ಅವೈಜ್ಞಾನಿಕ ಕಾಮಗಾರಿ ಮರಗಳ ಮಾರಣಹೋಮ!


Team Udayavani, May 28, 2018, 5:50 AM IST

maranahoma-27-5.jpg

ಪುತ್ತೂರು: ಮಾಣಿ- ಮೈಸೂರು ಹೆದ್ದಾರಿ ಕಾಮಗಾರಿ, ನಗರಸಭೆ ವ್ಯಾಪ್ತಿಯ ರಸ್ತೆ ವಿಸ್ತರಣೆ, ಗ್ರಾಮಾಂತರ ಭಾಗದ ರಸ್ತೆ ಅಭಿವೃದ್ಧಿ… ಇಂತಹ ಕಾಮಗಾರಿಗಳನ್ನು ಅವೈಜ್ಞಾನಿಕವಾಗಿ ಮಾಡುವುದರಿಂದ ಮರಗಳ ಮಾರಣ ಹೋಮ ಸಂಭವಿಸುವ ಭೀತಿ ಸೃಷ್ಟಿಯಾಗಿದೆ. ಪುತ್ತೂರು- ಸುಳ್ಯ ಸಹಿತ ಜಿಲ್ಲೆಯ ಗ್ರಾಮಾಂತರ ತಾಲೂಕುಗಳ ಹೆದ್ದಾರಿಗಳು ಗುಡ್ಡಗಾಡು ಪ್ರದೇಶ, ಅರಣ್ಯದ ನಡುವೆ ಸಾಗುತ್ತವೆ. ರಸ್ತೆ ವಿಸ್ತರಣೆ ಸಂದರ್ಭ ಕೆಲ ಮರಗಳನ್ನು ತೆರವು ಮಾಡುವುದು ಅನಿವಾರ್ಯ. ನೇರವಾಗಿ ಗುಡ್ಡ ಸವರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಗುಡ್ಡದ ಅಂಚಿನಲ್ಲಿರುವ ಮರಗಳು ಮಳೆ ರಭಸಕ್ಕೆ ರಸ್ತೆಗೆ ಉರುಳಿ ಬೀಳುವಂತಾಗಿವೆ.

ಸವಕಳಿ ತಡೆಗಟ್ಟುವ ದೃಷ್ಟಿಯಿಂದ ಗುಡ್ಡವನ್ನು ಜಾರು ಆಕೃತಿಯಲ್ಲಿ ತುಂಡರಿಸಬೇಕು. ನೇರವಾಗಿ ಗುಡ್ಡವನ್ನು ಸವರುವುದರಿಂದ, ಗುಡ್ಡ ಕುಸಿಯುತ್ತಾ ಬರುತ್ತವೆ. ಅಂಚಿನಲ್ಲಿರುವ ಮರಗಳು ರಸ್ತೆಗೆ ಅಡ್ಡ ಬೀಳುತ್ತವೆ. ಜೀವ ಹಾನಿ, ಆಸ್ತಿ ಹಾನಿ ಸಂಭವಿಸುವ ಅಪಾಯವೂ ಹೆಚ್ಚು. ಮಾಣಿ- ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲಾಗಿದೆ. ಅಲ್ಲಲ್ಲಿ ಗುಡ್ಡಗಳನ್ನು ಸವರುವ ಕೆಲಸವೂ ನಡೆಸಲಾಗಿದೆ. ಬಹುತೇಕ ಗ್ರಾಮಾಂತರ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಎಂಜಿನಿಯರ್‌ ಗಳು ಅವೈಜ್ಞಾನಿಕವಾಗಿ ಗುಡ್ಡ ಸವರಿದ್ದರಿಂದ ಸಮಸ್ಯೆ ಸೃಷ್ಟಿಯಾಗುವ ಭೀತಿ ಎದುರಾಗಿದೆ.

