಿ ಚರಂಡಿ ಇದ್ದರೂ ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದರಿಂದ ಸಮಸ್ಯೆ ಉಲ್ಬಣಿಸಿದೆ. ನಗರ ಪ್ರದೇಶದಲ್ಲೇ ಚರಂಡಿಗಳಲ್ಲಿ ಗಿಡಗಂಟಿ ಬೆಳೆದು ನೀರು ಹರಿದು ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಭಾಗಗಳಲ್ಲಿ ಮಳೆನೀರು ಚರಂಡಿಗೆ ಸೇರಲು ಸಮರ್ಪಕ ವ್ಯವಸ್ಥೆ ಮಾಡದಿರುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಖಾಸಗಿಯವರು ಮಾರ್ಗ ನಿರ್ಮಿಸುವಾಗ ಸಮರ್ಪಕ ಕೊಳವೆ ಅಥವಾ ಮೋರಿ ರಚಿಸದೆ ನೀರು ಹರಿಯುವ ದಿಕ್ಕು ಬದಲಾಗುತ್ತಿದೆ. ಚರಂಡಿಯನ್ನು ದುರಸ್ತಿಗೊಳಿಸಿ, ಮಳೆ ನೀರು  ಹರಿಯಲು ಸಣ್ಣ ಬದುಗಳ ವ್ಯವಸ್ಥೆ ಮಾಡಿದಲ್ಲಿ ಸಮಸ್ಯೆ ಪರಿಹರಿಸಬಹುದು.

ಎರಡು ದಿನಗಳಲ್ಲಿ ಕಾಮಗಾರಿ
ವಿಧಾನ ಪರಿಷತ್‌ ಚುನಾವಣೆ ಇರುವುದರಿಂದ ನೀತಿಸಂಹಿತೆಯಿಂದ ಕಾಮಗಾರಿ ನಡೆಸಲು ಅಡ್ಡಿಯಾಗಿದೆ. ಆದರೂ ಚರಂಡಿ ನಿರ್ವಹಣೆಗೆ ಈಗಾಗಲೇ ಎಂಜಿನಿಯರ್‌ ಗಳಿಗೆ ಸೂಚಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಎರಡು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.
– ಮುಗುಳಿ ನಾರಾಯಣ ರಾವ್‌, ಪಟ್ಟಣ ಪಂಚಾಯತ್‌ ಅಧ್ಯಕ್ಷರು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.