ಸಾಗರ್‌ ಎಫೆಕ್ಟ್ ಭೀತಿ!
ಸಾಗರ್‌ ಚಂಡಮಾರುತದ ಪರಿಣಾಮ ಮಳೆ ಶುರುವಾಗಿದೆ. ಗುಡುಗು- ಮಳೆಯ ಜತೆಗೆ ವಿಪರೀತ ಗಾಳಿ ತಾಂಡವ ಆಡುತ್ತಿದೆ. ಇದರ ಪ್ರಭಾವಕ್ಕೆ ಹಲವು ಮರಗಳು ಧರಾಶಾಹಿ ಆಗುವ ಹಂತಕ್ಕೆ ತಲುಪಿವೆ. ಹಲವು ಮರಗಳು ಆಗಲೇ ರಸ್ತೆಗೆ ಉರುಳಿ ಬಿದ್ದಿವೆ. ಇದನ್ನು ತೆರವು ಮಾಡುವ ಜತೆಗೆ, ಅಪಾಯ ಎದುರಾಗಲಿರುವ ಮರಗಳ ಬಗ್ಗೆಯೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ. ಮಳೆಗಾಲಕ್ಕೆ ಮೊದಲೇ ಈ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ಚುನಾವಣಾ ಗಡಿಬಿಡಿಯಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ.

ಗುಡ್ಡದ ಮಣ್ಣು ರಸ್ತೆಗೆ
ಗ್ರಾಮಾಂತರ ಭಾಗದಲ್ಲಿ ಗುಡ್ಡದ ಮಣ್ಣು ಮಳೆ ನೀರಿನೊಂದಿಗೆ ರಸ್ತೆಗೆ ಬರುತ್ತಿದೆ. ಸಂಪ್ಯದ ಆರ್ಯಾಪು ಹಿ.ಪ್ರಾ. ಶಾಲಾ ಮುಂಭಾಗದ ಹೆದ್ದಾರಿ ತೋಡಿನಂತಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಸವರಿದ್ದು, ರಸ್ತೆ ಬದಿಯಲ್ಲಿ ಮಣ್ಣು ಹಾಕಿದ್ದು, ಇದ್ದರೂ ಬಳಕೆಗೆ ಬಾರದ ಚರಂಡಿ ಎಲ್ಲವೂ ಸಮಸ್ಯೆಗೆ ಕಾರಣ. ಮೊದಲ ಮಳೆಗೆ ಇಷ್ಟು ಸಮಸ್ಯೆ. ಮುಂಗಾರು ಪ್ರವೇಶಿಸುವಾಗ ಹೇಗೋ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿದ್ದ ಮೇಲಷ್ಟೇ…
ಮಾರ್ಚ್‌ – ಎಪ್ರಿಲ್‌ ಹೊತ್ತಿಗೆ ಅಪಾಯಕಾರಿ ಮರಗಳ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸುತ್ತಿದ್ದರೆ, ಇಷ್ಟರಲ್ಲಿ ಸೂಕ್ತ ವ್ಯವಸ್ಥೆ ಆಗಿರುತ್ತಿತ್ತು. ಮಳೆ ಬಂದ ಮೇಲೆ ಕೆಲ ಮರಗಳನ್ನು ಅಪಾಯಕಾರಿ ಎಂದು ಗುರುತಿಸಿ ಹೇಳುತ್ತಿದ್ದಾರೆ. ಇದರಿಂದ ನಾವೇನೂ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮರ ಬಿದ್ದ ಮೇಲಷ್ಟೇ ತೆರವು ಮಾಡುವ ಕೆಲಸ ಮಾಡಬೇಕು. ಇದನ್ನು ಪ್ರಕೃತಿ ವಿಕೋಪದಲ್ಲಿ ಸಂಭವಿಸಿದ ಘಟನೆ ಎಂದಷ್ಟೇ ನಾವು ಪರಿಗಣಿಸುತ್ತೇವೆ.
– ವಿ.ಪಿ. ಕಾರ್ಯಪ್ಪ, ವಲಯ ಅರಣ್ಯಾಧಿಕಾರಿ, ಪುತ್ತೂರು

— ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.